‘ದೇವಿಕಾ ಅವರು ಊರಿನಲ್ಲಿಲ್ಲದ ವೇಳೆ ದುಷ್ಕರ್ಮಿಗಳು ಮನೆಗೆ ಬೆಂಕಿ ಹಚ್ಚಿದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಳಗಿನಜಾವ ಮನೆಗೆ ಬೆಂಕಿ ಹೊತ್ತಿ ಉರಿಯುತ್ತಿರುವುದನ್ನು ನೋಡಿದ ನೆರಮನೆಯ ನಿವಾಸಿಗಳು, ಅಗ್ನಿಶಾಮಕ ದಳಕ್ಕೆ ತಿಳಿಸಿ ಮನೆ ಸಂಪೂರ್ಣ ಸುಟ್ಟು ಕರಕಲಾಗುವುದನ್ನು ತಪ್ಪಿಸಿದ್ದಾರೆ. ಬೆಂಕಿ ಹಚ್ಚಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಸಬ್ಇನ್ಸ್ಪೆಕ್ಟರ್ ಹೊಳೆಬಸಪ್ಪ ಹೋಳಿ ತಿಳಿಸಿದ್ದಾರೆ.