ಪ್ರಸಕ್ತ ಸಾಲಿನಲ್ಲಿ ‘ನವೀನ ವಿಧಾನಗಳ ಬಳಸೋಣ, ಮಲೇರಿಯಾ ಕಡಿಮೆ ಮಾಡಿ ಜೀವ ಉಳಿಸೋಣ’ ಎಂಬ ಘೋಷಣೆಯಡಿ ಮಲೇರಿಯಾ ದಿನಾಚರಣೆ ಆಚರಿಸಲಾಗುತ್ತಿದೆ. ಮನುಷ್ಯ ಸೊಳ್ಳೆಯಿಂದ ಹರಡುವ ಮಲೇರಿಯಾ, ಚಿಕೂನ್ಗುನ್ಯಾ, ಮೆದುಳು ಜ್ವರ, ಆನೆಕಾಲು ಕಾಯಿಲೆಗಳಿಂದ ವಿಶ್ವದಾದ್ಯಂತ ಲಕ್ಷಾಂತರ ಸಂಖ್ಯೆಯ ಜನರಲ್ಲಿ ಜಾಗೃತಿ ಮೂಡಿಸುವುದರಿಂದ ರೋಗ ನಿಯಂತ್ರಣ ಸುಲಭ. ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುವುದರಿಂದ ಮನೆಯ ಸುತ್ತಮುತ್ತಲಿನಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಬಳಕೆಗೆ ಬಾರದ ಒಡೆದ ಮಡಕೆ, ಪ್ಲಾಸ್ಟಿಕ್ ವಸ್ತುಗಳನ್ನು ಹಾಗೂ ತೆಂಗಿನ ಚಿಪ್ಪು, ಬಾಟಲಿಗಳಲ್ಲಿ ಮಳೆಯ ನೀರು ನಿಲ್ಲದಂತೆ ವಿಲೇವಾರಿ ಮಾಡಬೇಕು ಎಂದು ಸಲಹೆ ನೀಡಿದರು.