<p><strong>ಶಿವಮೊಗ್ಗ</strong>: ಶಾದಿ ಮಹಲ್ಗಳಲ್ಲಿ ಮದುವೆಗೆ ಆಹ್ವಾನಿತೆಯಂತೆ ತೆರಳಿ ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ತುಂಗಾನಗರ ಠಾಣೆ ಪೊಲೀಸರು ಬಂಧಿಸಿ ₹ 18 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.</p>.<p>ಸೂಳೆಬೈಲ್ ನಿವಾಸಿ ರುಕ್ಸಾನಾ ಫಿರ್ದೋಸ್ (30) ಬಂಧಿತ ಮಹಿಳೆ.</p>.<p>ಖಚಿತ ಮಾಹಿತಿಯ ಮೇರೆಗೆ ಮಾರ್ಚ್ 7ರಂದು ಆಕೆಯನ್ನು ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆ ನಡೆಸಿದಾಗ ಕೃತ್ಯಗಳು ಬಯಲಾಗಿವೆ. ಆರೋಪಿಯಿಂದ 120 ಗ್ರಾಂ. ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.</p>.<p>ಶಾದಿ ಮಹಲ್ಗಳಲ್ಲಿನ ಮದುವೆಗೆ ತೆರಳುತ್ತಿದ್ದ ರುಕ್ಸಾನಾ, ಗುರುತು ಮರೆಮಾಚಲು ಬುರ್ಕಾ ಧರಿಸುತ್ತಿದ್ದರು. ಅಲ್ಲಿನ ಕೊಠಡಿಗಳಲ್ಲಿ ಉಳಿದುಕೊಂಡು ಮದುವೆ ಮನೆಯವರು ಹಾಗೂ ಆಹ್ವಾನಿತರು ತಂದಿರುತ್ತಿದ್ದ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.</p>.<p>ತುಂಗಾನಗರ ಠಾಣೆ ವ್ಯಾಪ್ತಿಯ ನಾಲ್ಕು ಶಾದಿ ಮಹಲ್ಗಳಲ್ಲಿ ಕಳ್ಳತನ ನಡೆದಿದ್ದು, ಎಸ್ಪಿ ಬಿ.ನಿಖಿಲ್ ಕುಮಾರ್ ಮಾರ್ಗದರ್ಶನದಲ್ಲಿ ತುಂಗಾನಗರ ಠಾಣೆ ಇನ್ಸ್ಪೆಕ್ಟರ್ ಕೆ.ಟಿ.ಗುರುರಾಜ್, ಪಿಎಸ್ಐ ಗಾದಿಲಿಂಗಪ್ಪ ಗೌಡರ್ ನೇತೃತ್ವದಲ್ಲಿ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಶಾದಿ ಮಹಲ್ಗಳಲ್ಲಿ ಮದುವೆಗೆ ಆಹ್ವಾನಿತೆಯಂತೆ ತೆರಳಿ ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ತುಂಗಾನಗರ ಠಾಣೆ ಪೊಲೀಸರು ಬಂಧಿಸಿ ₹ 18 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.</p>.<p>ಸೂಳೆಬೈಲ್ ನಿವಾಸಿ ರುಕ್ಸಾನಾ ಫಿರ್ದೋಸ್ (30) ಬಂಧಿತ ಮಹಿಳೆ.</p>.<p>ಖಚಿತ ಮಾಹಿತಿಯ ಮೇರೆಗೆ ಮಾರ್ಚ್ 7ರಂದು ಆಕೆಯನ್ನು ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆ ನಡೆಸಿದಾಗ ಕೃತ್ಯಗಳು ಬಯಲಾಗಿವೆ. ಆರೋಪಿಯಿಂದ 120 ಗ್ರಾಂ. ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.</p>.<p>ಶಾದಿ ಮಹಲ್ಗಳಲ್ಲಿನ ಮದುವೆಗೆ ತೆರಳುತ್ತಿದ್ದ ರುಕ್ಸಾನಾ, ಗುರುತು ಮರೆಮಾಚಲು ಬುರ್ಕಾ ಧರಿಸುತ್ತಿದ್ದರು. ಅಲ್ಲಿನ ಕೊಠಡಿಗಳಲ್ಲಿ ಉಳಿದುಕೊಂಡು ಮದುವೆ ಮನೆಯವರು ಹಾಗೂ ಆಹ್ವಾನಿತರು ತಂದಿರುತ್ತಿದ್ದ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.</p>.<p>ತುಂಗಾನಗರ ಠಾಣೆ ವ್ಯಾಪ್ತಿಯ ನಾಲ್ಕು ಶಾದಿ ಮಹಲ್ಗಳಲ್ಲಿ ಕಳ್ಳತನ ನಡೆದಿದ್ದು, ಎಸ್ಪಿ ಬಿ.ನಿಖಿಲ್ ಕುಮಾರ್ ಮಾರ್ಗದರ್ಶನದಲ್ಲಿ ತುಂಗಾನಗರ ಠಾಣೆ ಇನ್ಸ್ಪೆಕ್ಟರ್ ಕೆ.ಟಿ.ಗುರುರಾಜ್, ಪಿಎಸ್ಐ ಗಾದಿಲಿಂಗಪ್ಪ ಗೌಡರ್ ನೇತೃತ್ವದಲ್ಲಿ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>