<p><strong>ಶಿವಮೊಗ್ಗ</strong>: ‘ಎರಡು ವರ್ಷಗಳಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡುವ ಅವಕಾಶ ದೊರೆತಿದೆ. ಇಲ್ಲಿ ಕೆಲಸ ಮಾಡಿದ್ದು ಅದೃಷ್ಟ’ ಎಂದು ವರ್ಗಾವಣೆಗೊಂಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.</p>.<p>ಇಲ್ಲಿನ ಪ್ರೆಸ್ಟ್ರಸ್ಟ್ನಲ್ಲಿ ಶುಕ್ರವಾರ ಸ್ನೇಹಕೂಟದಲ್ಲಿ ಭಾಗಿಯಾಗಿದ್ದ ಅವರು, ಜಿಲ್ಲೆಯಲ್ಲಿ ಅರಣ್ಯ ಸಂಬಂಧಿ ಸಮಸ್ಯೆಗಳು, ಕಂದಾಯ ದಾಖಲೆ ಸಮಸ್ಯೆ, ಭೂಸ್ವಾಧೀನ ಪ್ರಕ್ರಿಯೆ, ಶರಾವತಿ ಸಂತ್ರಸ್ತರ ಸಮಸ್ಯೆಗಳು ಸೇರಿದಂತೆ ಸವಾಲಿನ ಕೆಲಸಗಳನ್ನು ಮಾಡಿದ ತೃಪ್ತಿ ಇದೆ ಎಂದರು.</p>.<p>ಇಲ್ಲಿನ ಸಾರ್ವಜನಿಕರು, ಅಧಿಕಾರಿಗಳು, ಜನಪ್ರತಿನಿಧಿಗಳಿಂದ ಹೆಚ್ಚಿನ ಬೆಂಬಲವೂ ದೊರೆತಿದೆ. ಜಿಲ್ಲಾಧಿಕಾರಿಯಾಗಿ ಇಲ್ಲಿ ಸಾಕಷ್ಟು ಆಡಳಿತಾತ್ಮಕ ಸಂಗತಿಗಳನ್ನು ಕಲಿತಿದ್ದೇನೆ. ಬಿ.ಎಚ್ ರಸ್ತೆಯ ವಿಸ್ತರಣೆಗೆ ಸಂಬಂಧಿಸಿದಂತೆ 30 ಕಡೆ ಭೂಮಿ ಸ್ವಾಧೀನ ಸಮಸ್ಯೆ ಬಗೆಹರಿಸಿದ ಸಮಾಧಾನವೂ ತಮಗಿದೆ ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿ ಮಂಗನ ಕಾಯಿಲೆ ತೀವ್ರಗೊಳ್ಳುತ್ತಿದೆ. ಈಗ ಆರೋಗ್ಯ ಇಲಾಖೆಯ ಆಯುಕ್ತನಾಗಿ ತೆರಳುತ್ತಿದ್ದೇನೆ. ಮಂಗನ ಕಾಯಿಲೆ ಪರಿಹಾರಕ್ಕೆ ಲಸಿಕೆ ಸಿದ್ಧಪಡಿಸುವ ಯೋಜನೆಗೆ ಹೆಚ್ಚಿನ ಗಮನ ನೀಡುತ್ತೇನೆ. ಶಿವಮೊಗ್ಗಕ್ಕೂ ಭೇಟಿ ನೀಡಿ, ಪರಿಣಿತರೊಂದಿಗೆ ಸಮಾಲೋಚಿಸಿ ಕೆಎಫ್ಡಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವುದಾಗಿ ತಿಳಿಸಿದರು.</p>.<p>ವೇದಿಕೆಯಲ್ಲಿ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ, ಹಿರಿಯ ಪತ್ರಕರ್ತ ಗೋಪಾಲ್ ಯಡಗೆರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ‘ಎರಡು ವರ್ಷಗಳಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡುವ ಅವಕಾಶ ದೊರೆತಿದೆ. ಇಲ್ಲಿ ಕೆಲಸ ಮಾಡಿದ್ದು ಅದೃಷ್ಟ’ ಎಂದು ವರ್ಗಾವಣೆಗೊಂಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.</p>.<p>ಇಲ್ಲಿನ ಪ್ರೆಸ್ಟ್ರಸ್ಟ್ನಲ್ಲಿ ಶುಕ್ರವಾರ ಸ್ನೇಹಕೂಟದಲ್ಲಿ ಭಾಗಿಯಾಗಿದ್ದ ಅವರು, ಜಿಲ್ಲೆಯಲ್ಲಿ ಅರಣ್ಯ ಸಂಬಂಧಿ ಸಮಸ್ಯೆಗಳು, ಕಂದಾಯ ದಾಖಲೆ ಸಮಸ್ಯೆ, ಭೂಸ್ವಾಧೀನ ಪ್ರಕ್ರಿಯೆ, ಶರಾವತಿ ಸಂತ್ರಸ್ತರ ಸಮಸ್ಯೆಗಳು ಸೇರಿದಂತೆ ಸವಾಲಿನ ಕೆಲಸಗಳನ್ನು ಮಾಡಿದ ತೃಪ್ತಿ ಇದೆ ಎಂದರು.</p>.<p>ಇಲ್ಲಿನ ಸಾರ್ವಜನಿಕರು, ಅಧಿಕಾರಿಗಳು, ಜನಪ್ರತಿನಿಧಿಗಳಿಂದ ಹೆಚ್ಚಿನ ಬೆಂಬಲವೂ ದೊರೆತಿದೆ. ಜಿಲ್ಲಾಧಿಕಾರಿಯಾಗಿ ಇಲ್ಲಿ ಸಾಕಷ್ಟು ಆಡಳಿತಾತ್ಮಕ ಸಂಗತಿಗಳನ್ನು ಕಲಿತಿದ್ದೇನೆ. ಬಿ.ಎಚ್ ರಸ್ತೆಯ ವಿಸ್ತರಣೆಗೆ ಸಂಬಂಧಿಸಿದಂತೆ 30 ಕಡೆ ಭೂಮಿ ಸ್ವಾಧೀನ ಸಮಸ್ಯೆ ಬಗೆಹರಿಸಿದ ಸಮಾಧಾನವೂ ತಮಗಿದೆ ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿ ಮಂಗನ ಕಾಯಿಲೆ ತೀವ್ರಗೊಳ್ಳುತ್ತಿದೆ. ಈಗ ಆರೋಗ್ಯ ಇಲಾಖೆಯ ಆಯುಕ್ತನಾಗಿ ತೆರಳುತ್ತಿದ್ದೇನೆ. ಮಂಗನ ಕಾಯಿಲೆ ಪರಿಹಾರಕ್ಕೆ ಲಸಿಕೆ ಸಿದ್ಧಪಡಿಸುವ ಯೋಜನೆಗೆ ಹೆಚ್ಚಿನ ಗಮನ ನೀಡುತ್ತೇನೆ. ಶಿವಮೊಗ್ಗಕ್ಕೂ ಭೇಟಿ ನೀಡಿ, ಪರಿಣಿತರೊಂದಿಗೆ ಸಮಾಲೋಚಿಸಿ ಕೆಎಫ್ಡಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವುದಾಗಿ ತಿಳಿಸಿದರು.</p>.<p>ವೇದಿಕೆಯಲ್ಲಿ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ, ಹಿರಿಯ ಪತ್ರಕರ್ತ ಗೋಪಾಲ್ ಯಡಗೆರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>