<p><strong>ಸಾಗರ</strong>: ‘ಹೈಕೋರ್ಟ್ಗಳ ಆರಂಭಕ್ಕೆ ಸಂಬಂಧಿಸಿದಂತೆ 1981ರಲ್ಲಿ ಜಸ್ವಂತ್ ಸಿಂಗ್ ಆಯೋಗ ನೀಡಿರುವ ಶಿಫಾರಸ್ಸಿನಂತೆ ಮಧ್ಯ ಕರ್ನಾಟಕ ಭಾಗದ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸುವುದು ಸೂಕ್ತ’ ಎಂದು ಶಿವಮೊಗ್ಗದ ಹಿರಿಯ ವಕೀಲ ಅಶೋಕ್ ಜಿ. ಭಟ್ ಪ್ರತಿಪಾದಿಸಿದರು.</p>.<p>‘ಜಿಲ್ಲೆಯನ್ನು ಒಳಗೊಂಡಂತೆ ಮಂಗಳೂರಿನಲ್ಲಿ ಸಂಚಾರಿ ಪೀಠ ಸ್ಥಾಪನೆಯಾದರೆ ಭೌಗೋಳಿಕ ಅಂಶ ಸೇರಿದಂತೆ ಹಲವು ವಿಚಾರಗಳಲ್ಲಿ ಜನರಿಗೆ ತೊಂದರೆಯಾಗುತ್ತದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಾಗೂ ಹೈಕೋರ್ಟ್ ಶಿವಮೊಗ್ಗಕ್ಕೆ ಮೊದಲ ಆದ್ಯತೆ ನೀಡಬೇಕು’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾವೇರಿ ಜಿಲ್ಲೆಗಳ ವ್ಯಾಪ್ತಿಯನ್ನು ಒಳಗೊಂಡಂತೆ ಪೀಠ ಸ್ಥಾಪಿಸುವುದು ಸೂಕ್ತವಾಗಿದೆ. ಈ ಜಿಲ್ಲೆಗಳ ಜನಸಂಖ್ಯೆ, ಇಲ್ಲಿನ ನ್ಯಾಯಾಲಯಗಳಲ್ಲಿರುವ ಪ್ರಕರಣ, ವಕೀಲರ ಸಂಖ್ಯೆ, ಮೂಲ ಸೌಕರ್ಯಗಳ ಲಭ್ಯತೆ, ಕಕ್ಷಿದಾರರಿಗೆ ಆಗುವ ಅನುಕೂಲತೆ ಈ ಎಲ್ಲಾ ಅಂಶಗಳನ್ನು ಪರಿಗಣಿಸಿದರೆ ಸಂಚಾರಿ ಪೀಠಕ್ಕೆ ಶಿವಮೊಗ್ಗವೇ ಸೂಕ್ತ’ ಎಂದು ಅಭಿಪ್ರಾಯಪಟ್ಟರು.</p>.<p>ವಕೀಲರ ಸಂಘದ ಕಾರ್ಯದರ್ಶಿ ಶೇಖರಪ್ಪ, ಪ್ರಮುಖರಾದ ಎಂ.ಹರನಾಥ್ ರಾವ್, ವಿನಯಕುಮಾರ್, ಕೆ.ವಿ.ಪ್ರವೀಣ್, ಕೆ.ವಿ.ಜಯರಾಮ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-42-637212975</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ‘ಹೈಕೋರ್ಟ್ಗಳ ಆರಂಭಕ್ಕೆ ಸಂಬಂಧಿಸಿದಂತೆ 1981ರಲ್ಲಿ ಜಸ್ವಂತ್ ಸಿಂಗ್ ಆಯೋಗ ನೀಡಿರುವ ಶಿಫಾರಸ್ಸಿನಂತೆ ಮಧ್ಯ ಕರ್ನಾಟಕ ಭಾಗದ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸುವುದು ಸೂಕ್ತ’ ಎಂದು ಶಿವಮೊಗ್ಗದ ಹಿರಿಯ ವಕೀಲ ಅಶೋಕ್ ಜಿ. ಭಟ್ ಪ್ರತಿಪಾದಿಸಿದರು.</p>.<p>‘ಜಿಲ್ಲೆಯನ್ನು ಒಳಗೊಂಡಂತೆ ಮಂಗಳೂರಿನಲ್ಲಿ ಸಂಚಾರಿ ಪೀಠ ಸ್ಥಾಪನೆಯಾದರೆ ಭೌಗೋಳಿಕ ಅಂಶ ಸೇರಿದಂತೆ ಹಲವು ವಿಚಾರಗಳಲ್ಲಿ ಜನರಿಗೆ ತೊಂದರೆಯಾಗುತ್ತದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಾಗೂ ಹೈಕೋರ್ಟ್ ಶಿವಮೊಗ್ಗಕ್ಕೆ ಮೊದಲ ಆದ್ಯತೆ ನೀಡಬೇಕು’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾವೇರಿ ಜಿಲ್ಲೆಗಳ ವ್ಯಾಪ್ತಿಯನ್ನು ಒಳಗೊಂಡಂತೆ ಪೀಠ ಸ್ಥಾಪಿಸುವುದು ಸೂಕ್ತವಾಗಿದೆ. ಈ ಜಿಲ್ಲೆಗಳ ಜನಸಂಖ್ಯೆ, ಇಲ್ಲಿನ ನ್ಯಾಯಾಲಯಗಳಲ್ಲಿರುವ ಪ್ರಕರಣ, ವಕೀಲರ ಸಂಖ್ಯೆ, ಮೂಲ ಸೌಕರ್ಯಗಳ ಲಭ್ಯತೆ, ಕಕ್ಷಿದಾರರಿಗೆ ಆಗುವ ಅನುಕೂಲತೆ ಈ ಎಲ್ಲಾ ಅಂಶಗಳನ್ನು ಪರಿಗಣಿಸಿದರೆ ಸಂಚಾರಿ ಪೀಠಕ್ಕೆ ಶಿವಮೊಗ್ಗವೇ ಸೂಕ್ತ’ ಎಂದು ಅಭಿಪ್ರಾಯಪಟ್ಟರು.</p>.<p>ವಕೀಲರ ಸಂಘದ ಕಾರ್ಯದರ್ಶಿ ಶೇಖರಪ್ಪ, ಪ್ರಮುಖರಾದ ಎಂ.ಹರನಾಥ್ ರಾವ್, ವಿನಯಕುಮಾರ್, ಕೆ.ವಿ.ಪ್ರವೀಣ್, ಕೆ.ವಿ.ಜಯರಾಮ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-42-637212975</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>