<p><strong>ಶಿವಮೊಗ್ಗ</strong>: ಮನೆಗೆ ನುಗ್ಗಿ ಮಹಿಳೆಯನ್ನು ಬೆದರಿಸಿ ಕೊರಳಲ್ಲಿದ್ದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಕಳ್ಳನನ್ನು ಇಲ್ಲಿನ ಕೋಟೆ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.</p>.<p>ಭದ್ರಾವತಿಯ ಹೊಸಮನೆಯ ಭೋವಿ ಕಾಲೊನಿ ನಾಲ್ಕನೇ ಕ್ರಾಸ್ ನಿವಾಸಿ ವಸಂತರಾಜ್ (40) ಬಂಧಿತ ವ್ಯಕ್ತಿ.</p>.<p>ಕಳವು ಮಾಡಿದ್ದ ₹4.5 ಲಕ್ಷ ಮೌಲ್ಯದ 46 ಗ್ರಾಂ ಚಿನ್ನದ ಸರ, ಮೊಬೈಲ್ ಫೋನ್, ಕೃತ್ಯಕ್ಕೆ ಬಳಸಿದ್ದ ಬೈಕ್ ಸೇರಿದಂತೆ ಒಟ್ಟು ₹5 ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರು ಆರೋಪಿಯಿಂದ ವಶಪಡಿಸಿಕೊಂಡಿದ್ದಾರೆ.</p>.<p>ಗಣಪತಿ ಲೇಔಟ್ನ ಎರಡನೇ ಕ್ರಾಸ್ ನಿವಾಸಿ ಜಿ.ನಾಗರಾಜ (85) ಅವರು ಜುಲೈ 3 ರಂದು ಕೋಟೆ ಪೊಲೀಸ್ ಠಾಣೆಗೆ ತೆರಳಿ, ತಮ್ಮ ಪತ್ನಿ ಒಬ್ಬರೇ ಇದ್ದಾಗ ಮನೆಯೊಳಗೆ ನುಗ್ಗಿ ಚಿನ್ನದ ಆಭರಣ ಸುಲಿಗೆ ಮಾಡಿಕೊಂಡು ಹೋಗಿದ್ದಾರೆ’ ಎಂದು ದೂರು ನೀಡಿದ್ದರು.</p>.<p>ಪ್ರಕರಣ ದಾಖಲಿಸಿದ್ದ ಇನ್ಸ್ಪೆಕ್ಟರ್ ಹರೀಶ್ ಕೆ.ಪಟೇಲ್, ಪಿಎಸ್ಐ ಸಂತೋಷ್ ಕುಮಾರ್ ಬಾಗೋಜಿ ಹಾಗೂ ಸಿಬ್ಬಂದಿ ತನಿಖೆ ನಡೆಸಿ ಖಚಿತ ಮಾಹಿತಿಯ ಮೇರೆಗೆ ಆರೋಪಿಯನ್ನು ಬಂಧಿಸಿ ಚಿನ್ನಾಭರಣ ಹಾಗೂ ವಸ್ತುಗಳ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಮನೆಗೆ ನುಗ್ಗಿ ಮಹಿಳೆಯನ್ನು ಬೆದರಿಸಿ ಕೊರಳಲ್ಲಿದ್ದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಕಳ್ಳನನ್ನು ಇಲ್ಲಿನ ಕೋಟೆ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.</p>.<p>ಭದ್ರಾವತಿಯ ಹೊಸಮನೆಯ ಭೋವಿ ಕಾಲೊನಿ ನಾಲ್ಕನೇ ಕ್ರಾಸ್ ನಿವಾಸಿ ವಸಂತರಾಜ್ (40) ಬಂಧಿತ ವ್ಯಕ್ತಿ.</p>.<p>ಕಳವು ಮಾಡಿದ್ದ ₹4.5 ಲಕ್ಷ ಮೌಲ್ಯದ 46 ಗ್ರಾಂ ಚಿನ್ನದ ಸರ, ಮೊಬೈಲ್ ಫೋನ್, ಕೃತ್ಯಕ್ಕೆ ಬಳಸಿದ್ದ ಬೈಕ್ ಸೇರಿದಂತೆ ಒಟ್ಟು ₹5 ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರು ಆರೋಪಿಯಿಂದ ವಶಪಡಿಸಿಕೊಂಡಿದ್ದಾರೆ.</p>.<p>ಗಣಪತಿ ಲೇಔಟ್ನ ಎರಡನೇ ಕ್ರಾಸ್ ನಿವಾಸಿ ಜಿ.ನಾಗರಾಜ (85) ಅವರು ಜುಲೈ 3 ರಂದು ಕೋಟೆ ಪೊಲೀಸ್ ಠಾಣೆಗೆ ತೆರಳಿ, ತಮ್ಮ ಪತ್ನಿ ಒಬ್ಬರೇ ಇದ್ದಾಗ ಮನೆಯೊಳಗೆ ನುಗ್ಗಿ ಚಿನ್ನದ ಆಭರಣ ಸುಲಿಗೆ ಮಾಡಿಕೊಂಡು ಹೋಗಿದ್ದಾರೆ’ ಎಂದು ದೂರು ನೀಡಿದ್ದರು.</p>.<p>ಪ್ರಕರಣ ದಾಖಲಿಸಿದ್ದ ಇನ್ಸ್ಪೆಕ್ಟರ್ ಹರೀಶ್ ಕೆ.ಪಟೇಲ್, ಪಿಎಸ್ಐ ಸಂತೋಷ್ ಕುಮಾರ್ ಬಾಗೋಜಿ ಹಾಗೂ ಸಿಬ್ಬಂದಿ ತನಿಖೆ ನಡೆಸಿ ಖಚಿತ ಮಾಹಿತಿಯ ಮೇರೆಗೆ ಆರೋಪಿಯನ್ನು ಬಂಧಿಸಿ ಚಿನ್ನಾಭರಣ ಹಾಗೂ ವಸ್ತುಗಳ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>