<p>ಹೊಳೆಹೊನ್ನೂರು: ಶಿವಮೊಗ್ಗ– ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯ ಪುರಲೆ ಕೆರೆ ಏರಿ ಮೇಲೆ ಮಂಗಳವಾರ ಸಂಜೆ ಸರಣಿ ಅಪಘಾತದಲ್ಲಿ ಮೂರು ವಾಹನಗಳು ಜಖಂಗೊಂಡಿವೆ.</p>.<p>ಚಿತ್ರದುರ್ಗದಿಂದ ಶಿವಮೊಗ್ಗದತ್ತ ಹೋಗುತ್ತಿದ್ದ ಸರ್ಕಾರಿ ಸಾರಿಗೆ ಸಂಸ್ಥೆ ಬಸ್ ಹಾಗೂ ಎದುರು ಬರುತ್ತಿದ್ದ ಕಾರ್ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಕಾರ್ ನುಜ್ಜುಗುಜ್ಜಾಗಿ ಎಡಬದಿ ರಸ್ತೆಗೆ ಅಡ್ಡಲಾಗಿ ನಿಂತಿದೆ. ಇದೇ ವೇಳೆ ಶಿವಮೊಗ್ಗದಿಂದ ಬೆಂಗಳೂರಿನತ್ತ ಹೋಗುತ್ತಿದ್ದ ಇನ್ನೊಂದು ಕಾರ್ಗೆ ಗುದ್ದಿದ ಪರಿಣಾಮ ಆ ಕಾರಿನ ಎಡಭಾಗ ಜಖಂಗೊಂಡಿದೆ. ಕಾರಿನ ಚಾಲಕನಿಗೆ ತೀವ್ರವಾಗಿದ್ದು ಸಮೀಪದ ಸುಬ್ಬಯ್ಯ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ.</p>.<p>ಅಪಘಾತದಿಂದಾಗಿ ಕೆಲ ಹೊತ್ತು ರಸ್ತೆ ಸಂಚಾರಕ್ಕೆ ಅಡ್ಡಿಯಾಯಿತು. ಬಳಿಕ ಪೊಲೀಸರು ಸ್ಥಳಕ್ಕೆ ಬಂದು ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<p>ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-44-1980521676</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಳೆಹೊನ್ನೂರು: ಶಿವಮೊಗ್ಗ– ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯ ಪುರಲೆ ಕೆರೆ ಏರಿ ಮೇಲೆ ಮಂಗಳವಾರ ಸಂಜೆ ಸರಣಿ ಅಪಘಾತದಲ್ಲಿ ಮೂರು ವಾಹನಗಳು ಜಖಂಗೊಂಡಿವೆ.</p>.<p>ಚಿತ್ರದುರ್ಗದಿಂದ ಶಿವಮೊಗ್ಗದತ್ತ ಹೋಗುತ್ತಿದ್ದ ಸರ್ಕಾರಿ ಸಾರಿಗೆ ಸಂಸ್ಥೆ ಬಸ್ ಹಾಗೂ ಎದುರು ಬರುತ್ತಿದ್ದ ಕಾರ್ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಕಾರ್ ನುಜ್ಜುಗುಜ್ಜಾಗಿ ಎಡಬದಿ ರಸ್ತೆಗೆ ಅಡ್ಡಲಾಗಿ ನಿಂತಿದೆ. ಇದೇ ವೇಳೆ ಶಿವಮೊಗ್ಗದಿಂದ ಬೆಂಗಳೂರಿನತ್ತ ಹೋಗುತ್ತಿದ್ದ ಇನ್ನೊಂದು ಕಾರ್ಗೆ ಗುದ್ದಿದ ಪರಿಣಾಮ ಆ ಕಾರಿನ ಎಡಭಾಗ ಜಖಂಗೊಂಡಿದೆ. ಕಾರಿನ ಚಾಲಕನಿಗೆ ತೀವ್ರವಾಗಿದ್ದು ಸಮೀಪದ ಸುಬ್ಬಯ್ಯ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ.</p>.<p>ಅಪಘಾತದಿಂದಾಗಿ ಕೆಲ ಹೊತ್ತು ರಸ್ತೆ ಸಂಚಾರಕ್ಕೆ ಅಡ್ಡಿಯಾಯಿತು. ಬಳಿಕ ಪೊಲೀಸರು ಸ್ಥಳಕ್ಕೆ ಬಂದು ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<p>ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-44-1980521676</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>