ಮುಂಗಾರು ಅವಧಿಗೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ನೆರೆ ಹಾವಳಿಯಿಂದ ಹಾನಿಯಾಗುವ ಗ್ರಾಮಗಳನ್ನು ಗುರುತಿಸಬೇಕು. ಭೂಕುಸಿತ ಸಂಭವಿಸಬಹುದಾದ ಸ್ಥಳಗಳು, ನೆರೆ ನೀರಿಗೆ ಮುಳುಗಬಹುದಾದ ಕಿರು ಸೇತುವೆಗಳು, ನೀರು ನಿಲ್ಲಬಹುದಾದ ತಗ್ಗು ಪ್ರದೇಶಗಳನ್ನು ಗುರುತಿಸಬೇಕು. ಜಲಾಶಯಗಳು, ಕೆರೆಕಟ್ಟೆಗಳ ನೀರಿನ ಮಟ್ಟದ ಮೇಲೆ ನಿಗಾ ಇರಿಸಬೇಕು. ನಗರ ಪ್ರದೇಶದಲ್ಲಿ ನೀರು ಸರಾಗವಾಗಿ ಹರಿದು ಹೋಗಲು ಗಿಡಗಂಟಿಗಳು, ಕಸಕಡ್ಡಿಗಳನ್ನು ತೆರವುಗೊಳಿಸಿ ಸ್ವಚ್ಛ ಮಾಡುವ ಕಾರ್ಯ ಶೀಘ್ರ ಪೂರ್ಣಗೊಳಿಸಬೇಕು ಎಂದರು.