<p><strong>ಶಿಕಾರಿಪುರ:</strong> ‘ಪರಿಭಾವಿತ (ಡೀಮ್ಡ್) ಅರಣ್ಯ ಕುರಿತ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ಮುನ್ನ ರೈತರು ಈಗಾಗಲೇ ಕೃಷಿ ಚಟುವಟಿಕೆ ನಡೆಸುತ್ತಿರುವ ಪ್ರದೇಶವನ್ನು ಗಮನದಲ್ಲಿ ಇಟ್ಟುಕೊಂಡು ಪ್ರಸ್ತಾವ ಸಿದ್ಧಪಡಿಸಬೇಕು’ ಎಂದು ಸಂಸದ ಬಿ.ವೈ.ರಾಘವೇಂದ್ರ ಸೂಚಿಸಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಅರಣ್ಯ, ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಪರಿಭಾವಿತ ಅರಣ್ಯ ಪ್ರದೇಶದ ವ್ಯಾಪ್ತಿ ಕುರಿತು ಈಗಾಗಲೇ ಸಿದ್ಧಪಡಿಸಿರುವ ವರದಿಯನ್ನು ಸರ್ಕಾರ ಪುನಃ ಪರಿಶೀಲನೆಗೆ ಕಳುಹಿಸಿದೆ. ಇದೀಗ ಕಂದಾಯ, ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಲು ಅವಕಾಶ ಇದ್ದು, ಈ ಸಂದರ್ಭದಲ್ಲಿ ಅಭಿವೃದ್ಧಿ ಗಮನದಲ್ಲಿ ಇಟ್ಟುಕೊಳ್ಳಬೇಕು. ಗೋಮಾಳ ಪ್ರದೇಶ ಸೇರಿಸುವುದು ಸರಿಯಲ್ಲ. ಈಗಾಗಲೇ ಜನಸಂಖ್ಯೆ ಹೆಚ್ಚಿರುವ ಪ್ರದೇಶ, ಕೃಷಿ ಚಟುವಟಿಕೆ ಪ್ರದೇಶ ಸೇರಿಸಿದರೆ ಜನರಿಗೆ ತೊಂದರೆ ಆಗುತ್ತದೆ. ಅರಣ್ಯೇತರ ಚಟುವಟಿಕೆ ನಡೆಸಲು ಆಗುವುದಿಲ್ಲ. ಈ ಎಲ್ಲ ಅಂಶ ಗಮನದಲ್ಲಿ ಇಟ್ಟುಕೊಂಡು ಪ್ರಸ್ತಾವ ಸಲ್ಲಿಸಬೇಕು’ ಎಂದರು.</p>.<p>‘ಈ ಹಿಂದಿನ ಡೀಮ್ಡ್ ಅರಣ್ಯ ಪ್ರಸ್ತಾವದಲ್ಲಿ ಗ್ರಾಮಗಳು, ಈಗಾಗಲೇ ಸಾಗುವಳಿ ಪಡೆದಿರುವ ಕೃಷಿ ಪ್ರದೇಶ ಇದ್ದು, ಅದನ್ನು ಪುನರ್ ಪರಿಶೀಲನೆ ಮಾಡಬೇಕು ಎನ್ನುವ ಮಲೆನಾಡು ಭಾಗದ ಶಾಸಕರ ಒತ್ತಡಕ್ಕೆ ಸರ್ಕಾರ ಮಣಿದಿದೆ. ಈ ಸಂದರ್ಭದಲ್ಲಿ ಅಧಿಕಾರಿಗಳು ಕಾನೂನು ಪಾಲನೆ ಜತೆ ಜನಹಿತಕ್ಕೂ ಆದ್ಯತೆ ನೀಡಬೇಕು’ ಎಂದು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.</p>.<p>ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ತಹಶೀಲ್ದಾರ್ ವಾಣಿ, ಎಸಿಎಫ್ ರವೀಂದ್ರನಾಯ್ಕ, ಆರ್ಎಫ್ಒ ಪರಶುರಾಮ್, ಮೂರು ಅರಣ್ಯ ವಲಯಗಳ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-42-1644795330</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಕಾರಿಪುರ:</strong> ‘ಪರಿಭಾವಿತ (ಡೀಮ್ಡ್) ಅರಣ್ಯ ಕುರಿತ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ಮುನ್ನ ರೈತರು ಈಗಾಗಲೇ ಕೃಷಿ ಚಟುವಟಿಕೆ ನಡೆಸುತ್ತಿರುವ ಪ್ರದೇಶವನ್ನು ಗಮನದಲ್ಲಿ ಇಟ್ಟುಕೊಂಡು ಪ್ರಸ್ತಾವ ಸಿದ್ಧಪಡಿಸಬೇಕು’ ಎಂದು ಸಂಸದ ಬಿ.ವೈ.ರಾಘವೇಂದ್ರ ಸೂಚಿಸಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಅರಣ್ಯ, ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಪರಿಭಾವಿತ ಅರಣ್ಯ ಪ್ರದೇಶದ ವ್ಯಾಪ್ತಿ ಕುರಿತು ಈಗಾಗಲೇ ಸಿದ್ಧಪಡಿಸಿರುವ ವರದಿಯನ್ನು ಸರ್ಕಾರ ಪುನಃ ಪರಿಶೀಲನೆಗೆ ಕಳುಹಿಸಿದೆ. ಇದೀಗ ಕಂದಾಯ, ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಲು ಅವಕಾಶ ಇದ್ದು, ಈ ಸಂದರ್ಭದಲ್ಲಿ ಅಭಿವೃದ್ಧಿ ಗಮನದಲ್ಲಿ ಇಟ್ಟುಕೊಳ್ಳಬೇಕು. ಗೋಮಾಳ ಪ್ರದೇಶ ಸೇರಿಸುವುದು ಸರಿಯಲ್ಲ. ಈಗಾಗಲೇ ಜನಸಂಖ್ಯೆ ಹೆಚ್ಚಿರುವ ಪ್ರದೇಶ, ಕೃಷಿ ಚಟುವಟಿಕೆ ಪ್ರದೇಶ ಸೇರಿಸಿದರೆ ಜನರಿಗೆ ತೊಂದರೆ ಆಗುತ್ತದೆ. ಅರಣ್ಯೇತರ ಚಟುವಟಿಕೆ ನಡೆಸಲು ಆಗುವುದಿಲ್ಲ. ಈ ಎಲ್ಲ ಅಂಶ ಗಮನದಲ್ಲಿ ಇಟ್ಟುಕೊಂಡು ಪ್ರಸ್ತಾವ ಸಲ್ಲಿಸಬೇಕು’ ಎಂದರು.</p>.<p>‘ಈ ಹಿಂದಿನ ಡೀಮ್ಡ್ ಅರಣ್ಯ ಪ್ರಸ್ತಾವದಲ್ಲಿ ಗ್ರಾಮಗಳು, ಈಗಾಗಲೇ ಸಾಗುವಳಿ ಪಡೆದಿರುವ ಕೃಷಿ ಪ್ರದೇಶ ಇದ್ದು, ಅದನ್ನು ಪುನರ್ ಪರಿಶೀಲನೆ ಮಾಡಬೇಕು ಎನ್ನುವ ಮಲೆನಾಡು ಭಾಗದ ಶಾಸಕರ ಒತ್ತಡಕ್ಕೆ ಸರ್ಕಾರ ಮಣಿದಿದೆ. ಈ ಸಂದರ್ಭದಲ್ಲಿ ಅಧಿಕಾರಿಗಳು ಕಾನೂನು ಪಾಲನೆ ಜತೆ ಜನಹಿತಕ್ಕೂ ಆದ್ಯತೆ ನೀಡಬೇಕು’ ಎಂದು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.</p>.<p>ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ತಹಶೀಲ್ದಾರ್ ವಾಣಿ, ಎಸಿಎಫ್ ರವೀಂದ್ರನಾಯ್ಕ, ಆರ್ಎಫ್ಒ ಪರಶುರಾಮ್, ಮೂರು ಅರಣ್ಯ ವಲಯಗಳ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-42-1644795330</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>