<p><strong>ಶಿವಮೊಗ್ಗ</strong>: ಇಲ್ಲಿನ ಗಾಂಧಿ ಬಜಾರ್ನ ಬಟ್ಟೆ ಅಂಗಡಿಗಳ ಸಂಕೀರ್ಣ ಚೋರ್ ಬಜಾರ್ನಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದೆ.</p>.<p>ಬೆಂಕಿಯಿಂದ ಏಳು ಬಟ್ಟೆ ಅಂಗಡಿಗಳು ಸುಟ್ಟು ಹೋಗಿವೆ. ಸಿದ್ಧ ಉಡುಪುಗಳ ಮಾರಾಟದ ಮಾರುಕಟ್ಟೆ ಇದಾಗಿದೆ. ಅಂಗಡಿಗಳು ಒತ್ತೊತ್ತಾಗಿ ಇರುವುದರಿಂದ ಹಾನಿಯ ಪ್ರಮಾಣ ಹೆಚ್ಚಾಗಿದೆ.</p>.<p>ವಿಷಯ ತಿಳಿದು ಅಗ್ನಿಶಾಮಕ ದಳದ ಎರಡು ವಾಹನಗಳು ಸ್ಥಳಕ್ಕೆ ತೆರಳಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. </p>.<p><strong>ವಾಹನ ತೆರಳಲು ತೊಂದರೆ:</strong> ಚೋರ್ ಬಜಾರ್ನ ರಸ್ತೆ ಇಕ್ಕಟ್ಟಾಗಿದೆ. ಜೊತೆಗೆ ಒತ್ತುವರಿ ಕೂಡ ಆಗಿದೆ. ಹೀಗಾಗಿ, ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕೊಂಡೊಯ್ಯಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಅಗ್ನಿ ಅವಘಡ ರಾತ್ರಿ ಆಗಿರುವುದರಿಂದ ಗ್ರಾಹಕರು ಇಲ್ಲದೇ ಜೀವಹಾನಿ ತಪ್ಪಿದೆ ಎಂದು ತಿಳಿದುಬಂದಿದೆ.</p>.<p>‘ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಪರಿಶೀಲನೆ ನಡೆಸುತ್ತಿದ್ದೇವೆ. ಬೆಂಕಿ ಅವಘಡಕ್ಕೆ ನೈಜ ಕಾರಣ ಹಾಗೂ ಹಾನಿಯ ಪ್ರಮಾಣ ಅಂದಾಜು ಮಾಡಬೇಕಿದೆ’ ಎಂದು ಶಿವಮೊಗ್ಗ ಅಗ್ನಿಶಾಮಕ ದಳದ ಅಧಿಕಾರಿ ನರೇಂದ್ರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಇಲ್ಲಿನ ಗಾಂಧಿ ಬಜಾರ್ನ ಬಟ್ಟೆ ಅಂಗಡಿಗಳ ಸಂಕೀರ್ಣ ಚೋರ್ ಬಜಾರ್ನಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದೆ.</p>.<p>ಬೆಂಕಿಯಿಂದ ಏಳು ಬಟ್ಟೆ ಅಂಗಡಿಗಳು ಸುಟ್ಟು ಹೋಗಿವೆ. ಸಿದ್ಧ ಉಡುಪುಗಳ ಮಾರಾಟದ ಮಾರುಕಟ್ಟೆ ಇದಾಗಿದೆ. ಅಂಗಡಿಗಳು ಒತ್ತೊತ್ತಾಗಿ ಇರುವುದರಿಂದ ಹಾನಿಯ ಪ್ರಮಾಣ ಹೆಚ್ಚಾಗಿದೆ.</p>.<p>ವಿಷಯ ತಿಳಿದು ಅಗ್ನಿಶಾಮಕ ದಳದ ಎರಡು ವಾಹನಗಳು ಸ್ಥಳಕ್ಕೆ ತೆರಳಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. </p>.<p><strong>ವಾಹನ ತೆರಳಲು ತೊಂದರೆ:</strong> ಚೋರ್ ಬಜಾರ್ನ ರಸ್ತೆ ಇಕ್ಕಟ್ಟಾಗಿದೆ. ಜೊತೆಗೆ ಒತ್ತುವರಿ ಕೂಡ ಆಗಿದೆ. ಹೀಗಾಗಿ, ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕೊಂಡೊಯ್ಯಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಅಗ್ನಿ ಅವಘಡ ರಾತ್ರಿ ಆಗಿರುವುದರಿಂದ ಗ್ರಾಹಕರು ಇಲ್ಲದೇ ಜೀವಹಾನಿ ತಪ್ಪಿದೆ ಎಂದು ತಿಳಿದುಬಂದಿದೆ.</p>.<p>‘ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಪರಿಶೀಲನೆ ನಡೆಸುತ್ತಿದ್ದೇವೆ. ಬೆಂಕಿ ಅವಘಡಕ್ಕೆ ನೈಜ ಕಾರಣ ಹಾಗೂ ಹಾನಿಯ ಪ್ರಮಾಣ ಅಂದಾಜು ಮಾಡಬೇಕಿದೆ’ ಎಂದು ಶಿವಮೊಗ್ಗ ಅಗ್ನಿಶಾಮಕ ದಳದ ಅಧಿಕಾರಿ ನರೇಂದ್ರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>