<p>ಶಿವಮೊಗ್ಗ: ‘ನ್ಯಾಯ ಪಡೆಯುವುದು ಪ್ರಜಾಪ್ರಭುತ್ವದಲ್ಲಿ ಎಲ್ಲರ ಹಕ್ಕು. ಶಿವಮೊಗ್ಗಕ್ಕೆ ಹೈಕೋರ್ಟ್ ಸಂಚಾರಿ ಪೀಠಕ್ಕೆ ಆಗ್ರಹಿಸಿ ವಕೀಲರ ನೇತೃತ್ವದಲ್ಲಿ ಸಾರ್ವಜನಿಕರು ಹೋರಾಟಕ್ಕೆ ಇಳಿದಿರುವುದು ಬೇಸರದ ಸಂಗತಿ’ ಎಂದು ಬೆಕ್ಕಿನಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ವಕೀಲರ ಭವನದ ಮುಂಭಾಗ ಹೈಕೋರ್ಟ್ ಪೀಠಕ್ಕೆ ಒತ್ತಾಯಿಸಿ ನಡೆಯುತ್ತಿರುವ ಧರಣಿಯಲ್ಲಿ ಬುಧವಾರ ಪಾಲ್ಗೊಂಡು ಮಾತನಾಡಿದರು.</p>.<p>‘ಮಧ್ಯ ಕರ್ನಾಟಕಕ್ಕೆ ಅಗತ್ಯವಾದ ಹೈಕೋರ್ಟ್ ಪೀಠಕ್ಕೆ ಒತ್ತಾಯಿಸಿ ನಾವೆಲ್ಲರೂ ಹೋರಾಟ ಮಾಡುತ್ತಿದ್ದೇವೆ. ‘ಸೋತವನು ಸತ್ತ– ಗೆದ್ದವನು ಸೋತ’ ಎಂಬ ಮಾತಿದೆ. ಅದೇ ರೀತಿ ನ್ಯಾಯಪೀಠಕ್ಕಾಗಿ ನಾವು ಹೋರಾಡಬೇಕಾಗಿದೆ. ನ್ಯಾಯ ಪಡೆಯುವುದು ಅನಾದಿ ಕಾಲದಿಂದಲೂ ಪ್ರತಿಯೊಬ್ಬರ ಹಕ್ಕಾಗಿದೆ’ ಎಂದರು.</p>.<p>‘ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಮಧ್ಯ ಕರ್ನಾಟಕದ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿರುವ ಶಿವಮೊಗ್ಗ ಸಜ್ಜನರ ಸಾಂಸ್ಕೃತಿಕ ಜಿಲ್ಲೆಯಾಗಿದೆ. ಜನರ ಪರವಾಗಿ ಸರ್ಕಾರ ಈ ಬೇಡಿಕೆ ಈಡೇರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಹೋರಾಟ ಸಮಿತಿಯ ಗೌರವಾಧ್ಯಕ್ಷ ಕೆ.ಬಸಪ್ಪಗೌಡ ಮಾತನಾಡಿ, ‘ಸರ್ಕಾರಕ್ಕೆ ಮೊದಲಿನಿಂದಲೂ ಯೋಜನೆಗಳನ್ನು ರೂಪಿಸುವಾಗ ಮಧ್ಯಕರ್ನಾಟಕ ನೆನಪಿಗೆ ಬರುವುದಿಲ್ಲ. ಇದು ಮಲೆನಾಡಿಗರ ಭಾವನಾತ್ಮಕ ಬೇಡಿಕೆಯಲ್ಲ, ಅಂಕಿ ಅಂಶಗಳನ್ನೊಳಗೊಂಡ ವಸ್ತುನಿಷ್ಠ ಬೇಡಿಕೆಯಾಗಿದೆ’ ಎಂದರು.</p>.<p>‘ಸಂಖ್ಯಾಬಲದಿಂದ ಮತ್ತು ಇನ್ನಿತರ ಅಂಶಗಳಿಂದಲೂ ನ್ಯಾಯಯುತವಾಗಿ ಹೈಕೋರ್ಟ್ ಪೀಠ ಶಿವಮೊಗ್ಗದಲ್ಲಿ ಸ್ಥಾಪನೆಯಾಗಬೇಕು. ವಸ್ತುಸ್ಥಿತಿ ಅಧ್ಯಯನ ಮಾಡದೇ ಮಂಗಳೂರಿಗೆ ಹೈಕೋರ್ಟ್ ಪೀಠ ನೀಡಿದರೆ ಅದು ಸರಿಯಾದ ತೀರ್ಮಾನವಲ್ಲ. ಶಿವಮೊಗ್ಗವನ್ನು ನಿರಾಕರಿಸಲು ಯಾವುದೇ ಕಾರಣ ಇಲ್ಲ’ ಎಂದು ಹೇಳಿದರು.</p>.<p>ಜಡೆ ಮಠದ ಮಹಾಂತ ಸ್ವಾಮೀಜಿ ಹಾಗೂ ಹಾರನಹಳ್ಳಿ ಚೌಕಿಮಠದ ನೀಲಕಂಠ ಸ್ವಾಮೀಜಿ ಮಾತನಾಡಿ ಬೆಂಬಲ ವ್ಯಕ್ತಪಡಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-42-1237873026</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ‘ನ್ಯಾಯ ಪಡೆಯುವುದು ಪ್ರಜಾಪ್ರಭುತ್ವದಲ್ಲಿ ಎಲ್ಲರ ಹಕ್ಕು. ಶಿವಮೊಗ್ಗಕ್ಕೆ ಹೈಕೋರ್ಟ್ ಸಂಚಾರಿ ಪೀಠಕ್ಕೆ ಆಗ್ರಹಿಸಿ ವಕೀಲರ ನೇತೃತ್ವದಲ್ಲಿ ಸಾರ್ವಜನಿಕರು ಹೋರಾಟಕ್ಕೆ ಇಳಿದಿರುವುದು ಬೇಸರದ ಸಂಗತಿ’ ಎಂದು ಬೆಕ್ಕಿನಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ವಕೀಲರ ಭವನದ ಮುಂಭಾಗ ಹೈಕೋರ್ಟ್ ಪೀಠಕ್ಕೆ ಒತ್ತಾಯಿಸಿ ನಡೆಯುತ್ತಿರುವ ಧರಣಿಯಲ್ಲಿ ಬುಧವಾರ ಪಾಲ್ಗೊಂಡು ಮಾತನಾಡಿದರು.</p>.<p>‘ಮಧ್ಯ ಕರ್ನಾಟಕಕ್ಕೆ ಅಗತ್ಯವಾದ ಹೈಕೋರ್ಟ್ ಪೀಠಕ್ಕೆ ಒತ್ತಾಯಿಸಿ ನಾವೆಲ್ಲರೂ ಹೋರಾಟ ಮಾಡುತ್ತಿದ್ದೇವೆ. ‘ಸೋತವನು ಸತ್ತ– ಗೆದ್ದವನು ಸೋತ’ ಎಂಬ ಮಾತಿದೆ. ಅದೇ ರೀತಿ ನ್ಯಾಯಪೀಠಕ್ಕಾಗಿ ನಾವು ಹೋರಾಡಬೇಕಾಗಿದೆ. ನ್ಯಾಯ ಪಡೆಯುವುದು ಅನಾದಿ ಕಾಲದಿಂದಲೂ ಪ್ರತಿಯೊಬ್ಬರ ಹಕ್ಕಾಗಿದೆ’ ಎಂದರು.</p>.<p>‘ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಮಧ್ಯ ಕರ್ನಾಟಕದ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿರುವ ಶಿವಮೊಗ್ಗ ಸಜ್ಜನರ ಸಾಂಸ್ಕೃತಿಕ ಜಿಲ್ಲೆಯಾಗಿದೆ. ಜನರ ಪರವಾಗಿ ಸರ್ಕಾರ ಈ ಬೇಡಿಕೆ ಈಡೇರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಹೋರಾಟ ಸಮಿತಿಯ ಗೌರವಾಧ್ಯಕ್ಷ ಕೆ.ಬಸಪ್ಪಗೌಡ ಮಾತನಾಡಿ, ‘ಸರ್ಕಾರಕ್ಕೆ ಮೊದಲಿನಿಂದಲೂ ಯೋಜನೆಗಳನ್ನು ರೂಪಿಸುವಾಗ ಮಧ್ಯಕರ್ನಾಟಕ ನೆನಪಿಗೆ ಬರುವುದಿಲ್ಲ. ಇದು ಮಲೆನಾಡಿಗರ ಭಾವನಾತ್ಮಕ ಬೇಡಿಕೆಯಲ್ಲ, ಅಂಕಿ ಅಂಶಗಳನ್ನೊಳಗೊಂಡ ವಸ್ತುನಿಷ್ಠ ಬೇಡಿಕೆಯಾಗಿದೆ’ ಎಂದರು.</p>.<p>‘ಸಂಖ್ಯಾಬಲದಿಂದ ಮತ್ತು ಇನ್ನಿತರ ಅಂಶಗಳಿಂದಲೂ ನ್ಯಾಯಯುತವಾಗಿ ಹೈಕೋರ್ಟ್ ಪೀಠ ಶಿವಮೊಗ್ಗದಲ್ಲಿ ಸ್ಥಾಪನೆಯಾಗಬೇಕು. ವಸ್ತುಸ್ಥಿತಿ ಅಧ್ಯಯನ ಮಾಡದೇ ಮಂಗಳೂರಿಗೆ ಹೈಕೋರ್ಟ್ ಪೀಠ ನೀಡಿದರೆ ಅದು ಸರಿಯಾದ ತೀರ್ಮಾನವಲ್ಲ. ಶಿವಮೊಗ್ಗವನ್ನು ನಿರಾಕರಿಸಲು ಯಾವುದೇ ಕಾರಣ ಇಲ್ಲ’ ಎಂದು ಹೇಳಿದರು.</p>.<p>ಜಡೆ ಮಠದ ಮಹಾಂತ ಸ್ವಾಮೀಜಿ ಹಾಗೂ ಹಾರನಹಳ್ಳಿ ಚೌಕಿಮಠದ ನೀಲಕಂಠ ಸ್ವಾಮೀಜಿ ಮಾತನಾಡಿ ಬೆಂಬಲ ವ್ಯಕ್ತಪಡಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-42-1237873026</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>