<p><strong>ತೀರ್ಥಹಳ್ಳಿ</strong>: ಪಟ್ಟಣದಲ್ಲಿ ಅಕ್ರಮವಾಗಿ ಸರ್ಕಾರಿ ಖಾಲಿ ಜಾಗ ಒತ್ತುವರಿ ಮಾಡಿರುವವರನ್ನು ತೆರವುಗೊಳಿಸಲು ಸದಸ್ಯರು ಕೈಜೋಡಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ನೀಡಿದರು.</p>.<p>ಪಟ್ಟಣ ಪಂಚಾಯಿತಿಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ನಿವೇಶನ ರಹಿತ ಬಡವರಿಗೆ ಜಾಗ ಮಂಜೂರು ಮಾಡಬೇಕು. ಕೊಳೆಗೇರಿಗಳು ಹಾಗೂ ಪಟ್ಟಣ ಪಂಚಾಯಿತಿ ಅಡಿಯ ಖಾಲಿ ನಿವೇಶನದಲ್ಲಿ 50 ಮನೆ ಹೊಂದಿರುವ ಅಂತಸ್ತು ಕಟ್ಟಡ ನಿರ್ಮಾಣ ಮಾಡಿ ಹಂಚುವುದಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆರಗ ಸೂಚಿಸಿದರು.</p>.<p>‘ನೀರಿನ ಬಾಕಿ ಬಿಲ್ ಕಟ್ಟಿದರೂ ಖಾತೆ ಪುಸ್ತಕದಲ್ಲಿ ಕಡಿತಗೊಳ್ಳುತ್ತಿಲ್ಲ’ ಎಂದು ಸದಸ್ಯ ಸಂದೇಶ್ ಜವಳಿ ಆಕ್ಷೇಪ ವ್ಯಕ್ತಪಡಿಸಿದರು.</p>.<p>‘ಈ ಬಗ್ಗೆ ಅನೇಕ ಬಾರಿ ಪ್ರಸ್ತಾಪಿಸಿದರೂ ದೋಷ ತಿದ್ದುಪಡಿ ಆಗುತ್ತಿಲ್ಲ. ಮತದಾರರಿಗೆ ಉತ್ತರಿಸಲು ಸಾಧ್ಯವಾಗುತ್ತಿಲ್ಲ. 15 ದಿನಗಳೊಳಗೆ ಸಮಸ್ಯೆ ಬಗೆಹರಿಸದಿದ್ದರೆ ಪಂಚಾಯಿತಿ ಮುಂಭಾಗ ಧರಣಿ ನಡೆಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಸದಸ್ಯ ಯತಿರಾಜ್ ಮಾತನಾಡಿ, ‘ಪಟ್ಟಣ ಪಂಚಾಯಿತಿ ಖಾಲಿ ಜಾಗ ಒತ್ತುವರಿಯಾಗುತ್ತಿದೆ. ಆಡಳಿತ ಮಂಡಳಿ ಬಂದ ದಿನದಿಂದಲೂ ಈ ಬಗ್ಗೆ ಸಭೆಯ ಗಮನಕ್ಕೆ ತರಲಾಗುತ್ತಿದೆ. ಸದಸ್ಯರು ನೀಡುತ್ತಿರುವ ದೂರುಗಳಿಗೆ ಸಮರ್ಪಕ ಉತ್ತರ ಸಿಗುತ್ತಿಲ್ಲ’ ಎಂದು ಆರೋಪಿಸಿದರು.</p>.<p>ಸಭೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶಬನಮ್, ಉಪಾಧ್ಯಕ್ಷ ಜಯಪ್ರಕಾಶ್ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ, ಮುಖ್ಯಾಧಿಕಾರಿ ಕುರಿಯಾಕೋಸ್ ಮತ್ತು ಇತರ ಸದಸ್ಯರು, ಮುಖಂಡರು ಇದ್ದರು.</p>.<p class="Briefhead"><strong>ಪ.ಪಂ. ಮಳಿಗೆ ಹರಾಜು ಅಕ್ರಮ: ವರದಿ ಚರ್ಚೆ</strong></p>.<p>ಪಟ್ಟಣ ಪಂಚಾಯಿತಿ ಮಳಿಗೆ ಹರಾಜು ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಕುರಿತು ‘ಪ್ರಜಾವಾಣಿ’ ಪ್ರಕಟಿಸಿದ್ದ ವರದಿ ಸಭೆಯಲ್ಲಿ ಸದಸ್ಯರ ನಡುವೆ ಚರ್ಚೆಗೆ ಒಳಗಾಯಿತು.</p>.<p>ಬಡ ಅರ್ಹ ಉದ್ಯೋಗಿಗಳಿಗೆ ಅಕ್ರಮ ಹರಾಜು ಪ್ರಕ್ರಿಯೆಯಿಂದ ಅನ್ಯಾಯವಾಗಿದೆ. ಈ ಕುರಿತು ಸಾರ್ವಜಿನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಶ್ರೀಮಂತರ ಪರವಾಗಿ ಪಟ್ಟಣ ಪಂಚಾಯಿತಿ ವ್ಯವಸ್ಥೆ ನಿಂತರೆ ಬಡವರ ಪಾಡೇನು? ರಿಂಗ್ ಒಳಗೆ ರಿಂಗ್ ನಡೆದಿದೆ ಎಂದು ಸದಸ್ಯ ಸೊಪ್ಪುಗುಡ್ಡೆ ರಾಘವೇಂದ್ರ ಆಕ್ಷೇಪ ವ್ಯಕ್ತಪಡಿಸಿದರು.</p>.<p>ಮರು ಹರಾಜು ಪ್ರಕ್ರಿಯೆ ನಡೆಸಲು ಕ್ರಮ ಕೈಗೊಳ್ಳಬೇಕು ಎಂದುಸದಸ್ಯ ಯತಿರಾಜ್ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೀರ್ಥಹಳ್ಳಿ</strong>: ಪಟ್ಟಣದಲ್ಲಿ ಅಕ್ರಮವಾಗಿ ಸರ್ಕಾರಿ ಖಾಲಿ ಜಾಗ ಒತ್ತುವರಿ ಮಾಡಿರುವವರನ್ನು ತೆರವುಗೊಳಿಸಲು ಸದಸ್ಯರು ಕೈಜೋಡಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ನೀಡಿದರು.</p>.<p>ಪಟ್ಟಣ ಪಂಚಾಯಿತಿಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ನಿವೇಶನ ರಹಿತ ಬಡವರಿಗೆ ಜಾಗ ಮಂಜೂರು ಮಾಡಬೇಕು. ಕೊಳೆಗೇರಿಗಳು ಹಾಗೂ ಪಟ್ಟಣ ಪಂಚಾಯಿತಿ ಅಡಿಯ ಖಾಲಿ ನಿವೇಶನದಲ್ಲಿ 50 ಮನೆ ಹೊಂದಿರುವ ಅಂತಸ್ತು ಕಟ್ಟಡ ನಿರ್ಮಾಣ ಮಾಡಿ ಹಂಚುವುದಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆರಗ ಸೂಚಿಸಿದರು.</p>.<p>‘ನೀರಿನ ಬಾಕಿ ಬಿಲ್ ಕಟ್ಟಿದರೂ ಖಾತೆ ಪುಸ್ತಕದಲ್ಲಿ ಕಡಿತಗೊಳ್ಳುತ್ತಿಲ್ಲ’ ಎಂದು ಸದಸ್ಯ ಸಂದೇಶ್ ಜವಳಿ ಆಕ್ಷೇಪ ವ್ಯಕ್ತಪಡಿಸಿದರು.</p>.<p>‘ಈ ಬಗ್ಗೆ ಅನೇಕ ಬಾರಿ ಪ್ರಸ್ತಾಪಿಸಿದರೂ ದೋಷ ತಿದ್ದುಪಡಿ ಆಗುತ್ತಿಲ್ಲ. ಮತದಾರರಿಗೆ ಉತ್ತರಿಸಲು ಸಾಧ್ಯವಾಗುತ್ತಿಲ್ಲ. 15 ದಿನಗಳೊಳಗೆ ಸಮಸ್ಯೆ ಬಗೆಹರಿಸದಿದ್ದರೆ ಪಂಚಾಯಿತಿ ಮುಂಭಾಗ ಧರಣಿ ನಡೆಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಸದಸ್ಯ ಯತಿರಾಜ್ ಮಾತನಾಡಿ, ‘ಪಟ್ಟಣ ಪಂಚಾಯಿತಿ ಖಾಲಿ ಜಾಗ ಒತ್ತುವರಿಯಾಗುತ್ತಿದೆ. ಆಡಳಿತ ಮಂಡಳಿ ಬಂದ ದಿನದಿಂದಲೂ ಈ ಬಗ್ಗೆ ಸಭೆಯ ಗಮನಕ್ಕೆ ತರಲಾಗುತ್ತಿದೆ. ಸದಸ್ಯರು ನೀಡುತ್ತಿರುವ ದೂರುಗಳಿಗೆ ಸಮರ್ಪಕ ಉತ್ತರ ಸಿಗುತ್ತಿಲ್ಲ’ ಎಂದು ಆರೋಪಿಸಿದರು.</p>.<p>ಸಭೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶಬನಮ್, ಉಪಾಧ್ಯಕ್ಷ ಜಯಪ್ರಕಾಶ್ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ, ಮುಖ್ಯಾಧಿಕಾರಿ ಕುರಿಯಾಕೋಸ್ ಮತ್ತು ಇತರ ಸದಸ್ಯರು, ಮುಖಂಡರು ಇದ್ದರು.</p>.<p class="Briefhead"><strong>ಪ.ಪಂ. ಮಳಿಗೆ ಹರಾಜು ಅಕ್ರಮ: ವರದಿ ಚರ್ಚೆ</strong></p>.<p>ಪಟ್ಟಣ ಪಂಚಾಯಿತಿ ಮಳಿಗೆ ಹರಾಜು ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಕುರಿತು ‘ಪ್ರಜಾವಾಣಿ’ ಪ್ರಕಟಿಸಿದ್ದ ವರದಿ ಸಭೆಯಲ್ಲಿ ಸದಸ್ಯರ ನಡುವೆ ಚರ್ಚೆಗೆ ಒಳಗಾಯಿತು.</p>.<p>ಬಡ ಅರ್ಹ ಉದ್ಯೋಗಿಗಳಿಗೆ ಅಕ್ರಮ ಹರಾಜು ಪ್ರಕ್ರಿಯೆಯಿಂದ ಅನ್ಯಾಯವಾಗಿದೆ. ಈ ಕುರಿತು ಸಾರ್ವಜಿನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಶ್ರೀಮಂತರ ಪರವಾಗಿ ಪಟ್ಟಣ ಪಂಚಾಯಿತಿ ವ್ಯವಸ್ಥೆ ನಿಂತರೆ ಬಡವರ ಪಾಡೇನು? ರಿಂಗ್ ಒಳಗೆ ರಿಂಗ್ ನಡೆದಿದೆ ಎಂದು ಸದಸ್ಯ ಸೊಪ್ಪುಗುಡ್ಡೆ ರಾಘವೇಂದ್ರ ಆಕ್ಷೇಪ ವ್ಯಕ್ತಪಡಿಸಿದರು.</p>.<p>ಮರು ಹರಾಜು ಪ್ರಕ್ರಿಯೆ ನಡೆಸಲು ಕ್ರಮ ಕೈಗೊಳ್ಳಬೇಕು ಎಂದುಸದಸ್ಯ ಯತಿರಾಜ್ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>