<p><strong>ಶಿವಮೊಗ್ಗ:</strong> ನಗರದ ವ್ಯಕ್ತಿಯೊಬ್ಬರು ಫೇಸ್ಬುಕ್ನಲ್ಲಿ ಕಂಡ ಆಕರ್ಷಕ ಜಾಹೀರಾತು ನಂಬಿ ಚಿನ್ನದ ಮೇಲೆ ಹಾಗೂ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಹೆಸರಿನಲ್ಲಿ ₹61 ಲಕ್ಷ ಕಳೆದುಕೊಂಡಿದ್ದಾರೆ. ಈ ಬಗ್ಗೆ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಫೇಸ್ಬುಕ್ನಲ್ಲಿ ಪ್ರಕಟವಾದ ‘LF Work’ ಕಂಪನಿಯ ಜಾಹೀರಾತಿನಲ್ಲಿ ಕಡಿಮೆ ಸಮಯದಲ್ಲಿ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಲಾಗಿತ್ತು. ಜಾಹೀರಾತಿನ ಲಿಂಕ್ ಮೂಲಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿಸಿಕೊಂಡ ಸಂತ್ರಸ್ತರನ್ನು ನಂತರ ವಾಟ್ಸ್ಆ್ಯಪ್ ಗುಂಪಿಗೆ ಸೇರಿಸಿ ಹಣ ಹೂಡಿಕೆ ಮಾಡಿಸಲಾಗಿದೆ.</p>.<p><strong>ಯುಪಿಐ ಐಡಿ ಡಿಲೀಟ್:</strong> ಹಂತ ಹಂತವಾಗಿ ವಿವಿಧ ಯುಪಿಐ ಐಡಿಗಳಿಗೆ ಹಣ ವರ್ಗಾಯಿಸುವಂತೆ ಹೇಳಲಾಗಿದ್ದು, ಹಣ ಪಾವತಿಸಿದ ತಕ್ಷಣವೇ ಆ ಯುಪಿಐ ಐಡಿಗಳನ್ನು ಡಿಲೀಟ್ ಮಾಡಲಾಗಿದೆ. ಈ ರೀತಿ ಒಟ್ಟು ₹61,00,000 ಮೊತ್ತವನ್ನು ವಂಚಕರು ಪಡೆದುಕೊಂಡಿದ್ದಾರೆ.</p>.<p>ಲಾಭಾಂಶ ಸಿಗದೆ, ಮೂಲ ಹಣವೂ ವಾಪಸ್ ಬರದಾದಾಗ ತಾವು ವಂಚನೆಗೆ ಒಳಗಾಗಿರುವುದನ್ನು ಅರಿತ ವ್ಯಕ್ತಿ ಸೈಬರ್ ಪೊಲೀಸರ ಮೊರೆ ಹೋಗಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ನಗರದ ವ್ಯಕ್ತಿಯೊಬ್ಬರು ಫೇಸ್ಬುಕ್ನಲ್ಲಿ ಕಂಡ ಆಕರ್ಷಕ ಜಾಹೀರಾತು ನಂಬಿ ಚಿನ್ನದ ಮೇಲೆ ಹಾಗೂ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಹೆಸರಿನಲ್ಲಿ ₹61 ಲಕ್ಷ ಕಳೆದುಕೊಂಡಿದ್ದಾರೆ. ಈ ಬಗ್ಗೆ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಫೇಸ್ಬುಕ್ನಲ್ಲಿ ಪ್ರಕಟವಾದ ‘LF Work’ ಕಂಪನಿಯ ಜಾಹೀರಾತಿನಲ್ಲಿ ಕಡಿಮೆ ಸಮಯದಲ್ಲಿ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಲಾಗಿತ್ತು. ಜಾಹೀರಾತಿನ ಲಿಂಕ್ ಮೂಲಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿಸಿಕೊಂಡ ಸಂತ್ರಸ್ತರನ್ನು ನಂತರ ವಾಟ್ಸ್ಆ್ಯಪ್ ಗುಂಪಿಗೆ ಸೇರಿಸಿ ಹಣ ಹೂಡಿಕೆ ಮಾಡಿಸಲಾಗಿದೆ.</p>.<p><strong>ಯುಪಿಐ ಐಡಿ ಡಿಲೀಟ್:</strong> ಹಂತ ಹಂತವಾಗಿ ವಿವಿಧ ಯುಪಿಐ ಐಡಿಗಳಿಗೆ ಹಣ ವರ್ಗಾಯಿಸುವಂತೆ ಹೇಳಲಾಗಿದ್ದು, ಹಣ ಪಾವತಿಸಿದ ತಕ್ಷಣವೇ ಆ ಯುಪಿಐ ಐಡಿಗಳನ್ನು ಡಿಲೀಟ್ ಮಾಡಲಾಗಿದೆ. ಈ ರೀತಿ ಒಟ್ಟು ₹61,00,000 ಮೊತ್ತವನ್ನು ವಂಚಕರು ಪಡೆದುಕೊಂಡಿದ್ದಾರೆ.</p>.<p>ಲಾಭಾಂಶ ಸಿಗದೆ, ಮೂಲ ಹಣವೂ ವಾಪಸ್ ಬರದಾದಾಗ ತಾವು ವಂಚನೆಗೆ ಒಳಗಾಗಿರುವುದನ್ನು ಅರಿತ ವ್ಯಕ್ತಿ ಸೈಬರ್ ಪೊಲೀಸರ ಮೊರೆ ಹೋಗಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>