ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಹಾಗೂ ಹೈದರಾಬಾದ್ ಕರ್ನಾಟಕ ಪ್ರದೇಶದ ವಿಶೇಷ ಹಕ್ಕು ಹೊಂದಿರುವ ಭೂಮಿಗಳಾದ ಸೊಪ್ಪಿನ ಬೆಟ್ಟ, ಕಾನು, ಕುಮ್ಕಿ ಬೆಟ್ಟ, ಜಮ್ಮಾ ಬಾಣೆ ಹಾಗೂ ಮೋಟಸ್ಥಲ್ ತಳಿ ಭೂಮಿಗಳ ಅನಧಿಕೃತ ಸಾಗುವಳಿ ಸಕ್ರಮಕ್ಕೆ ಅವಕಾಶ ನೀಡಬೇಕು. ಕಂದಾಯ ಸಚಿವರ ಹೇಳಿಕೆಯಿಂದ ಸಾವಿರಾರು ಬಗರ್ ಹುಕುಂ ಸಾಗುವಳಿದಾರರು ಸಾಗುವಳಿ ಭೂಮಿ ಹಾಗೂ ವಸತಿ ಹಕ್ಕು ಕಳೆದುಕೊಳ್ಳಬೇಕಾಗುತ್ತದೆ. ಭೂಮಿ ಕಳೆದುಕೊಂಡು ನಿರ್ಗತಿಕರಾಗುವರು ಎಂದು ಸಂಘದ ಅಧ್ಯಕ್ಷ ಬಿ.ಎ.ರಮೇಶ್ ಹೆಗ್ಡೆ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಕಳವಳ ವ್ಯಕ್ತಪಡಿಸಿದರು.