<p><strong>ಶಿವಮೊಗ್ಗ:</strong> ಭದ್ರಾವತಿ ತಾಲ್ಲೂಕಿನ ಅರೆಬಿಳಚಿ ಕ್ಯಾಂಪ್ ಬಳಿ ಭದ್ರಾ ಬಲದಂಡೆ ನಾಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಭಾನುವಾರ ನಾಪತ್ತೆಯಾಗಿದ್ದಾರೆ. ಅವರು ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದು, ಶೋಧ ಕಾರ್ಯ ನಡೆಯುತ್ತಿದೆ.</p><p>ಅರಬಿಳಚಿ ಕ್ಯಾಂಪ್ ನಿವಾಸಿಗಳಾದ ನೀಲಾಬಾಯಿ (50), ಮಗ ರವಿಕುಮಾರ್ (23), ಮಗಳು ಶ್ವೇತಾ (24), ಅಳಿಯ ಪರಶುರಾಮ್ (28) ನಾಪತ್ತೆಯಾದವರು.</p><p>ಅರೆಬಿಳಚಿ ಕ್ಯಾಂಪ್ ನಲ್ಲಿ ಜ.12ರಿಂದ 16ರವರೆಗೆ ಮಾರಿಕಾಂಬ ಜಾತ್ರೆ ಇತ್ತು. ಅದಕ್ಕೆ ಶ್ವೇತಾ ಪತಿಯೊಂದಿಗೆ ತವರು ಮನೆಗೆ ಬಂದಿದ್ದರು.</p><p>ಭಾನುವಾರ ಕುಟುಂಬದ ಎಲ್ಲರೂ ಭದ್ರಾ ಬಲದಂಡೆ ನಾಲೆಯಲ್ಲಿ ಬಟ್ಟೆ ಹಾಗೂ ಪಾತ್ರೆ ತೊಳೆಯಲು ತೆರಳಿದ್ದರು.</p><p>ಸಂಜೆಯಾದರೂ ಮನೆಗೆ ಮರಳದಿರುವುದು ಹಾಗೂ ನಾಲೆಯ ದಂಡೆಯಲ್ಲಿ ಬಟ್ಟೆ, ಪಾತ್ರೆಗಳು ಇರುವುದನ್ನು ಕಂಡು ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ</p><p>ಬಟ್ಟೆ ಒಗೆಯುವಾಗ ನಾಲೆಗೆ ಜಾರಿ ಒಬ್ಬರ ರಕ್ಷಣೆಗೆ ಮತ್ತೊಬ್ಬರು ಅವರ ಹಿಂದೆ ಇನ್ನೊಬ್ಬರು ಎಂಬಂತೆ ನೀರಿಗೆ ಬಿದ್ದಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. </p><p>ಸದ್ಯ ಶೋಧ ಕಾರ್ಯ ನಡೆಯುತ್ತಿದ್ದು, ಘಟನೆಗೆ ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ. ಹೆಚ್ಚುವರಿ ಎಸ್ಪಿ ಎ.ಜಿ.ಕಾರಿಯಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಭದ್ರಾವತಿ ತಾಲ್ಲೂಕಿನ ಅರೆಬಿಳಚಿ ಕ್ಯಾಂಪ್ ಬಳಿ ಭದ್ರಾ ಬಲದಂಡೆ ನಾಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಭಾನುವಾರ ನಾಪತ್ತೆಯಾಗಿದ್ದಾರೆ. ಅವರು ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದು, ಶೋಧ ಕಾರ್ಯ ನಡೆಯುತ್ತಿದೆ.</p><p>ಅರಬಿಳಚಿ ಕ್ಯಾಂಪ್ ನಿವಾಸಿಗಳಾದ ನೀಲಾಬಾಯಿ (50), ಮಗ ರವಿಕುಮಾರ್ (23), ಮಗಳು ಶ್ವೇತಾ (24), ಅಳಿಯ ಪರಶುರಾಮ್ (28) ನಾಪತ್ತೆಯಾದವರು.</p><p>ಅರೆಬಿಳಚಿ ಕ್ಯಾಂಪ್ ನಲ್ಲಿ ಜ.12ರಿಂದ 16ರವರೆಗೆ ಮಾರಿಕಾಂಬ ಜಾತ್ರೆ ಇತ್ತು. ಅದಕ್ಕೆ ಶ್ವೇತಾ ಪತಿಯೊಂದಿಗೆ ತವರು ಮನೆಗೆ ಬಂದಿದ್ದರು.</p><p>ಭಾನುವಾರ ಕುಟುಂಬದ ಎಲ್ಲರೂ ಭದ್ರಾ ಬಲದಂಡೆ ನಾಲೆಯಲ್ಲಿ ಬಟ್ಟೆ ಹಾಗೂ ಪಾತ್ರೆ ತೊಳೆಯಲು ತೆರಳಿದ್ದರು.</p><p>ಸಂಜೆಯಾದರೂ ಮನೆಗೆ ಮರಳದಿರುವುದು ಹಾಗೂ ನಾಲೆಯ ದಂಡೆಯಲ್ಲಿ ಬಟ್ಟೆ, ಪಾತ್ರೆಗಳು ಇರುವುದನ್ನು ಕಂಡು ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ</p><p>ಬಟ್ಟೆ ಒಗೆಯುವಾಗ ನಾಲೆಗೆ ಜಾರಿ ಒಬ್ಬರ ರಕ್ಷಣೆಗೆ ಮತ್ತೊಬ್ಬರು ಅವರ ಹಿಂದೆ ಇನ್ನೊಬ್ಬರು ಎಂಬಂತೆ ನೀರಿಗೆ ಬಿದ್ದಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. </p><p>ಸದ್ಯ ಶೋಧ ಕಾರ್ಯ ನಡೆಯುತ್ತಿದ್ದು, ಘಟನೆಗೆ ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ. ಹೆಚ್ಚುವರಿ ಎಸ್ಪಿ ಎ.ಜಿ.ಕಾರಿಯಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>