<p>ಶಿವಮೊಗ್ಗ: ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಯೂರಿಯಾ ಹಾಗೂ ಡಿಎಪಿ ಸೇರಿ ರಸಗೊಬ್ಬರದ ಕೊರತೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಎಚ್.ಆರ್. ಬಸವರಾಜಪ್ಪ ಆಗ್ರಹಿಸಿದರು.</p>.<p>‘ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯಿಂದ ಯುರಿಯಾ ಹಾಗೂ ಡಿಎಪಿ ಗೊಬ್ಬರಗಳ ಬೆಲೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ವಿದೇಶಗಳಿಂದ ಬರುತ್ತಿದ್ದ ಕಚ್ಚಾ ವಸ್ತುಗಳ ಕೊರತೆಯಿಂದ ಗೊಬ್ಬರ ಉತ್ಪಾದನೆಯೂ ಕುಂಠಿತಗೊಂಡಿದೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಮುಂಗಾರು ಹಂಗಾಮಿನಲ್ಲಿ ದೇಶಕ್ಕೆ ಅಂದಾಜು ಎರಡು ಕೋಟಿ ಟನ್ ಯೂರಿಯಾ ಅವಶ್ಯಕತೆ ಇದ್ದು, ಈಗ ಅಗತ್ಯ ಪ್ರಮಾಣದ ಅರ್ಧಕ್ಕಿಂತ ಕಡಿಮೆ ಗೊಬ್ಬರ ಮಾತ್ರ ಲಭ್ಯವಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ’ ಎಂದು ಎಚ್ಚರಿಸಿದರು.</p>.<p>‘ಆದ್ದರಿಂದ ಬಗರ್ಹುಕುಂ ರೈತರಿಗೂ ಗೊಬ್ಬರ ವಿತರಿಸಲು ಸರ್ಕಾರ ವಿಶೇಷ ಮಾನದಂಡ ರೂಪಿಸಬೇಕು. ಯೂರಿಯಾ ಮತ್ತು ಡಿಎಪಿ ಗೊಬ್ಬರ ಎಲ್ಲ ರೈತರಿಗೆ ಸಮರ್ಪಕವಾಗಿ ತಲುಪುವಂತೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ಪರವಾನಗಿ ಭೂಮಾಪಕರು ನಡೆಸುತ್ತಿರುವ ಮುಷ್ಕರದಿಂದ ರೈತರಿಗೆ ತೊಂದರೆ ಉಂಟಾಗಿದೆ. ಸರ್ವೆ, ಹದ್ದುಬಸ್ತು, ಪೋಡಿ ಮುಕ್ತ ಅಭಿಯಾನ ಹಾಗೂ ನ್ಯಾಯಾಲಯ ಸಂಬಂಧಿತ ಕೆಲಸಗಳು ಸ್ಥಗಿತಗೊಂಡಿವೆ. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಭೂಮಾಪಕರ ಸಮಸ್ಯೆ ಪರಿಹರಿಸಬೇಕು’ ಎಂದು ಮನವಿ ಮಾಡಿದರು.</p>.<p>ಇ.ಬಿ. ಜಗದೀಶ್, ಕೆ.ರಾಘವೇಂದ್ರ, ಹಿಟ್ಟೂರು ರಾಜು, ಸಿ.ಬಿ. ಹನುಮಂತಪ್ಪ, ಬಸವರಾಜು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-42-928338629</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಯೂರಿಯಾ ಹಾಗೂ ಡಿಎಪಿ ಸೇರಿ ರಸಗೊಬ್ಬರದ ಕೊರತೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಎಚ್.ಆರ್. ಬಸವರಾಜಪ್ಪ ಆಗ್ರಹಿಸಿದರು.</p>.<p>‘ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯಿಂದ ಯುರಿಯಾ ಹಾಗೂ ಡಿಎಪಿ ಗೊಬ್ಬರಗಳ ಬೆಲೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ವಿದೇಶಗಳಿಂದ ಬರುತ್ತಿದ್ದ ಕಚ್ಚಾ ವಸ್ತುಗಳ ಕೊರತೆಯಿಂದ ಗೊಬ್ಬರ ಉತ್ಪಾದನೆಯೂ ಕುಂಠಿತಗೊಂಡಿದೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಮುಂಗಾರು ಹಂಗಾಮಿನಲ್ಲಿ ದೇಶಕ್ಕೆ ಅಂದಾಜು ಎರಡು ಕೋಟಿ ಟನ್ ಯೂರಿಯಾ ಅವಶ್ಯಕತೆ ಇದ್ದು, ಈಗ ಅಗತ್ಯ ಪ್ರಮಾಣದ ಅರ್ಧಕ್ಕಿಂತ ಕಡಿಮೆ ಗೊಬ್ಬರ ಮಾತ್ರ ಲಭ್ಯವಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ’ ಎಂದು ಎಚ್ಚರಿಸಿದರು.</p>.<p>‘ಆದ್ದರಿಂದ ಬಗರ್ಹುಕುಂ ರೈತರಿಗೂ ಗೊಬ್ಬರ ವಿತರಿಸಲು ಸರ್ಕಾರ ವಿಶೇಷ ಮಾನದಂಡ ರೂಪಿಸಬೇಕು. ಯೂರಿಯಾ ಮತ್ತು ಡಿಎಪಿ ಗೊಬ್ಬರ ಎಲ್ಲ ರೈತರಿಗೆ ಸಮರ್ಪಕವಾಗಿ ತಲುಪುವಂತೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ಪರವಾನಗಿ ಭೂಮಾಪಕರು ನಡೆಸುತ್ತಿರುವ ಮುಷ್ಕರದಿಂದ ರೈತರಿಗೆ ತೊಂದರೆ ಉಂಟಾಗಿದೆ. ಸರ್ವೆ, ಹದ್ದುಬಸ್ತು, ಪೋಡಿ ಮುಕ್ತ ಅಭಿಯಾನ ಹಾಗೂ ನ್ಯಾಯಾಲಯ ಸಂಬಂಧಿತ ಕೆಲಸಗಳು ಸ್ಥಗಿತಗೊಂಡಿವೆ. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಭೂಮಾಪಕರ ಸಮಸ್ಯೆ ಪರಿಹರಿಸಬೇಕು’ ಎಂದು ಮನವಿ ಮಾಡಿದರು.</p>.<p>ಇ.ಬಿ. ಜಗದೀಶ್, ಕೆ.ರಾಘವೇಂದ್ರ, ಹಿಟ್ಟೂರು ರಾಜು, ಸಿ.ಬಿ. ಹನುಮಂತಪ್ಪ, ಬಸವರಾಜು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-42-928338629</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>