ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ ಟಿಎಪಿಸಿಎಂಎಸ್‌ ಸಾಮಾನ್ಯ ಕ್ಷೇತ್ರದ ಚುನಾವಣೆಗೆ ಹೈಕೋರ್ಟ್‌ ತಡೆ

ಆರ್.ಎಂ. ಮಂಜುನಾಥ ಗೌಡ ಮೇಲ್ಮನವಿಗೆ ಪುರಸ್ಕಾರ
Last Updated 30 ಏಪ್ರಿಲ್ 2022, 2:25 IST
ಅಕ್ಷರ ಗಾತ್ರ

ತೀರ್ಥಹಳ್ಳಿ: ಶಿವಮೊಗ್ಗ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್‌)ಕ್ಕೆ ಶುಕ್ರವಾರ ನಡೆಯಬೇಕಿದ್ದ ಸಾಮಾನ್ಯ ಕ್ಷೇತ್ರದ ನಿರ್ದೇಶಕ ಸ್ಥಾನದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ರಾಜ್ಯ ಅಪೆಕ್ಸ್‌ ಬ್ಯಾಂಕ್‌ ಮಾಜಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಟಿಎಪಿಸಿಎಂಎಸ್ ನಿರ್ದೇಶಕ ಸ್ಥಾನದ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧೆ ಬಯಸಿ ಈಚೆಗೆ ನಾಮಪತ್ರ ಸಲ್ಲಿಸಿದ್ದರು. ಅದನ್ನು ಚುನಾವಣಾಧಿಕಾರಿ ಅನರ್ಹಗೊಳಿಸಿದ್ದರು. ಇದನ್ನು ಪ್ರಶ್ನಿಸಿ ಮಂಜುನಾಥ ಗೌಡ ಹೈಕೋರ್ಟ್‌ ಮೊರೆಹೋಗಿದ್ದರು.

ಹೈಕೋರ್ಟ್‌ ದ್ವಿ ಸದಸ್ಯ ವಿಭಾಗೀಯ ಪೀಠ ಗುರುವಾರ ಅರ್ಜಿಯನ್ನು ಪುರಸ್ಕರಿಸಿದೆ. ನಾಮಪತ್ರ ತಿರಸ್ಕರಿಸಿದ್ದ ಚುನಾವಣಾಧಿಕಾರಿ ಕ್ರಮ ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿ, ಚುನಾವಣಾಧಿಕಾರಿಗೆ ದಂಡ ವಿಧಿಸಿ ತೀರ್ಪು ನೀಡಿದೆ. ಸಾಮಾನ್ಯ ಕ್ಷೇತ್ರದ ಚುನಾವಣೆಗೆ ತಡೆ ನೀಡಿದೆ.

‘ಕಾನೂನುಬಾಹಿರವಾಗಿ ನನ್ನ ನಾಮಪತ್ರ ಅನರ್ಹಗೊಂಡಿತ್ತು. ಹೀಗಾಗಿ ನ್ಯಾಯಾಲಯಕ್ಕೆ ಹೋಗಿದ್ದೆ. ತೀರ್ಪು ಸಂತಸ ನೀಡಿದೆ. ಮುಂದಿನ ಚುನಾವಣೆ ನ್ಯಾಯಯುತವಾಗಿ ನಡೆಯಲಿ’ ಎಂದು ಮಂಜುನಾಥ ಗೌಡ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT