<p><strong>ಶಿವಮೊಗ್ಗ</strong>: ಇಲ್ಲಿನ ತ್ಯಾವರೆಕೊಪ್ಪ ಹುಲಿ ಸಿಂಹ ಧಾಮದಲ್ಲಿ ತರಬೇತಿ ನಿರತ ಪಶು ವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಸಾವಿಗೆ ಕಾರಣವಾಗಿದ್ದ ನೀರಾನೆ 'ಹಂಸಿಣಿ' (Hippopotamus) </p><p>ಮಂಗಳವಾರ ಅನಾರೋಗ್ಯದಿಂದ ಮೃತಪಟ್ಟಿದೆ. ಗರ್ಭಾಶಯದ ಸೋಂಕಿನಿಂದ ಬಳಲುತ್ತಿದ್ದ "ಹಂಸಿಣಿ" ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದೆ.</p><p>ಮೃತ ಹಂಸಿಣಿ ಗರ್ಭ ಧರಿಸಿದ್ದು, ಎಂಟು ತಿಂಗಳ ಗರ್ಭಧಾರಣೆಯ ಅವಧಿಯು ಮಾರ್ಚ್ ಮಧ್ಯಭಾಗದಲ್ಲೇ ಪೂರ್ಣಗೊಂಡಿದ್ದರೂ, ಅದರಲ್ಲಿ ಪ್ರಸವದ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಭ್ರೂಣ ಹೊಟ್ಟೆಯಲ್ಲಿಯೇ ಮೃತಪಟ್ಟಿತ್ತು. ಕಳೆದ ಕೆಲವು ದಿನಗಳಿಂದ ಆಹಾರ ಸೇವನೆ ಕಡಿಮೆ ಮಾಡಿ ಮಂದಗತಿಯಲ್ಲಿ ವರ್ತಿಸುತ್ತಿದ್ದ ಕಾರಣ, ಏಪ್ರಿಲ್ 10ರಂದು ಮೈಸೂರಿನ ಕರ್ನಾಟಕ ಮೃಗಾಲಯ ಪ್ರಾಧಿಕಾರದ ವನ್ಯಜೀವಿ ಪಶುವೈದ್ಯರ ತಂಡ ನೀರಾನೆಯ ಆರೋಗ್ಯದ ತಪಾಸಣೆ ನಡೆಸಿತ್ತು. </p><p>ಈ ವೇಳೆ ಅದರ ಗರ್ಭಾಶಯದಲ್ಲಿ ಗಂಭೀರವಾದ ಸೋಂಕು (Infection) ಇರುವುದು ಪತ್ತೆಯಾಗಿತ್ತು. ಗರ್ಭಾಶಯದ ಒಳಗಿನ ಭ್ರೂಣದ ಸಾವಿನಿಂದ ಈ ಸೋಂಕು ಉಂಟಾಗಿದ್ದು, ಇದು ಬಹು ಅಂಗಾಂಗಗಳ ವೈಫಲ್ಯಕ್ಕೆ ಕಾರಣವಾಗಿ ನೀರಾನೆ ಮೃತಪಟ್ಟಿದೆ ಎಂದು ಹುಲಿ ಸಿಂಹಧಾಮದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮರಾಕ್ಷರ ತಿಳಿಸಿದ್ದಾರೆ.</p><p>‘ಹಂಸಿಣಿಯ ಆರೋಗ್ಯ ಸುಧಾರಣೆಗೆ ಗರ್ಭದಲ್ಲೇ ಮೃತಪಟ್ಟಿದ್ದ ಮರಿಯನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯಬೇಕಿತ್ತು. ಶಸ್ತ್ರಚಿಕಿತ್ಸೆಗೆಅಗತ್ಯವಿರುವ ಉಪಕರಣ ಹಾಗೂ ತಜ್ಞರ ತಂಡ ಒಳಗೊಂಡ ಅಗತ್ಯ ಸೌಲಭ್ಯ ಗುಜರಾತ್ನಲ್ಲಿರುವ ಮುಖೇಶ್ಅಂ ಬಾನಿ ಒಡೆತನದ ವಂತಾರಾ ವನ್ಯಧಾಮದಲ್ಲಿ ಮಾತ್ರ ಇದೆ. ಇದು ಹಂಸಿಣಿಯ ಆರೋಗ್ಯ ರಕ್ಷಣೆ ವಿಚಾರದಲ್ಲಿ ಸವಾಲುಗಳಿಗೆ ಕಾರಣವಾಗಿತ್ತು' ಎಂದು ಮೂಲಗಳು ತಿಳಿಸಿವೆ.</p><p>ಗರ್ಭಿಣಿ ಆಗಿದ್ದ ಹಂಸಿಣಿ ಆಹಾರ ಸೇವಿಸುತ್ತಿಲ್ಲ ಎಂಬ ಕಾರಣಕ್ಕೆ ಮಾರ್ಚ್ 19ರ ರಾತ್ರಿ ಡಾ.ಸಮೀಕ್ಷಾ ಅದರ ಆರೋಗ್ಯ ತಪಾಸಣೆಗೆ ಮುಂದಾಗಿದ್ದರು. ಈ ವೇಳೆ ನೀರಾನೆ ದಾಳಿ ನಡೆಸಿತ್ತು. ತೀವ್ರ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮರುದಿನ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದರು.</p>.ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆ ‘ಹಂಸಿಣಿ’ ಆರೋಗ್ಯ ಸ್ಥಿತಿ ಗಂಭೀರ.ಶಿವಮೊಗ್ಗ: ಡಾ.ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆ ಹಂಸಿಣಿಗೆ ಗರ್ಭಪಾತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಇಲ್ಲಿನ ತ್ಯಾವರೆಕೊಪ್ಪ ಹುಲಿ ಸಿಂಹ ಧಾಮದಲ್ಲಿ ತರಬೇತಿ ನಿರತ ಪಶು ವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಸಾವಿಗೆ ಕಾರಣವಾಗಿದ್ದ ನೀರಾನೆ 'ಹಂಸಿಣಿ' (Hippopotamus) </p><p>ಮಂಗಳವಾರ ಅನಾರೋಗ್ಯದಿಂದ ಮೃತಪಟ್ಟಿದೆ. ಗರ್ಭಾಶಯದ ಸೋಂಕಿನಿಂದ ಬಳಲುತ್ತಿದ್ದ "ಹಂಸಿಣಿ" ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದೆ.</p><p>ಮೃತ ಹಂಸಿಣಿ ಗರ್ಭ ಧರಿಸಿದ್ದು, ಎಂಟು ತಿಂಗಳ ಗರ್ಭಧಾರಣೆಯ ಅವಧಿಯು ಮಾರ್ಚ್ ಮಧ್ಯಭಾಗದಲ್ಲೇ ಪೂರ್ಣಗೊಂಡಿದ್ದರೂ, ಅದರಲ್ಲಿ ಪ್ರಸವದ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಭ್ರೂಣ ಹೊಟ್ಟೆಯಲ್ಲಿಯೇ ಮೃತಪಟ್ಟಿತ್ತು. ಕಳೆದ ಕೆಲವು ದಿನಗಳಿಂದ ಆಹಾರ ಸೇವನೆ ಕಡಿಮೆ ಮಾಡಿ ಮಂದಗತಿಯಲ್ಲಿ ವರ್ತಿಸುತ್ತಿದ್ದ ಕಾರಣ, ಏಪ್ರಿಲ್ 10ರಂದು ಮೈಸೂರಿನ ಕರ್ನಾಟಕ ಮೃಗಾಲಯ ಪ್ರಾಧಿಕಾರದ ವನ್ಯಜೀವಿ ಪಶುವೈದ್ಯರ ತಂಡ ನೀರಾನೆಯ ಆರೋಗ್ಯದ ತಪಾಸಣೆ ನಡೆಸಿತ್ತು. </p><p>ಈ ವೇಳೆ ಅದರ ಗರ್ಭಾಶಯದಲ್ಲಿ ಗಂಭೀರವಾದ ಸೋಂಕು (Infection) ಇರುವುದು ಪತ್ತೆಯಾಗಿತ್ತು. ಗರ್ಭಾಶಯದ ಒಳಗಿನ ಭ್ರೂಣದ ಸಾವಿನಿಂದ ಈ ಸೋಂಕು ಉಂಟಾಗಿದ್ದು, ಇದು ಬಹು ಅಂಗಾಂಗಗಳ ವೈಫಲ್ಯಕ್ಕೆ ಕಾರಣವಾಗಿ ನೀರಾನೆ ಮೃತಪಟ್ಟಿದೆ ಎಂದು ಹುಲಿ ಸಿಂಹಧಾಮದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮರಾಕ್ಷರ ತಿಳಿಸಿದ್ದಾರೆ.</p><p>‘ಹಂಸಿಣಿಯ ಆರೋಗ್ಯ ಸುಧಾರಣೆಗೆ ಗರ್ಭದಲ್ಲೇ ಮೃತಪಟ್ಟಿದ್ದ ಮರಿಯನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯಬೇಕಿತ್ತು. ಶಸ್ತ್ರಚಿಕಿತ್ಸೆಗೆಅಗತ್ಯವಿರುವ ಉಪಕರಣ ಹಾಗೂ ತಜ್ಞರ ತಂಡ ಒಳಗೊಂಡ ಅಗತ್ಯ ಸೌಲಭ್ಯ ಗುಜರಾತ್ನಲ್ಲಿರುವ ಮುಖೇಶ್ಅಂ ಬಾನಿ ಒಡೆತನದ ವಂತಾರಾ ವನ್ಯಧಾಮದಲ್ಲಿ ಮಾತ್ರ ಇದೆ. ಇದು ಹಂಸಿಣಿಯ ಆರೋಗ್ಯ ರಕ್ಷಣೆ ವಿಚಾರದಲ್ಲಿ ಸವಾಲುಗಳಿಗೆ ಕಾರಣವಾಗಿತ್ತು' ಎಂದು ಮೂಲಗಳು ತಿಳಿಸಿವೆ.</p><p>ಗರ್ಭಿಣಿ ಆಗಿದ್ದ ಹಂಸಿಣಿ ಆಹಾರ ಸೇವಿಸುತ್ತಿಲ್ಲ ಎಂಬ ಕಾರಣಕ್ಕೆ ಮಾರ್ಚ್ 19ರ ರಾತ್ರಿ ಡಾ.ಸಮೀಕ್ಷಾ ಅದರ ಆರೋಗ್ಯ ತಪಾಸಣೆಗೆ ಮುಂದಾಗಿದ್ದರು. ಈ ವೇಳೆ ನೀರಾನೆ ದಾಳಿ ನಡೆಸಿತ್ತು. ತೀವ್ರ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮರುದಿನ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದರು.</p>.ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆ ‘ಹಂಸಿಣಿ’ ಆರೋಗ್ಯ ಸ್ಥಿತಿ ಗಂಭೀರ.ಶಿವಮೊಗ್ಗ: ಡಾ.ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆ ಹಂಸಿಣಿಗೆ ಗರ್ಭಪಾತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>