<p>ಶಿವಮೊಗ್ಗ: ರಂಗಾಯಣವು ಮಕ್ಕಳಿಗಾಗಿ ರಂಗ ತರಬೇತಿ ಶಿಬಿರ ‘ಚಿಣ್ಣರ ಸಿಹಿಮೊಗೆ–2026’ ಆಯೋಜಿಸಿದೆ. ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಏ. 14 ರಿಂದ ಮೇ 3 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಶಿಬಿರ ನಡೆಯಲಿದೆ.</p>.<p>ಒಟ್ಟು 150 ಮಕ್ಕಳಿಗೆ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ. ಮೊದಲು ಟೋಕನ್ ಪಡೆದವರು ಏ. 9 ರಂದು ಶಿವಮೊಗ್ಗದ ರಂಗಾಯಣ ಕಚೇರಿಯಲ್ಲೇ ಅರ್ಜಿ ಭರ್ತಿ ಮಾಡಿ ಪ್ರವೇಶ ಶುಲ್ಕ ₹3,000ವನ್ನು ನಗದು ರೂಪದಲ್ಲಿ ಪಾವತಿಸಿ ರಶೀದಿ ಪಡೆಯಬೇಕು.</p>.<p>ಪ್ರವೇಶ ಪಡೆಯಲು 2 ಪಾಸ್ಪೋರ್ಟ್ ಅಳತೆಯ ಫೋಟೋ ಮತ್ತು ಜನನ ಪ್ರಮಾಣ ಪತ್ರ ಅಥವಾ ಆಧಾರ್ ಕಾರ್ಡ್ ಪ್ರತಿ ಕಡ್ಡಾಯವಾಗಿದ್ದು, ಮಕ್ಕಳ ವಯೋಮಿತಿ 8 ರಿಂದ 13 ವರ್ಷದೊಳಗಿರಬೇಕು.</p>.<p>ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ರಂಗಾಯಣ ಕಚೇರಿ, ಸುವರ್ಣ ಸಂಸ್ಕೃತಿ ಭವನ, ಹೆಲಿಪ್ಯಾಡ್ ಹತ್ತಿರ, ಅಶೋಕನಗರ, ಶಿವಮೊಗ್ಗ ಇವರನ್ನು ಅಥವಾ ಕಚೇರಿ ಮೊ. ಸಂ; 08182–256353ಕ್ಕೆ ಸಂಪರ್ಕಿಸಬಹುದು ಎಂದು ರಂಗಾಯಣ ಆಡಳಿತಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-42-455449035</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ರಂಗಾಯಣವು ಮಕ್ಕಳಿಗಾಗಿ ರಂಗ ತರಬೇತಿ ಶಿಬಿರ ‘ಚಿಣ್ಣರ ಸಿಹಿಮೊಗೆ–2026’ ಆಯೋಜಿಸಿದೆ. ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಏ. 14 ರಿಂದ ಮೇ 3 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಶಿಬಿರ ನಡೆಯಲಿದೆ.</p>.<p>ಒಟ್ಟು 150 ಮಕ್ಕಳಿಗೆ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ. ಮೊದಲು ಟೋಕನ್ ಪಡೆದವರು ಏ. 9 ರಂದು ಶಿವಮೊಗ್ಗದ ರಂಗಾಯಣ ಕಚೇರಿಯಲ್ಲೇ ಅರ್ಜಿ ಭರ್ತಿ ಮಾಡಿ ಪ್ರವೇಶ ಶುಲ್ಕ ₹3,000ವನ್ನು ನಗದು ರೂಪದಲ್ಲಿ ಪಾವತಿಸಿ ರಶೀದಿ ಪಡೆಯಬೇಕು.</p>.<p>ಪ್ರವೇಶ ಪಡೆಯಲು 2 ಪಾಸ್ಪೋರ್ಟ್ ಅಳತೆಯ ಫೋಟೋ ಮತ್ತು ಜನನ ಪ್ರಮಾಣ ಪತ್ರ ಅಥವಾ ಆಧಾರ್ ಕಾರ್ಡ್ ಪ್ರತಿ ಕಡ್ಡಾಯವಾಗಿದ್ದು, ಮಕ್ಕಳ ವಯೋಮಿತಿ 8 ರಿಂದ 13 ವರ್ಷದೊಳಗಿರಬೇಕು.</p>.<p>ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ರಂಗಾಯಣ ಕಚೇರಿ, ಸುವರ್ಣ ಸಂಸ್ಕೃತಿ ಭವನ, ಹೆಲಿಪ್ಯಾಡ್ ಹತ್ತಿರ, ಅಶೋಕನಗರ, ಶಿವಮೊಗ್ಗ ಇವರನ್ನು ಅಥವಾ ಕಚೇರಿ ಮೊ. ಸಂ; 08182–256353ಕ್ಕೆ ಸಂಪರ್ಕಿಸಬಹುದು ಎಂದು ರಂಗಾಯಣ ಆಡಳಿತಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-42-455449035</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>