<p>ಶಿವಮೊಗ್ಗ: ನಗರದ ಪಿ.ಇ.ಎಸ್ ಐ.ಟಿ.ಎಂ ಸಂಸ್ಥೆಯಿಂದ ಸಿಇಟಿ ಪರೀಕ್ಷೆ ಎದುರಿಸಲಿರುವ ವಿದ್ಯಾರ್ಥಿಗಳಿಗಾಗಿ ಮಾರ್ಚ್ 30ರಂದು ಅಣಕು ಪರೀಕ್ಷಾ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ವಿದ್ಯಾರ್ಥಿಗಳಿಗೆ ನೈಜ ಪರೀಕ್ಷೆಯ ಅನುಭವ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಪ್ರಾಂಶುಪಾಲ ಡಿ.ಆರ್. ಸ್ವಾಮಿ ಸ್ವಾಗತಿಸಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಚನಾತ್ಮಕ ಸಿದ್ಧತೆ, ನಿರಂತರ ಶ್ರಮ ಹಾಗೂ ಮೌಲ್ಯಮಾಪನದ ಮಹತ್ವ ವಿವರಿಸಿದರು.</p>.<p>‘ಟೆಸ್ಟ್ ಮೈ ಸ್ಕಿಲ್ಸ್’ ವೇದಿಕೆಯ ಮೂಲಕ ನಡೆಸಲಾಗುವ ಈ ಅಣಕು ಪರೀಕ್ಷೆಯು ವಿದ್ಯಾರ್ಥಿಗಳ ಕಲಿಕೆಯ ಅಂತರ ಗುರುತಿಸಲು ಮತ್ತು ಪರೀಕ್ಷಾ ತಂತ್ರ ಪರಿಷ್ಕರಿಸಲು ಸಹಕಾರಿ ಎಂದು ತಿಳಿಸಿದರು.</p>.<p>ಟೆಕ್ನಾಲಜೀಸ್ನ ಸಹ ಸಂಸ್ಥಾಪಕ ಸಾರಂಗ್ ಅವರು ಎಐ ಚಾಲಿತ ವೇದಿಕೆಯ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಿ.ಇ.ಎಸ್ ಟ್ರಸ್ಟ್ನ ರಿಜಿಸ್ಟ್ರಾರ್ ಆರ್.ನಾಗರಾಜ, ವಿದ್ಯಾರ್ಥಿಗಳು ತಮ್ಮ ಗುರಿ ನಿಗದಿಪಡಿಸಿಕೊಂಡು ಶಿಸ್ತುಬದ್ಧ ಅಧ್ಯಯನ ಮತ್ತು ಸಮಯದ ನಿರ್ವಹಣೆಯ ಬಗ್ಗೆ ಕಿವಿಮಾತು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಶಿವಮೊಗ್ಗ, ಬೆಂಗಳೂರು ಸೇರಿದಂತೆ ಬೇರೆ ಬೇರೆ ಕಡೆಯಿಂದ 400ಕ್ಕೂ ಅಧಿಕ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಉತ್ಸಾಹದಿಂದ ಭಾಗವಹಿಸಿದ್ದರು. ಉಪ ಪ್ರಾಂಶುಪಾಲ ಪ್ರೊ.ಆರ್. ಶೇಖರ್ ವಂದಿಸಿ, ಪೂಜಾ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-42-598455788</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ನಗರದ ಪಿ.ಇ.ಎಸ್ ಐ.ಟಿ.ಎಂ ಸಂಸ್ಥೆಯಿಂದ ಸಿಇಟಿ ಪರೀಕ್ಷೆ ಎದುರಿಸಲಿರುವ ವಿದ್ಯಾರ್ಥಿಗಳಿಗಾಗಿ ಮಾರ್ಚ್ 30ರಂದು ಅಣಕು ಪರೀಕ್ಷಾ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ವಿದ್ಯಾರ್ಥಿಗಳಿಗೆ ನೈಜ ಪರೀಕ್ಷೆಯ ಅನುಭವ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಪ್ರಾಂಶುಪಾಲ ಡಿ.ಆರ್. ಸ್ವಾಮಿ ಸ್ವಾಗತಿಸಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಚನಾತ್ಮಕ ಸಿದ್ಧತೆ, ನಿರಂತರ ಶ್ರಮ ಹಾಗೂ ಮೌಲ್ಯಮಾಪನದ ಮಹತ್ವ ವಿವರಿಸಿದರು.</p>.<p>‘ಟೆಸ್ಟ್ ಮೈ ಸ್ಕಿಲ್ಸ್’ ವೇದಿಕೆಯ ಮೂಲಕ ನಡೆಸಲಾಗುವ ಈ ಅಣಕು ಪರೀಕ್ಷೆಯು ವಿದ್ಯಾರ್ಥಿಗಳ ಕಲಿಕೆಯ ಅಂತರ ಗುರುತಿಸಲು ಮತ್ತು ಪರೀಕ್ಷಾ ತಂತ್ರ ಪರಿಷ್ಕರಿಸಲು ಸಹಕಾರಿ ಎಂದು ತಿಳಿಸಿದರು.</p>.<p>ಟೆಕ್ನಾಲಜೀಸ್ನ ಸಹ ಸಂಸ್ಥಾಪಕ ಸಾರಂಗ್ ಅವರು ಎಐ ಚಾಲಿತ ವೇದಿಕೆಯ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಿ.ಇ.ಎಸ್ ಟ್ರಸ್ಟ್ನ ರಿಜಿಸ್ಟ್ರಾರ್ ಆರ್.ನಾಗರಾಜ, ವಿದ್ಯಾರ್ಥಿಗಳು ತಮ್ಮ ಗುರಿ ನಿಗದಿಪಡಿಸಿಕೊಂಡು ಶಿಸ್ತುಬದ್ಧ ಅಧ್ಯಯನ ಮತ್ತು ಸಮಯದ ನಿರ್ವಹಣೆಯ ಬಗ್ಗೆ ಕಿವಿಮಾತು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಶಿವಮೊಗ್ಗ, ಬೆಂಗಳೂರು ಸೇರಿದಂತೆ ಬೇರೆ ಬೇರೆ ಕಡೆಯಿಂದ 400ಕ್ಕೂ ಅಧಿಕ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಉತ್ಸಾಹದಿಂದ ಭಾಗವಹಿಸಿದ್ದರು. ಉಪ ಪ್ರಾಂಶುಪಾಲ ಪ್ರೊ.ಆರ್. ಶೇಖರ್ ವಂದಿಸಿ, ಪೂಜಾ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-42-598455788</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>