ಶಿವಮೊಗ್ಗ: ಇಲ್ಲಿನ ಶಿವಮೊಗ್ಗ ಹಾಲು ಒಕ್ಕೂಟದ (ಶಿಮುಲ್) ಅಧ್ಯಕ್ಷ ಸ್ಥಾನಕ್ಕೆ ಜನವರಿ 1ರಂದು ನಡೆದಿದ್ದ ಚುನಾವಣೆ ರದ್ದುಗೊಳಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ವಜಾಗೊಳಿಸಿದೆ. ಹೀಗಾಗಿ, ಮೂರು ತಿಂಗಳ ಬಳಿಕ ಎನ್.ಎಚ್.ಶ್ರೀಪಾದ ರಾವ್ ಮತ್ತೆ ಶಿಮುಲ್ ಅಧ್ಯಕ್ಷರಾಗಿ ಸೋಮವಾರ ಸಂಜೆ ಅಧಿಕಾರ ಸ್ವೀಕರಿಸಿದ್ದಾರೆ.