<p><strong>ಶಿವಮೊಗ್ಗ:</strong> ‘ಮಕ್ಕಳ ಹಕ್ಕುಗಳ ರಕ್ಷಣೆ, ಪಾಲನೆ ಮತ್ತು ಪೋಷಣೆಯಲ್ಲಿ ಜಿಲ್ಲೆಯು ಅಗ್ರಸ್ಥಾನ ಪಡೆದಿದೆ. ಇದರಲ್ಲಿ ಅಧಿಕಾರ ವರ್ಗದ ಪಾತ್ರ ಪ್ರಮುಖವಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್.ಸಂತೋಷ್ ಶ್ಲಾಘಿಸಿದರು.</p>.<p>ನಗರದ ಜಿಲ್ಲಾ ಡಯಟ್ ಸಂಸ್ಥೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಬಾಲ್ಯ ವಿವಾಹ, ಪೋಕ್ಸೊ ಮತ್ತು ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಅರಿವು ಹಾಗೂ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಮಕ್ಕಳ ಸುರಕ್ಷತೆ, ಮೂಲ ಸೌಕರ್ಯಗಳ ಕುರಿತಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪ್ರತಿ ಮಗುವಿಗೆ ಸಮಾಜದಲ್ಲಿ ಪಾಲನೆ ಪೋಷಣೆ ಸಿಗಬೇಕು. ದೊರಕದಿದ್ದಾಗ ಅದು ಕಾನೂನಿನ ಉಲ್ಲಂಘನೆಯಾಗುತ್ತದೆ. ಆದ್ದರಿಂದ ಪಾಲನೆ ಪೋಷಣೆ ಸರಿಯಾಗಿ ಮಾಡಿ, ಈ ಮಕ್ಕಳು ಮುಖ್ಯವಾಹಿನಿಗೆ ಬರುವಂತೆ ಪಾಲನಾ ಸಂಸ್ಥೆಗಳು ಮಾಡಬೇಕು’ ಎಂದರು. <br><br>‘ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣಾ ಕೊಳ್ಳ ಮಾತನಾಡಿ, ಅಧಿಕಾರಿಗಳು ಬಾಲ್ಯ ವಿವಾಹ, ಪೋಕ್ಸೊ ಕಾಯ್ದೆ ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ಸಂಪೂರ್ಣ ತಿಳಿದುಕೊಂಡು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು’ ಎಂದರು. <br> <br>ಕಾರ್ಯಕ್ರಮದಲ್ಲಿ ಮಕ್ಕಳ ರಕ್ಷಣಾಧಿಕಾರಿ ಆರ್.ಮಂಜುನಾಥ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್ ಖಾನ್, ಡಯಟ್ ಪ್ರಾಂಶುಪಾಲ ಎಚ್.ಆರ್. ಕೃಷ್ಣಮೂರ್ತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ಮಕ್ಕಳ ಹಕ್ಕುಗಳ ರಕ್ಷಣೆ, ಪಾಲನೆ ಮತ್ತು ಪೋಷಣೆಯಲ್ಲಿ ಜಿಲ್ಲೆಯು ಅಗ್ರಸ್ಥಾನ ಪಡೆದಿದೆ. ಇದರಲ್ಲಿ ಅಧಿಕಾರ ವರ್ಗದ ಪಾತ್ರ ಪ್ರಮುಖವಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್.ಸಂತೋಷ್ ಶ್ಲಾಘಿಸಿದರು.</p>.<p>ನಗರದ ಜಿಲ್ಲಾ ಡಯಟ್ ಸಂಸ್ಥೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಬಾಲ್ಯ ವಿವಾಹ, ಪೋಕ್ಸೊ ಮತ್ತು ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಅರಿವು ಹಾಗೂ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಮಕ್ಕಳ ಸುರಕ್ಷತೆ, ಮೂಲ ಸೌಕರ್ಯಗಳ ಕುರಿತಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪ್ರತಿ ಮಗುವಿಗೆ ಸಮಾಜದಲ್ಲಿ ಪಾಲನೆ ಪೋಷಣೆ ಸಿಗಬೇಕು. ದೊರಕದಿದ್ದಾಗ ಅದು ಕಾನೂನಿನ ಉಲ್ಲಂಘನೆಯಾಗುತ್ತದೆ. ಆದ್ದರಿಂದ ಪಾಲನೆ ಪೋಷಣೆ ಸರಿಯಾಗಿ ಮಾಡಿ, ಈ ಮಕ್ಕಳು ಮುಖ್ಯವಾಹಿನಿಗೆ ಬರುವಂತೆ ಪಾಲನಾ ಸಂಸ್ಥೆಗಳು ಮಾಡಬೇಕು’ ಎಂದರು. <br><br>‘ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣಾ ಕೊಳ್ಳ ಮಾತನಾಡಿ, ಅಧಿಕಾರಿಗಳು ಬಾಲ್ಯ ವಿವಾಹ, ಪೋಕ್ಸೊ ಕಾಯ್ದೆ ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ಸಂಪೂರ್ಣ ತಿಳಿದುಕೊಂಡು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು’ ಎಂದರು. <br> <br>ಕಾರ್ಯಕ್ರಮದಲ್ಲಿ ಮಕ್ಕಳ ರಕ್ಷಣಾಧಿಕಾರಿ ಆರ್.ಮಂಜುನಾಥ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್ ಖಾನ್, ಡಯಟ್ ಪ್ರಾಂಶುಪಾಲ ಎಚ್.ಆರ್. ಕೃಷ್ಣಮೂರ್ತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>