<p><strong>ಶಿವಮೊಗ್ಗ:</strong> ‘ರಾಜ್ಯದಲ್ಲಿ ಹೊಸದಾಗಿ ಆರಂಭಿಸಲಾಗುತ್ತಿರುವ 800 ಕೆಪಿಎಸ್ ಶಾಲೆಗಳಿಗೆ ವಿಶೇಷ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಬಜೆಟ್ನಲ್ಲಿ ಅದಕ್ಕೆ ಅವಕಾಶ ಮಾಡಿಕೊಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿರುವೆ’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಎಸ್ ಶಾಲೆಗಳಲ್ಲಿ ಸಂಗೀತ, ಚಿತ್ರಕಲೆ, ದೈಹಿಕ ಶಿಕ್ಷಣ ಶಿಕ್ಷಕರು ಸೇರಿ ವಿಶೇಷ ಶಿಕ್ಷಕರನ್ನು ನೇಮಕ ಮಾಡಲಾಗುವುದು. ಹುದ್ದೆಗಳ ಸಂಖ್ಯೆ ಹಾಗೂ ವಿವರವನ್ನು ಶೀಘ್ರವೇ ಅಂತಿಮಗೊಳಿಸಲಾಗುವುದು ಎಂದರು.</p>.<p>‘ರಾಜ್ಯದಲ್ಲಿ 1995ರಿಂದ 2005ರವರೆಗಿನ ಅನುದಾನರಹಿತ ಕನ್ನಡ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಲು ಈಚೆಗೆ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಪ್ರಸ್ತಾವ ಸಲ್ಲಿಸಿದ್ದೇವೆ. ಅದಕ್ಕೆ ಪೂರಕ ಪ್ರತಿಕ್ರಿಯೆ ವ್ಯಕ್ತವಾಗಿದೆ’ ಸಚಿವರು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ರಾಜ್ಯದಲ್ಲಿ ಹೊಸದಾಗಿ ಆರಂಭಿಸಲಾಗುತ್ತಿರುವ 800 ಕೆಪಿಎಸ್ ಶಾಲೆಗಳಿಗೆ ವಿಶೇಷ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಬಜೆಟ್ನಲ್ಲಿ ಅದಕ್ಕೆ ಅವಕಾಶ ಮಾಡಿಕೊಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿರುವೆ’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಎಸ್ ಶಾಲೆಗಳಲ್ಲಿ ಸಂಗೀತ, ಚಿತ್ರಕಲೆ, ದೈಹಿಕ ಶಿಕ್ಷಣ ಶಿಕ್ಷಕರು ಸೇರಿ ವಿಶೇಷ ಶಿಕ್ಷಕರನ್ನು ನೇಮಕ ಮಾಡಲಾಗುವುದು. ಹುದ್ದೆಗಳ ಸಂಖ್ಯೆ ಹಾಗೂ ವಿವರವನ್ನು ಶೀಘ್ರವೇ ಅಂತಿಮಗೊಳಿಸಲಾಗುವುದು ಎಂದರು.</p>.<p>‘ರಾಜ್ಯದಲ್ಲಿ 1995ರಿಂದ 2005ರವರೆಗಿನ ಅನುದಾನರಹಿತ ಕನ್ನಡ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಲು ಈಚೆಗೆ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಪ್ರಸ್ತಾವ ಸಲ್ಲಿಸಿದ್ದೇವೆ. ಅದಕ್ಕೆ ಪೂರಕ ಪ್ರತಿಕ್ರಿಯೆ ವ್ಯಕ್ತವಾಗಿದೆ’ ಸಚಿವರು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>