<p><strong>ಶಿವಮೊಗ್ಗ:</strong> ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಸಂಭ್ರಮ ಜಿಲ್ಲೆಯಾದ್ಯಂತ ಗರಿಗೆದರಿದೆ. ಹೀಗಾಗಿ ಪೂಜೆಗೆ ಅಗತ್ಯ ಹೂವು-ಹಣ್ಣು, ಬೂದುಗುಂಬಳ ಖರೀದಿಯ ಭರಾಟೆ ಮಾರುಕಟ್ಟೆಯಲ್ಲಿ ಮಂಗಳವಾರ ಜೋರಾಗಿತ್ತು. </p>.<p>ನವರಾತ್ರಿ ಆಚರಣೆಯ ವೇಳೆ ಪ್ರತಿ ವರ್ಷ ಹೂವುಗಳ ದರ ಏರಿಕೆ ಆಗುತ್ತದೆ. ಆದರೆ, ಕೆಲ ದಿನಗಳ ಹಿಂದೆ ಹೂವಿನ ದರ ಕುಸಿದಿತ್ತು. ಹಬ್ಬದ ವೇಳೆಗೆ ಮತ್ತೆ ಹೂವಿನ ದರ ಹೆಚ್ಚಾಗಿದೆ. ಎರಡು ವಾರಗಳವರೆಗೆ ಧಾರ್ಮಿಕ ಆಚರಣೆಗಳು ನಡೆಯುವುದರಿಂದ ಈ ಸಮಯದಲ್ಲಿ ಹೂವಿಗೆ ಹೆಚ್ಚಿನ ಬೇಡಿಕೆ ಬಂದಿದೆ. </p>.<p>ದಸರಾ ಹಬ್ಬದಲ್ಲಿ ಚಂಡು ಹೂ, ಸೇವಂತಿಗೆ, ಕನಕಾಂಬರ, ಗುಲಾಬಿ ಹೂವುಗಳಿಗೆ ಹೆಚ್ಚಿನ ಬೇಡಿಕೆ ಇದೆ. ಆಯುಧ ಪೂಜೆ ದಿನ ವಾಹನ, ಕಚೇರಿ, ಮನೆಯಲ್ಲಿರುವ ವಸ್ತುಗಳನ್ನು ಅಲಂಕರಿಸಿ ಪೂಜೆ ಮಾಡಲಾಗುತ್ತದೆ. ವಾಹನಗಳ ಅಲಂಕಾರಕ್ಕೆ ಹೂವು ಹೆಚ್ಚಾಗಿ ಮಾರಾಟವಾಗುವುದರಿಂದ ಹೂವಿನ ಬೇಡಿಕೆಯೂ ಹೆಚ್ಚಾಗಿದೆ. </p>.<p>ಪ್ರತಿ ಕೆ.ಜಿ ಕನಕಾಂಬರ ₹500, ಮಲ್ಲಿಗೆ ₹600, ಗುಲಾಬಿ ₹400, ಸೇವಂತಿಗೆ ₹ 400 ರಂತೆ ಮಾರಾಟವಾಗುತ್ತಿವೆ. ಆಯುಧ ಪೂಜೆಯ ದಿನ ಬಳಕೆಗೆ ಬೂದುಗುಂಬಳ ಪ್ರತಿ ಕೆ.ಜಿಗೆ ₹ 40ರಿಂದ ಆರಂಭಗೊಂಡು ಗಾತ್ರದ ಆಧಾರದ ಮೇಲೆ ಒಂದಕ್ಕೆ ₹100- 200ರ ವರೆಗೆ ಮಾರಾಟವಾದವು. </p>.<p>ನಗರದ ಗಾಂಧಿ ಬಜಾರ್, ದುರ್ಗಿಗುಡಿ, ನೆಹರು ರಸ್ತೆ, ಬಿ.ಎಚ್. ರಸ್ತೆ, ಪೊಲೀಸ್ ಚೌಕಿ, ಗೋಪಾಳ, ವಿನೋಬನಗರ ಮಾರುಕಟ್ಟೆ ಜನಜಂಗುಳಿಯಿಂದ ಕೂಡಿದ್ದವು. ತರಕಾರಿ, ದಿನಸಿ, ಆಲಂಕಾರಿಕ ವಸ್ತುಗಳು ಮತ್ತು ಪೂಜೆಗೆ ಬೇಕಾಗುವ ಬೂದುಗುಂಬಳ, ಬಾಳೆಕಂದು, ಎಲೆ, ತೆಂಗಿನಕಾಯಿಯ ಖರೀದಿ ಜೋರಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಸಂಭ್ರಮ ಜಿಲ್ಲೆಯಾದ್ಯಂತ ಗರಿಗೆದರಿದೆ. ಹೀಗಾಗಿ ಪೂಜೆಗೆ ಅಗತ್ಯ ಹೂವು-ಹಣ್ಣು, ಬೂದುಗುಂಬಳ ಖರೀದಿಯ ಭರಾಟೆ ಮಾರುಕಟ್ಟೆಯಲ್ಲಿ ಮಂಗಳವಾರ ಜೋರಾಗಿತ್ತು. </p>.<p>ನವರಾತ್ರಿ ಆಚರಣೆಯ ವೇಳೆ ಪ್ರತಿ ವರ್ಷ ಹೂವುಗಳ ದರ ಏರಿಕೆ ಆಗುತ್ತದೆ. ಆದರೆ, ಕೆಲ ದಿನಗಳ ಹಿಂದೆ ಹೂವಿನ ದರ ಕುಸಿದಿತ್ತು. ಹಬ್ಬದ ವೇಳೆಗೆ ಮತ್ತೆ ಹೂವಿನ ದರ ಹೆಚ್ಚಾಗಿದೆ. ಎರಡು ವಾರಗಳವರೆಗೆ ಧಾರ್ಮಿಕ ಆಚರಣೆಗಳು ನಡೆಯುವುದರಿಂದ ಈ ಸಮಯದಲ್ಲಿ ಹೂವಿಗೆ ಹೆಚ್ಚಿನ ಬೇಡಿಕೆ ಬಂದಿದೆ. </p>.<p>ದಸರಾ ಹಬ್ಬದಲ್ಲಿ ಚಂಡು ಹೂ, ಸೇವಂತಿಗೆ, ಕನಕಾಂಬರ, ಗುಲಾಬಿ ಹೂವುಗಳಿಗೆ ಹೆಚ್ಚಿನ ಬೇಡಿಕೆ ಇದೆ. ಆಯುಧ ಪೂಜೆ ದಿನ ವಾಹನ, ಕಚೇರಿ, ಮನೆಯಲ್ಲಿರುವ ವಸ್ತುಗಳನ್ನು ಅಲಂಕರಿಸಿ ಪೂಜೆ ಮಾಡಲಾಗುತ್ತದೆ. ವಾಹನಗಳ ಅಲಂಕಾರಕ್ಕೆ ಹೂವು ಹೆಚ್ಚಾಗಿ ಮಾರಾಟವಾಗುವುದರಿಂದ ಹೂವಿನ ಬೇಡಿಕೆಯೂ ಹೆಚ್ಚಾಗಿದೆ. </p>.<p>ಪ್ರತಿ ಕೆ.ಜಿ ಕನಕಾಂಬರ ₹500, ಮಲ್ಲಿಗೆ ₹600, ಗುಲಾಬಿ ₹400, ಸೇವಂತಿಗೆ ₹ 400 ರಂತೆ ಮಾರಾಟವಾಗುತ್ತಿವೆ. ಆಯುಧ ಪೂಜೆಯ ದಿನ ಬಳಕೆಗೆ ಬೂದುಗುಂಬಳ ಪ್ರತಿ ಕೆ.ಜಿಗೆ ₹ 40ರಿಂದ ಆರಂಭಗೊಂಡು ಗಾತ್ರದ ಆಧಾರದ ಮೇಲೆ ಒಂದಕ್ಕೆ ₹100- 200ರ ವರೆಗೆ ಮಾರಾಟವಾದವು. </p>.<p>ನಗರದ ಗಾಂಧಿ ಬಜಾರ್, ದುರ್ಗಿಗುಡಿ, ನೆಹರು ರಸ್ತೆ, ಬಿ.ಎಚ್. ರಸ್ತೆ, ಪೊಲೀಸ್ ಚೌಕಿ, ಗೋಪಾಳ, ವಿನೋಬನಗರ ಮಾರುಕಟ್ಟೆ ಜನಜಂಗುಳಿಯಿಂದ ಕೂಡಿದ್ದವು. ತರಕಾರಿ, ದಿನಸಿ, ಆಲಂಕಾರಿಕ ವಸ್ತುಗಳು ಮತ್ತು ಪೂಜೆಗೆ ಬೇಕಾಗುವ ಬೂದುಗುಂಬಳ, ಬಾಳೆಕಂದು, ಎಲೆ, ತೆಂಗಿನಕಾಯಿಯ ಖರೀದಿ ಜೋರಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>