<p><strong>ಶಿವಮೊಗ್ಗ</strong>: ಪರೀಕ್ಷಾ ಶುಲ್ಕ ಕಡಿತಗೊಳಿಸಲು ಕೋರಿ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿರುವ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ನಡೆ ಖಂಡಿಸಿ ಗುರುವಾರ ವಿದ್ಯಾರ್ಥಿಗಳು ಆಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದರು.</p>.<p>ವಿದ್ಯಾರ್ಥಿನಿಲಯಗಳಲ್ಲಿ ದುಬಾರಿ ಪ್ರವೇಶ ಶುಲ್ಕ ವಸೂಲಿ ಮಾಡುವ ಮೂಲಕ ಹಠಮಾರಿ ಧೋರಣೆ ತೋರಿದ ವಿಶ್ವವಿದ್ಯಾಲಯದ ಅಡಳಿತ ಈಗ ಪರೀಕ್ಷಾ ಶುಲ್ಕದ ವಿಚಾರದಲ್ಲೂ ಅಮಾನವೀಯವಾಗಿ ವರ್ತಿಸುತ್ತಿದೆ. ವಿದ್ಯಾರ್ಥಿಗಳು ಸಂಕಷ್ಟ ಎದುರಿಸುವಂತಾಗಿದೆ ಎಂದು ದೂರಿದರು.</p>.<p>ಹಿಂದಿನ ಸೆಮಿಸ್ಟರ್ ಪರೀಕ್ಷೆಗೆ ₹ 2 ಸಾವಿರ ಪರೀಕ್ಷಾ ಶುಲ್ಕ ಪಡೆಯಲಾಗಿತ್ತು. ಕೊರೊನಾ ಕಾರಣ ಪರೀಕ್ಷೆಗಳು ನಡೆಯಲಿಲ್ಲ. ಈಗ ಮೂರನೇ ಸೆಮಿಸ್ಟರ್ಗೆ ಮತ್ತೆ ₹ 2 ಸಾವಿರ ಶುಲ್ಕ ಕಟ್ಟುವಂತೆ ವಿಶ್ವವಿದ್ಯಾಲಯ ಆದೇಶ ಹೊರಡಿಸಿದೆ. ಅದರೆ, ಹಿಂದಿನ ಸೆಮಿಸ್ಟರ್ನ ಪರೀಕ್ಷೆಗಳು ನಡೆಯದೆ ಇರುವ ಅದೇ ಪರೀಕ್ಷಾ ಶುಲ್ಕವನ್ನು ಮೂರನೇ ಸೆಮಿಸ್ಟರ್ ಶುಲ್ಕಕ್ಕೆ ಹೊಂದಾಣಿಕೆ ಮಾಡಿಕೊಂಡು, ಕೇವಲ ಅಂಕಪಟ್ಟಿ ಶುಲ್ಕ ₹ 200 ಪಡೆಯಬೇಕು ಎಂದು ಒತ್ತಾಯಿಸಿದರು.</p>.<p>ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಮುಖ್ಯಮಂತ್ರಿ ಹೆಚ್ಚಿನ ಅನುದಾನ ನೀಡಿದ್ದಾರೆ. ಆದರೂ ಕುಲಪತಿಗಳು ವಿಶ್ವವಿದ್ಯಾಲಯ ಆರ್ಥಿಕ ಸಂಕಷ್ಟದಲ್ಲಿದೆ ಎಂದು ಹೇಳುತ್ತಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದು ದೂರಿದರು.</p>.<p>ಈ ವರ್ಷದ ಹಾಸ್ಟೆಲ್ ಶುಲ್ಕವನ್ನು ₹ 9 ಸಾವಿರಕ್ಕೆ ಹೆಚ್ಚಿಸಲಾಗಿದೆ. ಶುಲ್ಕ ಕಡಿಮೆ ಮಾಡುವಂತೆ ವಿದ್ಯಾರ್ಥಿಗಳ ಮನವಿ ಧಿಕ್ಕರಿಸಿದೆ. ವಿಶ್ವವಿದ್ಯಾಲಯ ಆಡಳಿತ ಸಂಪೂರ್ಣವಾಗಿ ವಿದ್ಯಾರ್ಥಿ ವಿರೋಧಿ ನಿಲುವಿನಿಂದ ಕೂಡಿದೆ. ಸಂಸದರು, ಸಚಿವರು ಮಧ್ಯಪ್ರವೇಶಿಸಿ ವಿದ್ಯಾರ್ಥಿಗಳ ಹಿತ ಕಾಯಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಪರೀಕ್ಷಾ ಶುಲ್ಕ ಕಡಿತಗೊಳಿಸಲು ಕೋರಿ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿರುವ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ನಡೆ ಖಂಡಿಸಿ ಗುರುವಾರ ವಿದ್ಯಾರ್ಥಿಗಳು ಆಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದರು.</p>.<p>ವಿದ್ಯಾರ್ಥಿನಿಲಯಗಳಲ್ಲಿ ದುಬಾರಿ ಪ್ರವೇಶ ಶುಲ್ಕ ವಸೂಲಿ ಮಾಡುವ ಮೂಲಕ ಹಠಮಾರಿ ಧೋರಣೆ ತೋರಿದ ವಿಶ್ವವಿದ್ಯಾಲಯದ ಅಡಳಿತ ಈಗ ಪರೀಕ್ಷಾ ಶುಲ್ಕದ ವಿಚಾರದಲ್ಲೂ ಅಮಾನವೀಯವಾಗಿ ವರ್ತಿಸುತ್ತಿದೆ. ವಿದ್ಯಾರ್ಥಿಗಳು ಸಂಕಷ್ಟ ಎದುರಿಸುವಂತಾಗಿದೆ ಎಂದು ದೂರಿದರು.</p>.<p>ಹಿಂದಿನ ಸೆಮಿಸ್ಟರ್ ಪರೀಕ್ಷೆಗೆ ₹ 2 ಸಾವಿರ ಪರೀಕ್ಷಾ ಶುಲ್ಕ ಪಡೆಯಲಾಗಿತ್ತು. ಕೊರೊನಾ ಕಾರಣ ಪರೀಕ್ಷೆಗಳು ನಡೆಯಲಿಲ್ಲ. ಈಗ ಮೂರನೇ ಸೆಮಿಸ್ಟರ್ಗೆ ಮತ್ತೆ ₹ 2 ಸಾವಿರ ಶುಲ್ಕ ಕಟ್ಟುವಂತೆ ವಿಶ್ವವಿದ್ಯಾಲಯ ಆದೇಶ ಹೊರಡಿಸಿದೆ. ಅದರೆ, ಹಿಂದಿನ ಸೆಮಿಸ್ಟರ್ನ ಪರೀಕ್ಷೆಗಳು ನಡೆಯದೆ ಇರುವ ಅದೇ ಪರೀಕ್ಷಾ ಶುಲ್ಕವನ್ನು ಮೂರನೇ ಸೆಮಿಸ್ಟರ್ ಶುಲ್ಕಕ್ಕೆ ಹೊಂದಾಣಿಕೆ ಮಾಡಿಕೊಂಡು, ಕೇವಲ ಅಂಕಪಟ್ಟಿ ಶುಲ್ಕ ₹ 200 ಪಡೆಯಬೇಕು ಎಂದು ಒತ್ತಾಯಿಸಿದರು.</p>.<p>ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಮುಖ್ಯಮಂತ್ರಿ ಹೆಚ್ಚಿನ ಅನುದಾನ ನೀಡಿದ್ದಾರೆ. ಆದರೂ ಕುಲಪತಿಗಳು ವಿಶ್ವವಿದ್ಯಾಲಯ ಆರ್ಥಿಕ ಸಂಕಷ್ಟದಲ್ಲಿದೆ ಎಂದು ಹೇಳುತ್ತಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದು ದೂರಿದರು.</p>.<p>ಈ ವರ್ಷದ ಹಾಸ್ಟೆಲ್ ಶುಲ್ಕವನ್ನು ₹ 9 ಸಾವಿರಕ್ಕೆ ಹೆಚ್ಚಿಸಲಾಗಿದೆ. ಶುಲ್ಕ ಕಡಿಮೆ ಮಾಡುವಂತೆ ವಿದ್ಯಾರ್ಥಿಗಳ ಮನವಿ ಧಿಕ್ಕರಿಸಿದೆ. ವಿಶ್ವವಿದ್ಯಾಲಯ ಆಡಳಿತ ಸಂಪೂರ್ಣವಾಗಿ ವಿದ್ಯಾರ್ಥಿ ವಿರೋಧಿ ನಿಲುವಿನಿಂದ ಕೂಡಿದೆ. ಸಂಸದರು, ಸಚಿವರು ಮಧ್ಯಪ್ರವೇಶಿಸಿ ವಿದ್ಯಾರ್ಥಿಗಳ ಹಿತ ಕಾಯಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>