<p>ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ನೇಮಕವಾದ ಆರ್. ಪ್ರಸನ್ನಕುಮಾರ್ ಬುಧವಾರ ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಅವರು ಕಾಂಗ್ರೆಸ್ ಧ್ವಜ ನೀಡಿ ಅಧಿಕಾರ ಹಸ್ತಾಂತರಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಆರ್.ಪ್ರಸನ್ನಕುಮಾರ್, ‘ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರನ್ನು ಗೆಲ್ಲಿಸಲು ನಾವೆಲ್ಲರೂ ಹಗಲಿರುಳು ಶ್ರಮ ಪಡೋಣ. ಜನರ ಬಳಿ ಹೋಗೋಣ. ರಾಹುಲ್ ಅವರ ಘೋಷ ವಾಕ್ಯದಂತೆ ನನ್ನ ಬೂತ್, ನನ್ನ ಜವಾಬ್ದಾರಿ ಎಂದು ನಡೆದುಕೊಳ್ಳೋಣ’ ಎಂದರು.</p>.<p>ಎಚ್.ಎಸ್. ಸುಂದರೇಶ್ ಮಾತನಾಡಿ, ‘ನನ್ನ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ ಎಂಬ ತೃಪ್ತಿ ಇದೆ. ಅತ್ಯಂತ ಕಷ್ಟಕಾಲದಲ್ಲಿ ನನಗೆ ಈ ಹುದ್ದೆ ಸಿಕ್ಕಿತ್ತು. ಬಿಜೆಪಿಯ ವಿರುದ್ಧ ಹೋರಾಟ ಮಾಡುವುದು ಅಷ್ಟು ಸುಲಭವೂ ಆಗಿರಲಿಲ್ಲ. ಆದರೆ ಅದನ್ನೆಲ್ಲ ಎದುರಿಸಿದ್ದೇನೆ. ಹಲವು ಬಾರಿ ನಿಷ್ಠುರವಾಗಿ ನಡೆದಿದ್ದೇನೆ. ಸೂಡಾ ಅಧ್ಯಕ್ಷನಾಗಿದ್ದರಿಂದ ಈ ಹುದ್ದೆಯಿಂದ ನಿರ್ಗಮಿಸುತ್ತಿದ್ದೇನೆ’ ಎಂದರು.</p>.<p>ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್. ರಮೇಶ್, ನಾಗರಾಜ ಗೌಡ, ದಕ್ಷಿಣ ಬ್ಲಾಕ್ ವಿಭಾಗದ ಅಧ್ಯಕ್ಷ ಕಲೀಂ ಪಾಷಾ, ಎಸ್.ಪಿ.ದಿನೇಶ್, ಮಧು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ನೇಮಕವಾದ ಆರ್. ಪ್ರಸನ್ನಕುಮಾರ್ ಬುಧವಾರ ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಅವರು ಕಾಂಗ್ರೆಸ್ ಧ್ವಜ ನೀಡಿ ಅಧಿಕಾರ ಹಸ್ತಾಂತರಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಆರ್.ಪ್ರಸನ್ನಕುಮಾರ್, ‘ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರನ್ನು ಗೆಲ್ಲಿಸಲು ನಾವೆಲ್ಲರೂ ಹಗಲಿರುಳು ಶ್ರಮ ಪಡೋಣ. ಜನರ ಬಳಿ ಹೋಗೋಣ. ರಾಹುಲ್ ಅವರ ಘೋಷ ವಾಕ್ಯದಂತೆ ನನ್ನ ಬೂತ್, ನನ್ನ ಜವಾಬ್ದಾರಿ ಎಂದು ನಡೆದುಕೊಳ್ಳೋಣ’ ಎಂದರು.</p>.<p>ಎಚ್.ಎಸ್. ಸುಂದರೇಶ್ ಮಾತನಾಡಿ, ‘ನನ್ನ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ ಎಂಬ ತೃಪ್ತಿ ಇದೆ. ಅತ್ಯಂತ ಕಷ್ಟಕಾಲದಲ್ಲಿ ನನಗೆ ಈ ಹುದ್ದೆ ಸಿಕ್ಕಿತ್ತು. ಬಿಜೆಪಿಯ ವಿರುದ್ಧ ಹೋರಾಟ ಮಾಡುವುದು ಅಷ್ಟು ಸುಲಭವೂ ಆಗಿರಲಿಲ್ಲ. ಆದರೆ ಅದನ್ನೆಲ್ಲ ಎದುರಿಸಿದ್ದೇನೆ. ಹಲವು ಬಾರಿ ನಿಷ್ಠುರವಾಗಿ ನಡೆದಿದ್ದೇನೆ. ಸೂಡಾ ಅಧ್ಯಕ್ಷನಾಗಿದ್ದರಿಂದ ಈ ಹುದ್ದೆಯಿಂದ ನಿರ್ಗಮಿಸುತ್ತಿದ್ದೇನೆ’ ಎಂದರು.</p>.<p>ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್. ರಮೇಶ್, ನಾಗರಾಜ ಗೌಡ, ದಕ್ಷಿಣ ಬ್ಲಾಕ್ ವಿಭಾಗದ ಅಧ್ಯಕ್ಷ ಕಲೀಂ ಪಾಷಾ, ಎಸ್.ಪಿ.ದಿನೇಶ್, ಮಧು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>