<p><strong>ರಿಪ್ಪನ್ ಪೇಟೆ:</strong> ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯಲ್ಲಿ ಮಂಗಳವಾರ ಚಾಲಕನ ನಿಯಂತ್ರಣ ತಪ್ಪಿ ಬಲೆನೊ ಕಾರು ಕೆರೆಗೆ ಉರುಳಿ ಬಿದ್ದಿದೆ. </p><p>ಅಪಘಾತದಲ್ಲಿ ಸಾಗರ ತಾಲ್ಲೂಕಿನ ತ್ಯಾಗರ್ತಿ ಗ್ರಾಮದ ಹುತ್ತದಿಂಬದ ನಿವಾಸಿ ಪಾರ್ವತಮ್ಮ (65) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು.</p><p>ಚಾಲಕ ಮಂಜುನಾಥ್ (21) ಹಾಗೂ ಅವರ ಸಹೋದರಿ ಅಕ್ಷತಾ (23) ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ.</p><p>ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರೆಗೆ ಬಂದಿದ್ದ ಮಂಜುನಾಥ್ ಕುಟುಂಬ, ದೇವಿಯ ದರ್ಶನ ಪಡೆದು ಊರಿಗೆ ತೆರಳುವಾಗ ಸಾಗರ-ಹೊಸನಗರ ರಾಜ್ಯ ಹೆದ್ದಾರಿ ಪಕ್ಕದ ಚಿಪ್ಪಿಗೆರೆ ಕೆರೆಗೆ ಕಾರು ಉರುಳಿ ಬಿದ್ದಿದೆ. ಈ ವೇಳೆ ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಸ್ಥಳೀಯ ಯುವಕರಾದ ಗವಟೂರಿನ ಗಿರೀಶ್ ಹಾಗೂ ಇಮ್ರಾನ್ ನೀರಿಗೆ ಧುಮಿಕಿ ಇಬ್ಬರನ್ನು ರಕ್ಷಿಸಿದ್ದಾರೆ.</p><p>ವೇಗವಾಗಿ ಬಂದ ಕಾರು ತಡೆಗೋಡೆ ಇಲ್ಲದ ಕೆರೆಗೆ ಉರುಳಿ ಬೀಳುವ ದೃಶ್ಯ ಸಮೀಪದ ಕಟ್ಟಡದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ ಪೇಟೆ:</strong> ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯಲ್ಲಿ ಮಂಗಳವಾರ ಚಾಲಕನ ನಿಯಂತ್ರಣ ತಪ್ಪಿ ಬಲೆನೊ ಕಾರು ಕೆರೆಗೆ ಉರುಳಿ ಬಿದ್ದಿದೆ. </p><p>ಅಪಘಾತದಲ್ಲಿ ಸಾಗರ ತಾಲ್ಲೂಕಿನ ತ್ಯಾಗರ್ತಿ ಗ್ರಾಮದ ಹುತ್ತದಿಂಬದ ನಿವಾಸಿ ಪಾರ್ವತಮ್ಮ (65) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು.</p><p>ಚಾಲಕ ಮಂಜುನಾಥ್ (21) ಹಾಗೂ ಅವರ ಸಹೋದರಿ ಅಕ್ಷತಾ (23) ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ.</p><p>ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರೆಗೆ ಬಂದಿದ್ದ ಮಂಜುನಾಥ್ ಕುಟುಂಬ, ದೇವಿಯ ದರ್ಶನ ಪಡೆದು ಊರಿಗೆ ತೆರಳುವಾಗ ಸಾಗರ-ಹೊಸನಗರ ರಾಜ್ಯ ಹೆದ್ದಾರಿ ಪಕ್ಕದ ಚಿಪ್ಪಿಗೆರೆ ಕೆರೆಗೆ ಕಾರು ಉರುಳಿ ಬಿದ್ದಿದೆ. ಈ ವೇಳೆ ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಸ್ಥಳೀಯ ಯುವಕರಾದ ಗವಟೂರಿನ ಗಿರೀಶ್ ಹಾಗೂ ಇಮ್ರಾನ್ ನೀರಿಗೆ ಧುಮಿಕಿ ಇಬ್ಬರನ್ನು ರಕ್ಷಿಸಿದ್ದಾರೆ.</p><p>ವೇಗವಾಗಿ ಬಂದ ಕಾರು ತಡೆಗೋಡೆ ಇಲ್ಲದ ಕೆರೆಗೆ ಉರುಳಿ ಬೀಳುವ ದೃಶ್ಯ ಸಮೀಪದ ಕಟ್ಟಡದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>