<p><strong>ಶಿವಮೊಗ್ಗ :</strong> ಇಲ್ಲಿನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ (ಡಿಸಿಸಿ ಬ್ಯಾಂಕ್) 2014ರಲ್ಲಿ ನಕಲಿ ಬಂಗಾರ ಅಡಮಾನ ಇಟ್ಟು ₹62.77 ಕೋಟಿ ಸಾಲ ಪಡೆದು ವಂಚಿಸಿದ್ದ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಎರಡನೇ ದಿನವು ಜಿಲ್ಲೆಯ ವಿವಿಧೆಡೆ ದಾಳಿ ಮುಂದುವರೆಸಿದ್ದಾರೆ. </p><p>ಶಿವಮೊಗ್ಗ, ತೀರ್ಥಹಳ್ಳಿಯ ಕೆಲವೆಡೆ ಬುಧವಾರ ಇಡಿ ಅಧಿಕಾರಿಗಳಿಂದ ದಾಳಿ ನಡೆದಿದೆ.</p><p>ಶಿವಮೊಗ್ಗದ ಅಚ್ಚುತರಾವ್ ಬಡಾವಣೆಯಲ್ಲಿರುವ ಡಿಸಿಸಿ ಬ್ಯಾಂಕ್ ನಿರ್ದೇಶಕ ಜಿ.ಎನ್.ಸುಧೀರ್ ಅವರ ಮನೆ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಕರಣ ನಡೆದಾಗಲೂ ಸುಧೀರ್ ನಿರ್ದೇಶಕರಾಗಿದ್ದರು.</p><p>ಇನ್ನೊಂದೆಡೆ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಕೃಷ್ಣಮೂರ್ತಿ ಭಟ್ ಮನೆ ಮೇಲೂ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. </p><p>ಸುಧೀರ್ ಹಾಗೂ ಕೃಷ್ಣಮೂರ್ತಿ ಭಟ್ ಇಬ್ಬರೂ ಹಾಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ :</strong> ಇಲ್ಲಿನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ (ಡಿಸಿಸಿ ಬ್ಯಾಂಕ್) 2014ರಲ್ಲಿ ನಕಲಿ ಬಂಗಾರ ಅಡಮಾನ ಇಟ್ಟು ₹62.77 ಕೋಟಿ ಸಾಲ ಪಡೆದು ವಂಚಿಸಿದ್ದ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಎರಡನೇ ದಿನವು ಜಿಲ್ಲೆಯ ವಿವಿಧೆಡೆ ದಾಳಿ ಮುಂದುವರೆಸಿದ್ದಾರೆ. </p><p>ಶಿವಮೊಗ್ಗ, ತೀರ್ಥಹಳ್ಳಿಯ ಕೆಲವೆಡೆ ಬುಧವಾರ ಇಡಿ ಅಧಿಕಾರಿಗಳಿಂದ ದಾಳಿ ನಡೆದಿದೆ.</p><p>ಶಿವಮೊಗ್ಗದ ಅಚ್ಚುತರಾವ್ ಬಡಾವಣೆಯಲ್ಲಿರುವ ಡಿಸಿಸಿ ಬ್ಯಾಂಕ್ ನಿರ್ದೇಶಕ ಜಿ.ಎನ್.ಸುಧೀರ್ ಅವರ ಮನೆ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಕರಣ ನಡೆದಾಗಲೂ ಸುಧೀರ್ ನಿರ್ದೇಶಕರಾಗಿದ್ದರು.</p><p>ಇನ್ನೊಂದೆಡೆ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಕೃಷ್ಣಮೂರ್ತಿ ಭಟ್ ಮನೆ ಮೇಲೂ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. </p><p>ಸುಧೀರ್ ಹಾಗೂ ಕೃಷ್ಣಮೂರ್ತಿ ಭಟ್ ಇಬ್ಬರೂ ಹಾಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>