ಶಿವಮೊಗ್ಗ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ತವರು ಶಿವಮೊಗ್ಗ ಜಿಲ್ಲೆಗೆ ಬುಧವಾರ ಬಿ.ವೈ. ವಿಜಯೇಂದ್ರ ಸಮೀಪದ ಮತ್ತೂರು ಗ್ರಾಮಕ್ಕೆ ತೆರಳಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಕಾರ್ಯವಾಹರಾದ ಪಟ್ಟಾಭಿರಾಮ ಹಾಗೂ ಬಿಜೆಪಿ ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಂ.ಬಿ ಭಾನುಪ್ರಕಾಶ್ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್, ಶಾಸಕರಾದ ಚೆನ್ನಬಸಪ್ಪ , ಡಿ. ಎಸ್. ಅರುಣ್, ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯ್ಕ, ಸೂಡಾ ಮಾಜಿ ಅಧ್ಯಕ್ಷ ಎಸ್. ದತ್ತಾತ್ರಿ ಉಪಸ್ಥಿತರಿದ್ದರು.