<p><strong>ಶಿವಮೊಗ್ಗ:</strong> ಇಲ್ಲಿನ ಭೀಮೇಶ್ವರ ಗುಡಿಯಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ಶನಿವಾರ ಆರಂಭಗೊಂಡಿದೆ.</p><p>ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್ ಪ್ರಸನ್ನ ಕುಮಾರ್, ಎಂ.ಶ್ರೀಕಾಂತ್, ಎಚ್.ಸಿ.ಯೋಗೀಶ್ ನೇತೃತ್ವದಲ್ಲಿ ಪೂಜೆ ನೆರವೇರಿಸಿ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ನೀಡಲಾಯಿತು.</p><p>ಜಾನಪದ ಕಲಾ ಮೇಳ, ಹುಲಿವೇಷಧಾರಿಗಳ ಸುಮಾರು ಗಣಪತಿಯ ಮೂರ್ತಿಯ ಮೆರವಣಿಗೆ ಆರಂಭಗೊಂಡಿದ್ದು ಕೋಟೆ ಮಾರಿಕಾಂಬ ದೇವಸ್ಥಾನಕ್ಕೆ ಆಗಮಿಸಿದೆ. ಸಮ್ಮುಖದಲ್ಲಿ ಹೊರಟ ಮೆರವಣಿಗೆಯಲ್ಲಿ ಡೊಳ್ಳು ನೃತ್ಯ, ಕೀಲುಗೊಂಬೆ ಹಾಗೂ ಮಂಗಳವಾದ್ಯ ಸಾಥ್ ನೀಡಿವೆ.</p><p>ಮೆರವಣಿಗೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಕೇಸರಿ ಬಾವುಟ, ಪುರಾಣ, ಮಹಾಭಾರತ, ರಾಮಾಯಣದ ಪ್ರಸಂಗಗಳು ಹಾಗೂ ದೇವರ ಚಿತ್ರಗಳೊಂದಿಗೆ ಅಲಂಕೃತಗೊಂಡಿದೆ. ಕೇಸರಿ ಟೋಪಿ ಹಾಗೂ ಶಾಲು ಧರಿಸಿದ ಗಣಪತಿಯ ಭಕ್ತರು ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ. ಆಗಾಗ ಮಳೆಯ ಸಿಂಚನವೂ ಆಗುತ್ತಿದೆ.</p><p>ಗಣಪತಿ ಮೆರವಣಿಗೆ ಸ್ವಾಗತಿಸಲು ಶಿವಮೊಗ್ಗದ ಪ್ರಮುಖ ರಸ್ತೆಗಳನ್ನು ಹೂವು, ರಂಗೋಲಿಗಳಿಂದ ಅಲಂಕರಿಸಲಾಗಿದೆ. ಧ್ವನಿವರ್ಧಕಗಳ ಅಳವಡಿಸಲಾಗಿದೆ.</p><p>ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಅನ್ನ ಸಂತರ್ಪಣೆ ವ್ಯವಸ್ಥೆಗ ಮಾಡಲಾಗಿದೆ. ವಿವಿಧ ಸಂಘ ಸಂಸ್ಥೆಗಳು ಬಹಳ ಪ್ರಸಾದ ವಿತರಣೆಯಲ್ಲಿ ತೊಡಗಿವೆ. </p><p>ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗ ನಗರದೊಳಗೆ ಸಂಚಾರ ವ್ಯವಸ್ಥೆಯ ಮಾರ್ಗ ಬದಲಾವಣೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಇಲ್ಲಿನ ಭೀಮೇಶ್ವರ ಗುಡಿಯಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ಶನಿವಾರ ಆರಂಭಗೊಂಡಿದೆ.</p><p>ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್ ಪ್ರಸನ್ನ ಕುಮಾರ್, ಎಂ.ಶ್ರೀಕಾಂತ್, ಎಚ್.ಸಿ.ಯೋಗೀಶ್ ನೇತೃತ್ವದಲ್ಲಿ ಪೂಜೆ ನೆರವೇರಿಸಿ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ನೀಡಲಾಯಿತು.</p><p>ಜಾನಪದ ಕಲಾ ಮೇಳ, ಹುಲಿವೇಷಧಾರಿಗಳ ಸುಮಾರು ಗಣಪತಿಯ ಮೂರ್ತಿಯ ಮೆರವಣಿಗೆ ಆರಂಭಗೊಂಡಿದ್ದು ಕೋಟೆ ಮಾರಿಕಾಂಬ ದೇವಸ್ಥಾನಕ್ಕೆ ಆಗಮಿಸಿದೆ. ಸಮ್ಮುಖದಲ್ಲಿ ಹೊರಟ ಮೆರವಣಿಗೆಯಲ್ಲಿ ಡೊಳ್ಳು ನೃತ್ಯ, ಕೀಲುಗೊಂಬೆ ಹಾಗೂ ಮಂಗಳವಾದ್ಯ ಸಾಥ್ ನೀಡಿವೆ.</p><p>ಮೆರವಣಿಗೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಕೇಸರಿ ಬಾವುಟ, ಪುರಾಣ, ಮಹಾಭಾರತ, ರಾಮಾಯಣದ ಪ್ರಸಂಗಗಳು ಹಾಗೂ ದೇವರ ಚಿತ್ರಗಳೊಂದಿಗೆ ಅಲಂಕೃತಗೊಂಡಿದೆ. ಕೇಸರಿ ಟೋಪಿ ಹಾಗೂ ಶಾಲು ಧರಿಸಿದ ಗಣಪತಿಯ ಭಕ್ತರು ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ. ಆಗಾಗ ಮಳೆಯ ಸಿಂಚನವೂ ಆಗುತ್ತಿದೆ.</p><p>ಗಣಪತಿ ಮೆರವಣಿಗೆ ಸ್ವಾಗತಿಸಲು ಶಿವಮೊಗ್ಗದ ಪ್ರಮುಖ ರಸ್ತೆಗಳನ್ನು ಹೂವು, ರಂಗೋಲಿಗಳಿಂದ ಅಲಂಕರಿಸಲಾಗಿದೆ. ಧ್ವನಿವರ್ಧಕಗಳ ಅಳವಡಿಸಲಾಗಿದೆ.</p><p>ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಅನ್ನ ಸಂತರ್ಪಣೆ ವ್ಯವಸ್ಥೆಗ ಮಾಡಲಾಗಿದೆ. ವಿವಿಧ ಸಂಘ ಸಂಸ್ಥೆಗಳು ಬಹಳ ಪ್ರಸಾದ ವಿತರಣೆಯಲ್ಲಿ ತೊಡಗಿವೆ. </p><p>ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗ ನಗರದೊಳಗೆ ಸಂಚಾರ ವ್ಯವಸ್ಥೆಯ ಮಾರ್ಗ ಬದಲಾವಣೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>