<p><strong>ಶಿವಮೊಗ್ಗ</strong>: ‘ಇಲ್ಲಿನ ಬಸವೇಶ್ವರಸ್ವಾಮಿ ಪಟ್ಟಣ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಮಾರಂಭ ಮೇ 16ರ ಬೆಳಿಗ್ಗೆ 10.30ಕ್ಕೆ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘದ ಅಧ್ಯಕ್ಷ ಬಳ್ಳೇಕೆರೆ ಸಂತೋಷ್ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಸಮಾರಂಭದ ಸಾನ್ನಿಧ್ಯವನ್ನು ರಂಭಾಪುರಿ ಪೀಠದ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಕಾಶೀಪೀಠದ ಚಂದ್ರಶೇಖರ ಶಿವಾಚಾರ್ಯರು ವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮಾರಂಭ ಉದ್ಘಾಟಿಸಲಿದ್ದಾರೆ. ಸ್ಮರಣ ಸಂಚಿಕೆ ಸಂಸದ ಬಿ.ವೈ.ರಾಘವೇಂದ್ರ, ಜಿ.ಟಿ.ದೇವೇಗೌಡ ಬಿಡುಗಡೆ ಮಾಡಲಿದ್ದಾರೆ’ ಎಂದರು.</p>.<p>ಬೆಳಿಗ್ಗೆ 10.30ಗಂಟೆಗೆ ವೇದಿಕೆ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ, ಸಂಜೆ 5.30ಕ್ಕೆ ಶಮಿತಾ ಮಲ್ನಾಡ್ ತಂಡದವರಿಂದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ ನಡೆಯಲಿದೆ. ಮಿಮಿಕ್ರಿ ಗೋಪಿ ರಸಸಂಜೆ ಕಾರ್ಯಕ್ರಮ ನಡೆಸಿಕೊಡಲಿದ್ದು, ಬೆಕ್ಕಿನಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಬಸವ ಮರುಳಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.</p>.<p>ಕೆ.ಎಸ್.ತಾರಾನಾಥ್, ಕೆ.ಸಿ.ಫಾಲಾಕ್ಷಪ್ಪ, ಎಚ್.ಎಂ.ಶಿವಾನಂದ್, ಎಚ್.ವಿ.ಮರುಳೇಶ್, ಎಂ.ರುದ್ರಪ್ಪ, ಅನಿತಾ ರವಿಶಂಕರ್, ಎಂ.ಆರ್.ಪ್ರಕಾಶ್, ಎಂ.ಜೆ.ಚನ್ನೇಶ್, ಎಸ್.ಸದಾಶಿವಮೂರ್ತಿ, ಎಸ್.ಪಿ.ಶಶಿಧರ್, ಎಂ.ರುದ್ರಪ್ಪ, ಎಚ್.ಸಿ.ಬಸವರಾಜ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-42-1137314386</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ‘ಇಲ್ಲಿನ ಬಸವೇಶ್ವರಸ್ವಾಮಿ ಪಟ್ಟಣ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಮಾರಂಭ ಮೇ 16ರ ಬೆಳಿಗ್ಗೆ 10.30ಕ್ಕೆ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘದ ಅಧ್ಯಕ್ಷ ಬಳ್ಳೇಕೆರೆ ಸಂತೋಷ್ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಸಮಾರಂಭದ ಸಾನ್ನಿಧ್ಯವನ್ನು ರಂಭಾಪುರಿ ಪೀಠದ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಕಾಶೀಪೀಠದ ಚಂದ್ರಶೇಖರ ಶಿವಾಚಾರ್ಯರು ವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮಾರಂಭ ಉದ್ಘಾಟಿಸಲಿದ್ದಾರೆ. ಸ್ಮರಣ ಸಂಚಿಕೆ ಸಂಸದ ಬಿ.ವೈ.ರಾಘವೇಂದ್ರ, ಜಿ.ಟಿ.ದೇವೇಗೌಡ ಬಿಡುಗಡೆ ಮಾಡಲಿದ್ದಾರೆ’ ಎಂದರು.</p>.<p>ಬೆಳಿಗ್ಗೆ 10.30ಗಂಟೆಗೆ ವೇದಿಕೆ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ, ಸಂಜೆ 5.30ಕ್ಕೆ ಶಮಿತಾ ಮಲ್ನಾಡ್ ತಂಡದವರಿಂದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ ನಡೆಯಲಿದೆ. ಮಿಮಿಕ್ರಿ ಗೋಪಿ ರಸಸಂಜೆ ಕಾರ್ಯಕ್ರಮ ನಡೆಸಿಕೊಡಲಿದ್ದು, ಬೆಕ್ಕಿನಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಬಸವ ಮರುಳಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.</p>.<p>ಕೆ.ಎಸ್.ತಾರಾನಾಥ್, ಕೆ.ಸಿ.ಫಾಲಾಕ್ಷಪ್ಪ, ಎಚ್.ಎಂ.ಶಿವಾನಂದ್, ಎಚ್.ವಿ.ಮರುಳೇಶ್, ಎಂ.ರುದ್ರಪ್ಪ, ಅನಿತಾ ರವಿಶಂಕರ್, ಎಂ.ಆರ್.ಪ್ರಕಾಶ್, ಎಂ.ಜೆ.ಚನ್ನೇಶ್, ಎಸ್.ಸದಾಶಿವಮೂರ್ತಿ, ಎಸ್.ಪಿ.ಶಶಿಧರ್, ಎಂ.ರುದ್ರಪ್ಪ, ಎಚ್.ಸಿ.ಬಸವರಾಜ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-42-1137314386</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>