ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸನಗರ ಕೃಷಿ ಉತ್ಪನ್ನ ಮಾರುಕಟ್ಟೆ ವಿಲೀನಕ್ಕೆ ವಿರೋಧ

Last Updated 25 ಮೇ 2022, 4:13 IST
ಅಕ್ಷರ ಗಾತ್ರ

ರಿಪ್ಪನ್‌ಪೇಟೆ: 2005–06ರಲ್ಲಿ ಅಸ್ತಿತ್ವಕ್ಕೆ ಬಂದಿದ್ದ ಹೊಸನಗರ ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ಸಾಗರದ ಎಪಿಎಂಸಿಯೊಂದಿಗೆ ವಿಲೀನಗೊಳಿಸುವ ಸರ್ಕಾರದ ಅವೈಜ್ಞಾನಿಕ ಕ್ರಮ ವಿರೋಧಿಸಿ ರಾಜ್ಯ ಜೆಡಿಎಸ್ ಮಾಜಿ ಪ್ರಧಾನ ಕಾರ್ಯದರ್ಶಿ ಅರ್.ಎ.ಚಾಬುಸಾಬ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎನ್.ವರ್ತೇಶ್ ನೇತೃತ್ವದಲ್ಲಿ ಪ್ರತಿಭಟಿಸಿ ನಾಡಕಚೇರಿಗೆ ಮನವಿ ಸಲ್ಲಿಸಲಾಯಿತು.

ಹೊಸನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಸ್ತಿತ್ವಕ್ಕೆ ಬಂದ ಮೇಲೆ ಕೃಷಿ ಮಾರುಕಟ್ಟೆಯಲ್ಲಿಯೇ ನ್ಯಾಯಯುತ ಬೆಲೆಯಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿದೆ. ವಾರ್ಷಿಕ ಅಂದಾಜು ಸರಾಸರಿ ₹ 5 ಕೋಟಿಯಿಂದ ₹ 6 ಕೋಟಿಗೂ ಅಧಿಕ ಆದಾಯ ಸರ್ಕಾರಕ್ಕೆ ಜಮಾ ಆಗುತ್ತಿದೆ. ಸುವ್ಯವಸ್ಥೆಯ ಮಾರುಕಟ್ಟೆ ಪ್ರಾಂಗಣಗಳು ದಾಸ್ತಾನು ಮಳಿಗೆಗಳಿದ್ದು, ಸರ್ವಕಾಲಕ್ಕೂ ಶೇಖರಿಸಿ ಸಂರಕ್ಷಿಸಬಲ್ಲ ಉನ್ನತ ಮಟ್ಟದ ತಾಂತ್ರಿಕ ಗೋದಾಮು ಹೊಂದಿದೆ ಎಂದರು.

ಶಿವಮೊಗ್ಗ, ಸಾಗರ, ತೀರ್ಥಹಳ್ಳಿ, ಹೊಸನಗರ ಮುಂತಾದ ಊರುಗಳಿಗೆ ಸಂಪರ್ಕ ಕಲ್ಪಿಸುವ ಹೋಬಳಿ ಕೇಂದ್ರವಾದ ರಿಪ್ಪನ್‌ಪೇಟೆಯಲ್ಲೂ ಅತ್ಯಾಧುನಿಕ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣ, ಉನ್ನತ ಶ್ರೇಣಿಯ ತಾಂತ್ರಿಕ ಗೋದಾಮುಗಳು ಹಾಗೂ ಆಹಾರ ಪದಾರ್ಥಗಳು ಕೆಡದಂತೆ ಇಡುವ ಶೈತ್ಯಾಗಾರ ಘಟಕಗಳು ಇರುವುದರಿಂದ ಈ ಭಾಗದ ರೈತರಿಗೆ ಅನುಕೂಲಕವಾಗಿದೆ ಎಂದು ಪ್ರತಿಭಟನಕಾರರು ಪ್ರತಿಪಾದಿಸಿದರು.

ರೈತರ ಹಿತಕ್ಕೆ ಧಕ್ಕೆ ತರುವ ಈ ಯೋಜನೆಯನ್ನು ಸರ್ಕಾರ ತಕ್ಷಣವೇ ಕೈಬಿಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು. ಜೆಡಿಎಸ್ ಮುಖಂಡ ಜಿ.ಎಸ್.ವರದರಾಜ್, ಜನಪರ ವೇದಿಕೆ ಅಧ್ಯಕ್ಷ ಆರ್.ಎನ್.ಮಂಜುನಾಥ, ಹೋರಾಟಗಾರ ಟಿ.ಆರ್.ಕೃಷ್ಣಪ್ಪ, ಮಂಜೋಜಿರಾವ್, ದೂನ ಕುಮಾರ, ಮಂಜುನಾಥ ಆಚಾರ್ ನೆವಟೂರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT