<p>ಶಿವಮೊಗ್ಗ: ‘ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಯು.ಆರ್. ಅನಂತಮೂರ್ತಿ ಅವರ ಹೆಸರಿನಲ್ಲಿ ಆರಂಭವಾಗಲಿರುವ ಅಧ್ಯಯನ ಪೀಠವನ್ನು ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯದಲ್ಲೇ ಸ್ಥಾಪಿಸಬೇಕು’ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ ಆಗ್ರಹಿಸಿದರು.</p>.<p>‘2026-27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಂತಮೂರ್ತಿ ಅಧ್ಯಯನ ಪೀಠ ಸ್ಥಾಪನೆ ಕುರಿತು ಘೋಷಣೆ ಮಾಡಿರುವುದು ಸ್ವಾಗತಾರ್ಹ ಕ್ರಮ. ಆದರೆ ಈ ಪೀಠವನ್ನು ಕುವೆಂಪು ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸುವ ಬದಲು ಅನಂತಮೂರ್ತಿ ಅವರ ಜನ್ಮಭೂಮಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ತುಂಗಾ ಮಹಾವಿದ್ಯಾಲಯದಲ್ಲೇ ಆರಂಭಿಸಬೇಕು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ಅನಂತಮೂರ್ತಿ ಅವರ ಸಾಹಿತ್ಯ, ಚಿಂತನೆ ಮತ್ತು ಸಮಾಜಮುಖಿ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಈ ಅಧ್ಯಯನ ಪೀಠ ಸ್ಥಾಪನೆಯಾಗುತ್ತಿದೆ. ಆದ್ದರಿಂದ ಅವರ ನೆಲೆಯಾದ ತೀರ್ಥಹಳ್ಳಿಯಲ್ಲೇ ಪೀಠ ಸ್ಥಾಪನೆಯಾದರೆ ಅದಕ್ಕೆ ಹೆಚ್ಚಿನ ಅರ್ಥ ಸಿಗಲಿದೆ’ ಎಂದು ಹೇಳಿದರು.</p>.<p>ಎಚ್.ಎಂ. ಸಂಗಯ್ಯ, ಆದಿಲ್ ಖಾನ್, ಶಂಕ್ರಾನಾಯ್ಕ, ಶಿವಣ್ಣ, ಜಗದೀಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-42-495964855</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ‘ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಯು.ಆರ್. ಅನಂತಮೂರ್ತಿ ಅವರ ಹೆಸರಿನಲ್ಲಿ ಆರಂಭವಾಗಲಿರುವ ಅಧ್ಯಯನ ಪೀಠವನ್ನು ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯದಲ್ಲೇ ಸ್ಥಾಪಿಸಬೇಕು’ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ ಆಗ್ರಹಿಸಿದರು.</p>.<p>‘2026-27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಂತಮೂರ್ತಿ ಅಧ್ಯಯನ ಪೀಠ ಸ್ಥಾಪನೆ ಕುರಿತು ಘೋಷಣೆ ಮಾಡಿರುವುದು ಸ್ವಾಗತಾರ್ಹ ಕ್ರಮ. ಆದರೆ ಈ ಪೀಠವನ್ನು ಕುವೆಂಪು ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸುವ ಬದಲು ಅನಂತಮೂರ್ತಿ ಅವರ ಜನ್ಮಭೂಮಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ತುಂಗಾ ಮಹಾವಿದ್ಯಾಲಯದಲ್ಲೇ ಆರಂಭಿಸಬೇಕು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ಅನಂತಮೂರ್ತಿ ಅವರ ಸಾಹಿತ್ಯ, ಚಿಂತನೆ ಮತ್ತು ಸಮಾಜಮುಖಿ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಈ ಅಧ್ಯಯನ ಪೀಠ ಸ್ಥಾಪನೆಯಾಗುತ್ತಿದೆ. ಆದ್ದರಿಂದ ಅವರ ನೆಲೆಯಾದ ತೀರ್ಥಹಳ್ಳಿಯಲ್ಲೇ ಪೀಠ ಸ್ಥಾಪನೆಯಾದರೆ ಅದಕ್ಕೆ ಹೆಚ್ಚಿನ ಅರ್ಥ ಸಿಗಲಿದೆ’ ಎಂದು ಹೇಳಿದರು.</p>.<p>ಎಚ್.ಎಂ. ಸಂಗಯ್ಯ, ಆದಿಲ್ ಖಾನ್, ಶಂಕ್ರಾನಾಯ್ಕ, ಶಿವಣ್ಣ, ಜಗದೀಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-42-495964855</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>