‘ನನ್ನನ್ನು ಯಾರೂ ಹುಡುಕುವ ಪ್ರಯತ್ನ ಮಾಡಬೇಡಿ. ನಾನು ಆತ್ಮಹತ್ಯೆ ಮಾಡಿಕೊಳ್ಳಲು ಹೋಗುತ್ತಿದ್ದೇನೆ’ ಎಂದು ಸಂದೇಶದಲ್ಲಿ ನಮೂದಿಸಿದ್ದರು. ಜಿಲ್ಲಾಧಿಕಾರಿ ಕಚೇರಿಯಲ್ಲಿನ ಕೆಲಸದ ಒತ್ತಡ, ಸರ್ಕಾರಿ ವ್ಯವಸ್ಥೆಯಲ್ಲಿನ ಲೋಪ, ಹಿರಿಯ ಅಧಿಕಾರಿಗಳ ಮಾರ್ಗದರ್ಶನದ ಕೊರತೆ, ಕೆಲಸದ ಒತ್ತಡಗಳ ಮಧ್ಯೆ ಕುಟುಂಬದ ಸದಸ್ಯರಿಗೆ ಸಮಯ ನೀಡಲು ಸಾಧ್ಯವಾಗದಿರುವುದು, ಕೆಳ ಹಂತದ ಅಧಿಕಾರಿಗಳನ್ನು ಹೇಗೆ ಬಲಿಪಶು ಮಾಡಲಾಗುತ್ತದೆ ಎಂಬ ಅಂಶಗಳನ್ನು ಸವಿಸ್ತಾರವಾಗಿ ಬರೆದಿದ್ದರು.