ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ ಗಲಭೆ: ಚೂರಿ ಇರಿತದ ಪ್ರಮುಖ ಆರೋಪಿ ಕಾಲಿಗೆ ಗುಂಡೇಟು

Last Updated 16 ಆಗಸ್ಟ್ 2022, 4:04 IST
ಅಕ್ಷರ ಗಾತ್ರ

ಶಿವಮೊಗ್ಗ: ನಗರದಲ್ಲಿ ಸೋಮವಾರ ಬಟ್ಟೆ ಅಂಗಡಿ ಕೆಲಸಗಾರ ಪ್ರೇಮ್ ಸಿಂಗ್‌ಗೆಚೂರಿ ಇರಿದ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಮಾರ್ನಮಿಬೈಲು ನಿವಾಸಿ ಚರ್ಬಿ ಅಲಿಯಾಸ್ ಮೊಹಮ್ಮದ್ ಜಬಿ (30) ಗುಂಡೇಟು ಬಿದ್ದ ಆರೋಪಿ.

ಎನ್.ಟಿ.ರಸ್ತೆಯ ಫಲಕ್ ಪ್ಯಾಲೇಸ್ ಬಳಿ ಆರೋಪಿ ಇರುವ ಮಾಹಿತಿ ಅರಿತ ಪೊಲೀಸರ ತಂಡ ಮಂಗಳವಾರ ನಸುಕಿನಲ್ಲಿ ಬಂಧಿಸಲು ತೆರಳಿತ್ತು. ಈ ವೇಳೆ ಜಬಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ವಿನೋಬ‌ನಗರ ಠಾಣೆ ಪಿಎಸ್ ಐ ಮಂಜುನಾಥ ಕುರಿ ಕಾಲಿಗೆ ಗುಂಡು ಹಾರಿಸಿದ್ದಾರೆ.

ಗಾಯಗೊಂಡ ಅರೋಪಿಯನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಲತ್ರೆಗೆ ದಾಖಲಿಸಲಾಗಿದೆ.

ಪ್ರೇಮ್ ಸಿಂಗ್ ಮೇಲೆ ಚೂರಿ ಇರಿತದ ಪ್ರಕರಣದಲ್ಲಿ ಇಲ್ಲಿಯವರೆಗೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ಆರೋಪಿಗಳು (ರೆಹಮಾನ್ ಮತ್ತು ನದೀಮ್)
ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ಆರೋಪಿಗಳು (ರೆಹಮಾನ್ ಮತ್ತು ನದೀಮ್)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT