ಶಿವಮೊಗ್ಗ: ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್ ಪ್ರತಿನಿಧಿಸುವ ಐದನೇ ವಾರ್ಡ್ ವ್ಯಾಪ್ತಿಯ ಪುರಲೆಯಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಗುರುವಾರ ಬೀದಿ ನಾಯಿ ದಾಳಿ ನಡೆಸಿದೆ.
ಪುರಲೆಯ ಅವಿನಾಶ್ ಅವರ ಪುತ್ರಿಪ್ರತೀಕ್ಷಾ ಸಂಜೆ 6 ಗಂಟೆಯ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದಾಗ ನಾಯಿ ದಾಳಿ ನಡೆಸಿದೆ. ಈ ವೇಳೆ ಪ್ರತೀಕ್ಷಾ ಎಡಗೈಗೆ ಎರಡು ಕಡೆ ನಾಯಿ ಕಚ್ಚಿದೆ. ಬಾಲಕಿಯ ಕೂಗಾಟ ಕೇಳಿ ಸ್ಥಳೀಯರು ಬಂದು ರಕ್ಷಣೆ ಮಾಡಿದ್ದಾರೆ.
ಬಾಲಕಿಯನ್ನು ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಮಹಾನಗರ ಪಾಲಿಕೆ ಸದಸ್ಯ ಧೀರರಾಜ್ ಹೊನ್ನವಿಲೆ ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಆರೋಗ್ಯ ವಿಚಾರಿಸಿದರು. ಬೀದಿ ನಾಯಿಗಳ ಹಾವಳಿ ಹೆಚ್ಚಿದ್ದು, ಕಡಿವಾಣ ಹಾಕುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಭದ್ರಾವತಿ ತಾಲ್ಲೂಕಿನ ದಡಮಘಟ್ಟದಲ್ಲಿ ಬುಧವಾರ ಮೂರೂವರೆ ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಕೊಂದು ಹಾಕಿದ್ದನ್ನು ಸ್ಮರಿಸಬಹುದು.