<p>ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಹಾಗೂ ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ–52ರ ಹುಲಿಕಲ್ ಘಾಟ್ (ಬಾಳೆಬರೆ ಘಾಟ್) ರಸ್ತೆಯಲ್ಲಿ ಭೂಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ವಿಧದ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶಿಸಿದೆ.</p>.<p>ಪ್ರಯಾಣಿಕರ ಸುರಕ್ಷತೆಗೆ ಧಕ್ಕೆಯಿರುವುದರಿಂದ, ಕಾಮಗಾರಿ ಪೂರ್ಣಗೊಳ್ಳುವವರೆಗೆ ಈ ಮಾರ್ಗವನ್ನು ಬಂದ್ ಮಾಡಲಾಗಿದೆ.</p>.<p>ರಕ್ಷಣಾತ್ಮಕ ಕಾಮಗಾರಿ ಪೂರ್ಣಗೊಳ್ಳುವವರೆಗೆ ಮುಂದುವರಿಯಲಿದೆ. ಸಾರ್ವಜನಿಕರು ಈ ಬಗ್ಗೆ ಸಹಕರಿಸಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ ಅಭಿಷೇಕ್ ವಿ. ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.</p>.<p>ಪರ್ಯಾಯ ಮಾರ್ಗಗಳು: ತೀರ್ಥಹಳ್ಳಿ – ಕುಂದಾಪುರ (ಭಾರಿ ವಾಹನಗಳು): ತೀರ್ಥಹಳ್ಳಿ–ರಾವೆ–ಕಾನುಗೋಡು–ನಗರ–ಕೊಲ್ಲೂರು ಕುಂದಾಪುರ</p>.<p>ಯಡೂರು, ಮಾಸ್ತಿಕಟ್ಟೆ ಮಾರ್ಗ: ತೀರ್ಥಹಳ್ಳಿ– ಕಾನುಗೋಡು–ನಗರ– ಕೊಲ್ಲೂರು– ಕುಂದಾಪುರ</p>.<p>ಶಿವಮೊಗ್ಗ, ಸಾಗರದಿಂದ ಹೊಸನಗರ ಮಾರ್ಗ: ಶಿವಮೊಗ್ಗ–ಹೊನ್ನಾವರ ರಾಷ್ಟ್ರೀಯ ಹೆದ್ದಾರಿ– ಹೊನ್ನಾವರ– ಭಟ್ಕಳ– ಬೈಂದೂರು– ಕುಂದಾಪುರ</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-42-2145994313</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಹಾಗೂ ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ–52ರ ಹುಲಿಕಲ್ ಘಾಟ್ (ಬಾಳೆಬರೆ ಘಾಟ್) ರಸ್ತೆಯಲ್ಲಿ ಭೂಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ವಿಧದ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶಿಸಿದೆ.</p>.<p>ಪ್ರಯಾಣಿಕರ ಸುರಕ್ಷತೆಗೆ ಧಕ್ಕೆಯಿರುವುದರಿಂದ, ಕಾಮಗಾರಿ ಪೂರ್ಣಗೊಳ್ಳುವವರೆಗೆ ಈ ಮಾರ್ಗವನ್ನು ಬಂದ್ ಮಾಡಲಾಗಿದೆ.</p>.<p>ರಕ್ಷಣಾತ್ಮಕ ಕಾಮಗಾರಿ ಪೂರ್ಣಗೊಳ್ಳುವವರೆಗೆ ಮುಂದುವರಿಯಲಿದೆ. ಸಾರ್ವಜನಿಕರು ಈ ಬಗ್ಗೆ ಸಹಕರಿಸಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ ಅಭಿಷೇಕ್ ವಿ. ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.</p>.<p>ಪರ್ಯಾಯ ಮಾರ್ಗಗಳು: ತೀರ್ಥಹಳ್ಳಿ – ಕುಂದಾಪುರ (ಭಾರಿ ವಾಹನಗಳು): ತೀರ್ಥಹಳ್ಳಿ–ರಾವೆ–ಕಾನುಗೋಡು–ನಗರ–ಕೊಲ್ಲೂರು ಕುಂದಾಪುರ</p>.<p>ಯಡೂರು, ಮಾಸ್ತಿಕಟ್ಟೆ ಮಾರ್ಗ: ತೀರ್ಥಹಳ್ಳಿ– ಕಾನುಗೋಡು–ನಗರ– ಕೊಲ್ಲೂರು– ಕುಂದಾಪುರ</p>.<p>ಶಿವಮೊಗ್ಗ, ಸಾಗರದಿಂದ ಹೊಸನಗರ ಮಾರ್ಗ: ಶಿವಮೊಗ್ಗ–ಹೊನ್ನಾವರ ರಾಷ್ಟ್ರೀಯ ಹೆದ್ದಾರಿ– ಹೊನ್ನಾವರ– ಭಟ್ಕಳ– ಬೈಂದೂರು– ಕುಂದಾಪುರ</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-42-2145994313</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>