<p><strong>ಶಿವಮೊಗ್ಗ</strong>: ಇಲ್ಲಿನ ವಿನೋಬ ನಗರದ ಪೊಲೀಸ್ ಚೌಕಿಯ ಬಳಿಯ ಮಹಾನಗರ ಪಾಲಿಕೆ ವಲಯ ಕಚೇರಿಯಲ್ಲಿ ಭಾನುವಾರ ವಿಧಾನಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಅವರ ನೂತನ ಜನಸಂಪರ್ಕ ಕಚೇರಿಯನ್ನು ಆರ್ಎಸ್ಎಸ್ ಪ್ರಾಂತ್ಯ ಕಾರ್ಯವಾಹ ಪಟ್ಟಾಭಿರಾಮ್ ಉದ್ಘಾಟಿಸಿದರು. ಇದೇ ವೇಳೆ ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರು ಉದ್ಯೋಗ ಪಡೆಯಲು ನೆರವಾಗಲು ‘ಕಾಯಕ ಸೇತು’ ಹೆಸರಿನ ಜಾಬ್ ಪೋರ್ಟಲ್ ಸಂಸದ ಬಿ.ವೈ.ರಾಘವೇಂದ್ರ ಲೋಕಾರ್ಪಣೆ ಮಾಡಿ ಶುಭಾಶಯ ಕೋರಿದರು. </p>.<p>ಈ ವೇಳೆ ಡಾ.ಧನಂಜಯ ಸರ್ಜಿ ಮಾತನಾಡಿ, ರಾಜ್ಯದಲ್ಲಿ 4,430 ಪದವಿ ಕಾಲೇಜು ಹಾಗೂ 26 ವಿಶ್ವವಿದ್ಯಾಲಯ ಇವೆ. ಪ್ರತಿ ವರ್ಷ 3 ಲಕ್ಷ ವಿದ್ಯಾರ್ಥಿಗಳು ಪದವಿ ಪಡೆಯುತ್ತಾರೆ. ಅವರಲ್ಲಿ ಬಹುತೇಕರು ಉದ್ಯೋಗದ ಭಾಗ್ಯ ಕಾಣದೇ ಪರಿತಪಿಸುತ್ತಾರೆ. ನಿರುದ್ಯೋಗದ ಸಮಸ್ಯೆ ಕರ್ನಾಟಕದ ಯುವಕ-ಯುವತಿಯರಿಗೆ ಅತಿಯಾಗಿ ಬಾಧಿಸುತ್ತಿದೆ. ಕೆಲವರು ತಮ್ಮ ಓದಿಗೆ ಸಂಬಂಧವೇ ಇಲ್ಲದ ಕೆಲಸ ಪಡೆದು ಹೊಟ್ಟೆ ಪಾಡು ಸಾಗಿಸುತ್ತಿದ್ದರೆ, ಇನ್ನು ಕೆಲವರು ಮತ್ತೆ ಊರಿನ ದಾರಿ ಹಿಡಿಯುತ್ತಿದ್ದಾರೆ. ವಿದ್ಯಾರ್ಹತೆಗೆ ತಕ್ಕ ಉದ್ಯೋಗವಿಲ್ಲ ಅವರಿಗೆ ನೆರವಾಗಲು ‘ಕಾಯಕ ಸೇತು’ ಅರಂಭಿಸಿದ್ದೇವೆ ಎಂದರು.</p>.<p>ಜಿಲ್ಲೆಯಲ್ಲಿ ಮೊದಲ ಬಾರಿಗೆ ಈ ಉಚಿತ ಜಾಬ್ ಪೋರ್ಟಲ್ ಆರಂಭಿಸಿದ್ದೇವೆ. ಮುಂದಿನ ದಿನಗಳಲ್ಲಿ ಇದನ್ನು ಪದವೀಧರ ಕ್ಷೇತ್ರದ ಉಳಿದೆಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಹೇಳಿದರು. </p>.<p>ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಮಹಾಲಿಂಗಯ್ಯ ಶಾಸ್ತ್ರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ರಮೇಶ್, ಬಿಜೆಪಿ ಮುಖಂಡ ಎಸ್.ದತ್ತಾತ್ರಿ, ಮಾಜಿ ಮೇಯರ್ ಸುನೀತಾ ಅಣ್ಣಪ್ಪ, ರುದ್ರಪ್ಪ ಸರ್ಜಿ ನೂತನ ಕಚೇರಿಗೆ ಭೇಟಿ ನೀಡಿ ಶುಭ ಹಾರೈಸಿದರು.</p>.<p><strong>ಕಾಯಕ ಸೇತು ಕೆಲಸ ಹೇಗೆ?</strong> </p><p>ಪದವೀಧರರು ತಮ್ಮ ರೆಸ್ಯುಮ್ ಅಥವಾ ಸಿ.ವಿಯನ್ನು ‘ಕಾಯಕ ಸೇತು’ ಜಾಬ್ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಿದರೆ ವಿದ್ಯಾರ್ಹತೆಗೆ ತಕ್ಕ ಉದ್ಯೋಗ ಕೊಡಲು ಪ್ರತಿಷ್ಠಿತ ಸಂಸ್ಥೆಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹಿತಿ ರವಾನೆಯಾಗುತ್ತದೆ. ಆಯ್ಕೆಯಾಗದವರಲ್ಲಿ ಯಾವ ಕೌಶಲ್ಯದ ಕೊರತೆ ಇದೆ ಎಂಬುದನ್ನು ಪರಿಶೀಲಿಸಿ ಆ ಕೌಶಲ್ಯಗಳನ್ನೂ ಕಲಿಸುವ ಚಿಂತನೆ ಹೊಂದಿದ್ದೇವೆ ಎಂದು ಡಾ.ಧನಂಜಯ ಸರ್ಜಿ ತಿಳಿಸಿದರು. ಈ ಜಾಬ್ ಪೋರ್ಟಲ್ನಲ್ಲಿ ಅಭ್ಯರ್ಥಿಗಳು ಪ್ರತಿ 6 ತಿಂಗಳಿಗೊಮ್ಮೆ ತಮ್ಮ ಪ್ರೊಫೈಲ್ ಅಪ್ಡೇಟ್ ಮಾಡಬೇಕು. ಆನ್ ಲೈನ್ ಎಂಟ್ರೆನ್ಸ್ ಟೆಸ್ಟ್ ಮುಖಾಂತರ ಅಭ್ಯರ್ಥಿಯ ಆಯ್ಕೆಗೆ ಅವಕಾಶವಿರುತ್ತದೆ ಎಂದು ಡಾ.ಸರ್ಜಿ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಇಲ್ಲಿನ ವಿನೋಬ ನಗರದ ಪೊಲೀಸ್ ಚೌಕಿಯ ಬಳಿಯ ಮಹಾನಗರ ಪಾಲಿಕೆ ವಲಯ ಕಚೇರಿಯಲ್ಲಿ ಭಾನುವಾರ ವಿಧಾನಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಅವರ ನೂತನ ಜನಸಂಪರ್ಕ ಕಚೇರಿಯನ್ನು ಆರ್ಎಸ್ಎಸ್ ಪ್ರಾಂತ್ಯ ಕಾರ್ಯವಾಹ ಪಟ್ಟಾಭಿರಾಮ್ ಉದ್ಘಾಟಿಸಿದರು. ಇದೇ ವೇಳೆ ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರು ಉದ್ಯೋಗ ಪಡೆಯಲು ನೆರವಾಗಲು ‘ಕಾಯಕ ಸೇತು’ ಹೆಸರಿನ ಜಾಬ್ ಪೋರ್ಟಲ್ ಸಂಸದ ಬಿ.ವೈ.ರಾಘವೇಂದ್ರ ಲೋಕಾರ್ಪಣೆ ಮಾಡಿ ಶುಭಾಶಯ ಕೋರಿದರು. </p>.<p>ಈ ವೇಳೆ ಡಾ.ಧನಂಜಯ ಸರ್ಜಿ ಮಾತನಾಡಿ, ರಾಜ್ಯದಲ್ಲಿ 4,430 ಪದವಿ ಕಾಲೇಜು ಹಾಗೂ 26 ವಿಶ್ವವಿದ್ಯಾಲಯ ಇವೆ. ಪ್ರತಿ ವರ್ಷ 3 ಲಕ್ಷ ವಿದ್ಯಾರ್ಥಿಗಳು ಪದವಿ ಪಡೆಯುತ್ತಾರೆ. ಅವರಲ್ಲಿ ಬಹುತೇಕರು ಉದ್ಯೋಗದ ಭಾಗ್ಯ ಕಾಣದೇ ಪರಿತಪಿಸುತ್ತಾರೆ. ನಿರುದ್ಯೋಗದ ಸಮಸ್ಯೆ ಕರ್ನಾಟಕದ ಯುವಕ-ಯುವತಿಯರಿಗೆ ಅತಿಯಾಗಿ ಬಾಧಿಸುತ್ತಿದೆ. ಕೆಲವರು ತಮ್ಮ ಓದಿಗೆ ಸಂಬಂಧವೇ ಇಲ್ಲದ ಕೆಲಸ ಪಡೆದು ಹೊಟ್ಟೆ ಪಾಡು ಸಾಗಿಸುತ್ತಿದ್ದರೆ, ಇನ್ನು ಕೆಲವರು ಮತ್ತೆ ಊರಿನ ದಾರಿ ಹಿಡಿಯುತ್ತಿದ್ದಾರೆ. ವಿದ್ಯಾರ್ಹತೆಗೆ ತಕ್ಕ ಉದ್ಯೋಗವಿಲ್ಲ ಅವರಿಗೆ ನೆರವಾಗಲು ‘ಕಾಯಕ ಸೇತು’ ಅರಂಭಿಸಿದ್ದೇವೆ ಎಂದರು.</p>.<p>ಜಿಲ್ಲೆಯಲ್ಲಿ ಮೊದಲ ಬಾರಿಗೆ ಈ ಉಚಿತ ಜಾಬ್ ಪೋರ್ಟಲ್ ಆರಂಭಿಸಿದ್ದೇವೆ. ಮುಂದಿನ ದಿನಗಳಲ್ಲಿ ಇದನ್ನು ಪದವೀಧರ ಕ್ಷೇತ್ರದ ಉಳಿದೆಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಹೇಳಿದರು. </p>.<p>ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಮಹಾಲಿಂಗಯ್ಯ ಶಾಸ್ತ್ರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ರಮೇಶ್, ಬಿಜೆಪಿ ಮುಖಂಡ ಎಸ್.ದತ್ತಾತ್ರಿ, ಮಾಜಿ ಮೇಯರ್ ಸುನೀತಾ ಅಣ್ಣಪ್ಪ, ರುದ್ರಪ್ಪ ಸರ್ಜಿ ನೂತನ ಕಚೇರಿಗೆ ಭೇಟಿ ನೀಡಿ ಶುಭ ಹಾರೈಸಿದರು.</p>.<p><strong>ಕಾಯಕ ಸೇತು ಕೆಲಸ ಹೇಗೆ?</strong> </p><p>ಪದವೀಧರರು ತಮ್ಮ ರೆಸ್ಯುಮ್ ಅಥವಾ ಸಿ.ವಿಯನ್ನು ‘ಕಾಯಕ ಸೇತು’ ಜಾಬ್ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಿದರೆ ವಿದ್ಯಾರ್ಹತೆಗೆ ತಕ್ಕ ಉದ್ಯೋಗ ಕೊಡಲು ಪ್ರತಿಷ್ಠಿತ ಸಂಸ್ಥೆಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹಿತಿ ರವಾನೆಯಾಗುತ್ತದೆ. ಆಯ್ಕೆಯಾಗದವರಲ್ಲಿ ಯಾವ ಕೌಶಲ್ಯದ ಕೊರತೆ ಇದೆ ಎಂಬುದನ್ನು ಪರಿಶೀಲಿಸಿ ಆ ಕೌಶಲ್ಯಗಳನ್ನೂ ಕಲಿಸುವ ಚಿಂತನೆ ಹೊಂದಿದ್ದೇವೆ ಎಂದು ಡಾ.ಧನಂಜಯ ಸರ್ಜಿ ತಿಳಿಸಿದರು. ಈ ಜಾಬ್ ಪೋರ್ಟಲ್ನಲ್ಲಿ ಅಭ್ಯರ್ಥಿಗಳು ಪ್ರತಿ 6 ತಿಂಗಳಿಗೊಮ್ಮೆ ತಮ್ಮ ಪ್ರೊಫೈಲ್ ಅಪ್ಡೇಟ್ ಮಾಡಬೇಕು. ಆನ್ ಲೈನ್ ಎಂಟ್ರೆನ್ಸ್ ಟೆಸ್ಟ್ ಮುಖಾಂತರ ಅಭ್ಯರ್ಥಿಯ ಆಯ್ಕೆಗೆ ಅವಕಾಶವಿರುತ್ತದೆ ಎಂದು ಡಾ.ಸರ್ಜಿ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>