<p><strong>ಶಿವಮೊಗ್ಗ:</strong> ‘ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಸಂಸತ್ನಲ್ಲಿ ಮಹಿಳಾ ಮೀಸಲು ವಿಧೇಯಕದ ವಿರುದ್ಧ ಮತ ಚಲಾಯಿಸಿ ಸೋಲಿಸುವ ಕೆಲಸ ಮಾಡಿವೆ. ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳಿಗೆ ಖಂಡಿತ ದೇಶದ ಮಹಿಳೆಯರ ಶಾಪ ತಟ್ಟಲಿದೆ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.</p>.<p>‘ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟದ ಈ ನಡೆ ಪ್ರಧಾನಿ ನರೇಂದ್ರ ಮೋದಿ ಹೇಳಿದಂತೆ ಹೆಣ್ಣು ಭ್ರೂಣ ಹತ್ಯೆಗೆ ಸಮ. ಇದು ಮಹಿಳಾ ಕುಲಕ್ಕೆ ಮಾಡಿದ ದೊಡ್ಡ ಅಪಮಾನ. ಖಂಡಿತವಾಗಿಯೂ ಮುಂದಿನ ದಿನಗಳಲ್ಲಿ ದೇಶದ ಮಹಿಳೆಯರು ಪಾಠ ಕಲಿಸಲಿದ್ದಾರೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಮಹಿಳಾ ಮೀಸಲಾತಿ ವಿಧೇಯಕದಿಂದ ದಕ್ಷಿಣದ ರಾಜ್ಯಗಳಿಗೆ ಯಾವುದೇ ಹಾನಿ ಆಗುವುದಿಲ್ಲ. ಬದಲಿಗೆ ಕ್ಷೇತ್ರ ಪುನರ್ ವಿಂಗಡಣೆಯಿಂದ ಕರ್ನಾಟಕದಲ್ಲಿ ಪರಿಶಿಷ್ಟರಿಗೆ ಈಗಿರುವ ಲೋಕಸಭೆಯ 9 ಸ್ಥಾನಗಳ ಬದಲು 11 ಸ್ಥಾನಗಳು ಸಿಗಲಿವೆ. ಒಟ್ಟು ಸ್ಥಾನಗಳ ಸಂಖ್ಯೆ 28ರಿಂದ 42ಕ್ಕೆ ಹೆಚ್ಚಾಗಲಿವೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿರೋಧಿಸುವ ಭರದಲ್ಲಿ ವಿರೋಧ ಪಕ್ಷಗಳು ದೇಶದ ಮಹಿಳೆಯರ ಹಿತ ಬಲಿಕೊಟ್ಟಿವೆ’ ಎಂದು ಟೀಕಿಸಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಕೆ.ಜಗದೀಶ್, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ಮೋಹನ್ ರೆಡ್ಡಿ, ರಶ್ಮಿ ಶ್ರೀನಿವಾಸ್, ಸುರೇಖಾ ಮುರಳೀಧರ ಹಾಗೂ ಹರಿಕೃಷ್ಣ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-42-1940483905</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಸಂಸತ್ನಲ್ಲಿ ಮಹಿಳಾ ಮೀಸಲು ವಿಧೇಯಕದ ವಿರುದ್ಧ ಮತ ಚಲಾಯಿಸಿ ಸೋಲಿಸುವ ಕೆಲಸ ಮಾಡಿವೆ. ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳಿಗೆ ಖಂಡಿತ ದೇಶದ ಮಹಿಳೆಯರ ಶಾಪ ತಟ್ಟಲಿದೆ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.</p>.<p>‘ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟದ ಈ ನಡೆ ಪ್ರಧಾನಿ ನರೇಂದ್ರ ಮೋದಿ ಹೇಳಿದಂತೆ ಹೆಣ್ಣು ಭ್ರೂಣ ಹತ್ಯೆಗೆ ಸಮ. ಇದು ಮಹಿಳಾ ಕುಲಕ್ಕೆ ಮಾಡಿದ ದೊಡ್ಡ ಅಪಮಾನ. ಖಂಡಿತವಾಗಿಯೂ ಮುಂದಿನ ದಿನಗಳಲ್ಲಿ ದೇಶದ ಮಹಿಳೆಯರು ಪಾಠ ಕಲಿಸಲಿದ್ದಾರೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಮಹಿಳಾ ಮೀಸಲಾತಿ ವಿಧೇಯಕದಿಂದ ದಕ್ಷಿಣದ ರಾಜ್ಯಗಳಿಗೆ ಯಾವುದೇ ಹಾನಿ ಆಗುವುದಿಲ್ಲ. ಬದಲಿಗೆ ಕ್ಷೇತ್ರ ಪುನರ್ ವಿಂಗಡಣೆಯಿಂದ ಕರ್ನಾಟಕದಲ್ಲಿ ಪರಿಶಿಷ್ಟರಿಗೆ ಈಗಿರುವ ಲೋಕಸಭೆಯ 9 ಸ್ಥಾನಗಳ ಬದಲು 11 ಸ್ಥಾನಗಳು ಸಿಗಲಿವೆ. ಒಟ್ಟು ಸ್ಥಾನಗಳ ಸಂಖ್ಯೆ 28ರಿಂದ 42ಕ್ಕೆ ಹೆಚ್ಚಾಗಲಿವೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿರೋಧಿಸುವ ಭರದಲ್ಲಿ ವಿರೋಧ ಪಕ್ಷಗಳು ದೇಶದ ಮಹಿಳೆಯರ ಹಿತ ಬಲಿಕೊಟ್ಟಿವೆ’ ಎಂದು ಟೀಕಿಸಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಕೆ.ಜಗದೀಶ್, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ಮೋಹನ್ ರೆಡ್ಡಿ, ರಶ್ಮಿ ಶ್ರೀನಿವಾಸ್, ಸುರೇಖಾ ಮುರಳೀಧರ ಹಾಗೂ ಹರಿಕೃಷ್ಣ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-42-1940483905</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>