<p><strong>ತರೀಕೆರೆ:</strong> ಕರಾವಳಿ ಮತ್ತು ಮಧ್ಯ ಕರ್ನಾಟಕ ಭಾಗದ ಬಹು ದಿನಗಳ ಬೇಡಿಕೆಯಾದ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿಗೆ ಬದಲಾಗಿ ಶಿವಮೊಗ್ಗದಲ್ಲಿಯೇ ಸ್ಥಾಪಿಸಬೇಕು ಎಂದು ತರೀಕೆರೆ ವಕೀಲರ ಸಂಘದ ಮಾಜಿ ಅಧ್ಯಕ್ಷ ಎಸ್. ಸುರೇಶ್ಚಂದ್ರ ಹೇಳಿದರು.</p>.<p>ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಕರಾವಳಿಯ ಭಾಗದ ಜನರಿಗೆ ಅನುಕೂಲವಾಗುವಂತೆ ಆ ಭಾಗದ ವಕೀಲರು ಮತ್ತು ಜನಪ್ರತಿನಿಧಿಗಳು ಮಂಗಳೂರಿನಲ್ಲಿ ಪೀಠ ಸ್ಥಾಪಿಸಲು ಒತ್ತಾಯಿಸುತ್ತಿದ್ದು, ಇದು ಇತರ ಜಿಲ್ಲೆಗಳ ಜನರಿಗೆ ಅನಾನುಕೂಲವಾಗಲಿದೆ ಎಂದರು.</p>.<p>ಬೆಂಗಳೂರಿನಿಂದ ಸುಮಾರು 250 ಕಿ.ಮೀ. ದೂರದಲ್ಲಿರುವ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಯ ಲಕ್ಷಾಂತರ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನ್ಯಾಯಾಲಯದ ಸೌಲಭ್ಯ ಒದಗಿಸಲು ಶಿವಮೊಗ್ಗದಲ್ಲಿ ಸಂಚಾರಿ ಪೀಠದ ಸ್ಥಾಪನೆ ಅಗತ್ಯವಾಗಿದೆ ಎಂದು ಹೇಳಿದರು.</p>.<p>ನ್ಯಾಯಮೂರ್ತಿ ಜಸ್ವಂತ್ ಸಿಂಗ್ ಸಮಿತಿಯ ಮಾರ್ಗ ಸೂಚಿಗಳ ಅನ್ವಯ ಸಂಚಾರ ಪೀಠದ ಸ್ಥಾಪನೆಗೆ ಅಗತ್ಯವಿರುವ ಎಲ್ಲ ಅರ್ಹತೆಗಳನ್ನು ಶಿವಮೊಗ್ಗವು ಹೊಂದಿದೆ. ಶಿವಮೊಗ್ಗ, ಚಿಕ್ಕ ಮಗ ಳೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲೇ ಸಮರ್ಥ ವಕೀಲರಿದ್ದಾರೆ. ಈ ಎಲ್ಲ ಜಿಲ್ಲೆಗಳ ಚುನಾಯಿತ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕ ಸಂಘ-ಸಂಸ್ಥೆಗಳ ಒಮ್ಮತದ ಬೆಂಬಲ ಬೇಡಿಕೆ ಇದಾಗಿದೆ ಎಂದು ತಿಳಿಸಿದರು.</p>.<p>ಒಂದು ವೇಳೆ ಮಂಗಳೂರಿನಲ್ಲಿ ಪೀಠ ಸ್ಥಾಪಿಸಿದರೆ ಈ ಭಾಗದ ಜಿಲ್ಲೆಗಳ ಜನರಿಗೆ ಸಂಚಾರಕ್ಕೆ ಯೋಗ್ಯವಾದ ರಸ್ತೆ ಸಂಪರ್ಕಗಳಿಲ್ಲ. ಜತೆಗೆ ಬೆಂಗಳೂರು ಪೀಠವೇ ಸಾರ್ವಜನಿಕರಿಗೆ ಹೆಚ್ಚು ಅನುಕೂಲವಿದೆ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-126-908076377</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತರೀಕೆರೆ:</strong> ಕರಾವಳಿ ಮತ್ತು ಮಧ್ಯ ಕರ್ನಾಟಕ ಭಾಗದ ಬಹು ದಿನಗಳ ಬೇಡಿಕೆಯಾದ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿಗೆ ಬದಲಾಗಿ ಶಿವಮೊಗ್ಗದಲ್ಲಿಯೇ ಸ್ಥಾಪಿಸಬೇಕು ಎಂದು ತರೀಕೆರೆ ವಕೀಲರ ಸಂಘದ ಮಾಜಿ ಅಧ್ಯಕ್ಷ ಎಸ್. ಸುರೇಶ್ಚಂದ್ರ ಹೇಳಿದರು.</p>.<p>ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಕರಾವಳಿಯ ಭಾಗದ ಜನರಿಗೆ ಅನುಕೂಲವಾಗುವಂತೆ ಆ ಭಾಗದ ವಕೀಲರು ಮತ್ತು ಜನಪ್ರತಿನಿಧಿಗಳು ಮಂಗಳೂರಿನಲ್ಲಿ ಪೀಠ ಸ್ಥಾಪಿಸಲು ಒತ್ತಾಯಿಸುತ್ತಿದ್ದು, ಇದು ಇತರ ಜಿಲ್ಲೆಗಳ ಜನರಿಗೆ ಅನಾನುಕೂಲವಾಗಲಿದೆ ಎಂದರು.</p>.<p>ಬೆಂಗಳೂರಿನಿಂದ ಸುಮಾರು 250 ಕಿ.ಮೀ. ದೂರದಲ್ಲಿರುವ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಯ ಲಕ್ಷಾಂತರ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನ್ಯಾಯಾಲಯದ ಸೌಲಭ್ಯ ಒದಗಿಸಲು ಶಿವಮೊಗ್ಗದಲ್ಲಿ ಸಂಚಾರಿ ಪೀಠದ ಸ್ಥಾಪನೆ ಅಗತ್ಯವಾಗಿದೆ ಎಂದು ಹೇಳಿದರು.</p>.<p>ನ್ಯಾಯಮೂರ್ತಿ ಜಸ್ವಂತ್ ಸಿಂಗ್ ಸಮಿತಿಯ ಮಾರ್ಗ ಸೂಚಿಗಳ ಅನ್ವಯ ಸಂಚಾರ ಪೀಠದ ಸ್ಥಾಪನೆಗೆ ಅಗತ್ಯವಿರುವ ಎಲ್ಲ ಅರ್ಹತೆಗಳನ್ನು ಶಿವಮೊಗ್ಗವು ಹೊಂದಿದೆ. ಶಿವಮೊಗ್ಗ, ಚಿಕ್ಕ ಮಗ ಳೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲೇ ಸಮರ್ಥ ವಕೀಲರಿದ್ದಾರೆ. ಈ ಎಲ್ಲ ಜಿಲ್ಲೆಗಳ ಚುನಾಯಿತ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕ ಸಂಘ-ಸಂಸ್ಥೆಗಳ ಒಮ್ಮತದ ಬೆಂಬಲ ಬೇಡಿಕೆ ಇದಾಗಿದೆ ಎಂದು ತಿಳಿಸಿದರು.</p>.<p>ಒಂದು ವೇಳೆ ಮಂಗಳೂರಿನಲ್ಲಿ ಪೀಠ ಸ್ಥಾಪಿಸಿದರೆ ಈ ಭಾಗದ ಜಿಲ್ಲೆಗಳ ಜನರಿಗೆ ಸಂಚಾರಕ್ಕೆ ಯೋಗ್ಯವಾದ ರಸ್ತೆ ಸಂಪರ್ಕಗಳಿಲ್ಲ. ಜತೆಗೆ ಬೆಂಗಳೂರು ಪೀಠವೇ ಸಾರ್ವಜನಿಕರಿಗೆ ಹೆಚ್ಚು ಅನುಕೂಲವಿದೆ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-126-908076377</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>