<p><strong>ಶಿವಮೊಗ್ಗ:</strong> ನಗರದ ಖ್ಯಾತ ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ (55) ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ (34) ಇಲ್ಲಿನ ಅಶ್ವತ್ಥ ನಗರದ ಅವರ ನಿವಾಸದಲ್ಲಿ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>ಮೂಲತಃ ದಾವಣಗೆರೆ ಜಿಲ್ಲೆ ನ್ಯಾಮತಿಯ ಡಾ.ನಾಗರಾಜ ಹೊಮ್ಮರಡಿ ಕುಟುಂಬ ನಗರದ ಗಾಂಧಿ ನಗರದಲ್ಲಿ ಹೊಮ್ಮರಡಿ ಆಸ್ಪತ್ರೆಯ ಮೂಲಕ ಹಲವು ವರ್ಷಗಳಿಂದ ವೈದ್ಯಕೀಯ ಸೇವೆಯಲ್ಲಿ ತೊಡಗಿತ್ತು.</p><p>ಮಕ್ಕಳ ತಜ್ಞರಾಗಿದ್ದ ಡಾ.ನಾಗರಾಜ ಹೊಮ್ಮರಡಿ ಕೂಡ 10 ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ರ ಆಕಾಶ್ ಹೊಮ್ಮರಡಿ ಅವರ ಪತ್ನಿ ನವ್ಯಶ್ರೀ ಕೂಡ ಒಂದೂವರೆ ವರ್ಷದ ಹಿಂದೆ ಅದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.</p><p>ಡಾ.ಜಯಶ್ರೀ ನೆಲ ಮಹಡಿಯ ಕೊಠಡಿಲ್ಲಿ ನೇಣು ಬಿಗಿದುಕೊಂಡಿದ್ದು, ಆಕಾಶ್ ಶವ ಮೊದಲ ಮಹಡಿ ಕೊಠಡಿಯಲ್ಲಿ ಪತ್ತೆಯಾಗಿದೆ. ಆಕಾಶ್ ಅವರಿಗೆ ಕಳೆದ ಮೇ ತಿಂಗಳಲ್ಲಿ ಮತ್ತೊಂದು ಮದುವೆ ಆಗಿತ್ತು. ಆಕಾಶ್ ಪತ್ನಿ ಮತ್ತೊಂದು ಕೊಠಡಿಯಲ್ಲಿ ಇದ್ದರು ಎಂದು ತಿಳಿದುಬಂದಿದೆ.</p><p>'ಸೊಸೆ ನವ್ಯಶ್ರೀ ಸಾವಿನಿಂದ ಕುಟುಂಬ ಬೇಸರಕ್ಕೆ ಒಳಗಾಗಿತ್ತು ಎಂಬುದು ಸ್ಥಳದಲ್ಲಿ ದೊರೆತ ಡೆತ್ನೋಟ್ನಲ್ಲಿ ವ್ಯಕ್ತವಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ. </p><p>ಸ್ಥಳಕ್ಕೆ ವಿನೋಬ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ನಗರದ ಖ್ಯಾತ ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ (55) ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ (34) ಇಲ್ಲಿನ ಅಶ್ವತ್ಥ ನಗರದ ಅವರ ನಿವಾಸದಲ್ಲಿ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>ಮೂಲತಃ ದಾವಣಗೆರೆ ಜಿಲ್ಲೆ ನ್ಯಾಮತಿಯ ಡಾ.ನಾಗರಾಜ ಹೊಮ್ಮರಡಿ ಕುಟುಂಬ ನಗರದ ಗಾಂಧಿ ನಗರದಲ್ಲಿ ಹೊಮ್ಮರಡಿ ಆಸ್ಪತ್ರೆಯ ಮೂಲಕ ಹಲವು ವರ್ಷಗಳಿಂದ ವೈದ್ಯಕೀಯ ಸೇವೆಯಲ್ಲಿ ತೊಡಗಿತ್ತು.</p><p>ಮಕ್ಕಳ ತಜ್ಞರಾಗಿದ್ದ ಡಾ.ನಾಗರಾಜ ಹೊಮ್ಮರಡಿ ಕೂಡ 10 ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ರ ಆಕಾಶ್ ಹೊಮ್ಮರಡಿ ಅವರ ಪತ್ನಿ ನವ್ಯಶ್ರೀ ಕೂಡ ಒಂದೂವರೆ ವರ್ಷದ ಹಿಂದೆ ಅದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.</p><p>ಡಾ.ಜಯಶ್ರೀ ನೆಲ ಮಹಡಿಯ ಕೊಠಡಿಲ್ಲಿ ನೇಣು ಬಿಗಿದುಕೊಂಡಿದ್ದು, ಆಕಾಶ್ ಶವ ಮೊದಲ ಮಹಡಿ ಕೊಠಡಿಯಲ್ಲಿ ಪತ್ತೆಯಾಗಿದೆ. ಆಕಾಶ್ ಅವರಿಗೆ ಕಳೆದ ಮೇ ತಿಂಗಳಲ್ಲಿ ಮತ್ತೊಂದು ಮದುವೆ ಆಗಿತ್ತು. ಆಕಾಶ್ ಪತ್ನಿ ಮತ್ತೊಂದು ಕೊಠಡಿಯಲ್ಲಿ ಇದ್ದರು ಎಂದು ತಿಳಿದುಬಂದಿದೆ.</p><p>'ಸೊಸೆ ನವ್ಯಶ್ರೀ ಸಾವಿನಿಂದ ಕುಟುಂಬ ಬೇಸರಕ್ಕೆ ಒಳಗಾಗಿತ್ತು ಎಂಬುದು ಸ್ಥಳದಲ್ಲಿ ದೊರೆತ ಡೆತ್ನೋಟ್ನಲ್ಲಿ ವ್ಯಕ್ತವಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ. </p><p>ಸ್ಥಳಕ್ಕೆ ವಿನೋಬ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>