<p><strong>ಸಾಗರ: </strong>ಇಲ್ಲಿನ ವಿವಿಧ ಸಹಕಾರ ಸಂಸ್ಥೆಗಳ ಪ್ರಮುಖರು ಬುಧವಾರ ಅಡಿಕೆಗೆ ಬಂದಿರುವ ಕೊಳೆರೋಗದಿಂದ ನಷ್ಟ ಅನುಭವಿಸಿರುವ ಬೆಳೆಗಾರರಿಗೆ ಸರ್ಕಾರದಿಂದ ಪರಿಹಾರ ಕೊಡಿಸುವಂತೆ ಒತ್ತಾಯಿಸಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಮನವಿ ಸಲ್ಲಿಸಿದರು. </p><p>ಸಾಗರ, ಸೊರಬ, ಹೊಸನಗರ ತಾಲ್ಲೂಕುಗಳಲ್ಲಿ ಈ ವರ್ಷ ಅತಿವೃಷ್ಟಿಯಿಂದಾಗಿ ಶೇ 60ಕ್ಕೂ ಹೆಚ್ಚು ಪ್ರಮಾಣದಲ್ಲಿ ಅಡಿಕೆ ಬೆಳೆಗೆ ಹಾನಿ ಉಂಟಾಗಿದೆ. ಕೊಳೆರೋಗದಿಂದಾಗಿ ಮತ್ತಷ್ಟು ಹೆಚ್ಚಿನ ಬೆಳೆ ನಷ್ಟವಾಗುವ ಆತಂಕ ಎದುರಾಗಿದೆ. ಸರ್ಕಾರ ಬೆಳೆಗಾರರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.</p><p>ಕೊಳೆರೋಗ ನಿವಾರಣೆಗೆ ಬೆಳೆಗಾರರು ಎರಡು ಬಾರಿ ಔಷಧ ಸಿಂಪಡಣೆ ಮಾಡಿದರೂ ರೋಗ ನಿಯಂತ್ರಣಕ್ಕೆ ಬರುತ್ತಿಲ್ಲ. ಅಡಿಕೆಯ ವಹಿವಾಟನ್ನೆ ಪ್ರಮುಖವಾಗಿ ನಡೆಸುವ ಸಹಕಾರ ಸಂಸ್ಥೆಗಳಿಗೂ ಈ ಬೆಳವಣಿಗೆ ಆತಂಕ ತಂದಿದೆ. ಸರ್ಕಾರ ಕೂಡಲೇ ಬೆಳೆಗಾರರಿಗೆ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು.</p><p>ಮನವಿ ಸ್ವೀಕರಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು, ‘ಈಗಾಗಲೇ ತೋಟಗಾರಿಕಾ ಸಚಿವರ ಬಳಿ ಮಲೆನಾಡು ಪ್ರದೇಶದ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿರುವೆ. ಶೀಘ್ರದಲ್ಲೆ ಮುಖ್ಯಮಂತ್ರಿ ಬಳಿ ಕೂಡ ನಿಯೋಗದೊಂದಿಗೆ ತೆರಳಿ ಪರಿಹಾರಕ್ಕೆ ಒತ್ತಾಯಿಸುತ್ತೇನೆ’ ಎಂದು ಭರವಸೆ ನೀಡಿದರು.</p><p>ಆಪ್ಸ್ಕೋಸ್ ಅಧ್ಯಕ್ಷ ಬಿ.ಎ.ಇಂದೂಧರ ಗೌಡ, ತೋಟಗಾರ್ಸ್ ಅಧ್ಯಕ್ಷ ಕೆ.ಸಿ. ದೇವಪ್ಪ, ಮ್ಯಾಮ್ಕೋಸ್ ನಿರ್ದೇಶಕ ದಿನೇಶ್ ಬರದವಳ್ಳಿ, ಪ್ರಮುಖರಾದ ಕೃಷ್ಣಮೂರ್ತಿ, ಶ್ರೀಕಂಠ ಗೌಡ, ಸುರೇಶ್, ರಮೇಶ್ ಎಂ.ಬಿ. ಭಾಸ್ಕರ ಭಟ್, ಸುಬ್ಬಣ್ಣ, ಎಚ್.ಎನ್.ಲಂಬೋದರ್, ಪಿ.ಎಸ್. ಕೃಷ್ಣಮೂರ್ತಿ, ಲೋಕನಾಥ, ಚೇತನ್ ರಾಜ್ ಕಣ್ಣೂರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ಇಲ್ಲಿನ ವಿವಿಧ ಸಹಕಾರ ಸಂಸ್ಥೆಗಳ ಪ್ರಮುಖರು ಬುಧವಾರ ಅಡಿಕೆಗೆ ಬಂದಿರುವ ಕೊಳೆರೋಗದಿಂದ ನಷ್ಟ ಅನುಭವಿಸಿರುವ ಬೆಳೆಗಾರರಿಗೆ ಸರ್ಕಾರದಿಂದ ಪರಿಹಾರ ಕೊಡಿಸುವಂತೆ ಒತ್ತಾಯಿಸಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಮನವಿ ಸಲ್ಲಿಸಿದರು. </p><p>ಸಾಗರ, ಸೊರಬ, ಹೊಸನಗರ ತಾಲ್ಲೂಕುಗಳಲ್ಲಿ ಈ ವರ್ಷ ಅತಿವೃಷ್ಟಿಯಿಂದಾಗಿ ಶೇ 60ಕ್ಕೂ ಹೆಚ್ಚು ಪ್ರಮಾಣದಲ್ಲಿ ಅಡಿಕೆ ಬೆಳೆಗೆ ಹಾನಿ ಉಂಟಾಗಿದೆ. ಕೊಳೆರೋಗದಿಂದಾಗಿ ಮತ್ತಷ್ಟು ಹೆಚ್ಚಿನ ಬೆಳೆ ನಷ್ಟವಾಗುವ ಆತಂಕ ಎದುರಾಗಿದೆ. ಸರ್ಕಾರ ಬೆಳೆಗಾರರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.</p><p>ಕೊಳೆರೋಗ ನಿವಾರಣೆಗೆ ಬೆಳೆಗಾರರು ಎರಡು ಬಾರಿ ಔಷಧ ಸಿಂಪಡಣೆ ಮಾಡಿದರೂ ರೋಗ ನಿಯಂತ್ರಣಕ್ಕೆ ಬರುತ್ತಿಲ್ಲ. ಅಡಿಕೆಯ ವಹಿವಾಟನ್ನೆ ಪ್ರಮುಖವಾಗಿ ನಡೆಸುವ ಸಹಕಾರ ಸಂಸ್ಥೆಗಳಿಗೂ ಈ ಬೆಳವಣಿಗೆ ಆತಂಕ ತಂದಿದೆ. ಸರ್ಕಾರ ಕೂಡಲೇ ಬೆಳೆಗಾರರಿಗೆ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು.</p><p>ಮನವಿ ಸ್ವೀಕರಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು, ‘ಈಗಾಗಲೇ ತೋಟಗಾರಿಕಾ ಸಚಿವರ ಬಳಿ ಮಲೆನಾಡು ಪ್ರದೇಶದ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿರುವೆ. ಶೀಘ್ರದಲ್ಲೆ ಮುಖ್ಯಮಂತ್ರಿ ಬಳಿ ಕೂಡ ನಿಯೋಗದೊಂದಿಗೆ ತೆರಳಿ ಪರಿಹಾರಕ್ಕೆ ಒತ್ತಾಯಿಸುತ್ತೇನೆ’ ಎಂದು ಭರವಸೆ ನೀಡಿದರು.</p><p>ಆಪ್ಸ್ಕೋಸ್ ಅಧ್ಯಕ್ಷ ಬಿ.ಎ.ಇಂದೂಧರ ಗೌಡ, ತೋಟಗಾರ್ಸ್ ಅಧ್ಯಕ್ಷ ಕೆ.ಸಿ. ದೇವಪ್ಪ, ಮ್ಯಾಮ್ಕೋಸ್ ನಿರ್ದೇಶಕ ದಿನೇಶ್ ಬರದವಳ್ಳಿ, ಪ್ರಮುಖರಾದ ಕೃಷ್ಣಮೂರ್ತಿ, ಶ್ರೀಕಂಠ ಗೌಡ, ಸುರೇಶ್, ರಮೇಶ್ ಎಂ.ಬಿ. ಭಾಸ್ಕರ ಭಟ್, ಸುಬ್ಬಣ್ಣ, ಎಚ್.ಎನ್.ಲಂಬೋದರ್, ಪಿ.ಎಸ್. ಕೃಷ್ಣಮೂರ್ತಿ, ಲೋಕನಾಥ, ಚೇತನ್ ರಾಜ್ ಕಣ್ಣೂರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>