<p><strong>ಶಿವಮೊಗ್ಗ:</strong> ಪಾರ್ಶ್ವವಾಯುಗೆ ತುತ್ತಾಗಿ ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದ ಇಲ್ಲಿನ ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮದ ಚಿರತೆ ಭದ್ರಾಗೆ (15) ಚಿಕಿತ್ಸೆಯ ಭಾಗವಾಗಿ ಶುಕ್ರವಾರ ತಡರಾತ್ರಿ ಇಲ್ಲಿನ ನಂಜಪ್ಪ ಆಸ್ಪತ್ರೆಯಲ್ಲಿ ಎಂಆರ್ಐ ಸ್ಕ್ಯಾನ್ ಮಾಡಲಾಯಿತು.</p><p>ಚಿರತೆ ಭದ್ರಾ ಕೆಲ ದಿನಗಳಿಂದ ಕಾಲುಗಳ ಸ್ವಾಧೀನವಿಲ್ಲದೇ ಓಡಾಡಲು ಸಾಧ್ಯವಿಲ್ಲದಂತಾಗಿತ್ತು. ಅದು ಬೆನ್ನು ಹುರಿಗೆ ಪೆಟ್ಟು ಬಿದ್ದು ಇಲ್ಲವೇ ಯಾವುದಾದರೂ ಸೋಂಕಿಗೆ ತುತ್ತಾಗಿ ಅನಾರೋಗ್ಯ ಪೀಡಿತವಾಗಿದೆಯೇ ಎಂಬುದನ್ನು ದೃಢಪಡಿಸಿಕೊಳ್ಳಲು ವೈದ್ಯರು ಎಂಆರ್ಐ ಸ್ಕ್ಯಾನ್ ಗೆ ಶಿಫಾರಸು ಮಾಡಿದ್ದರು.</p><p>ಚಿರತೆಯ ಎಂಆರ್ಐ ಸ್ಕ್ಯಾನ್ ಮಾಡಲು ನಂಜಪ್ಪ ಆಸ್ಪತ್ರೆಯ ಆಡಳಿತ ಒಪ್ಪಿಗೆ ಸೂಚಿಸಿತ್ತು. ಹಗಲು ಹೊತ್ತು ರೋಗಿಗಳು, ಆಸ್ಪತ್ರೆಯ ಸಿಬ್ಬಂದಿ ಹೆದರಿಕೊಳ್ಳಬಹುದು ಎಂಬ ಕಾರಣಕ್ಕೆ ತಡರಾತ್ರಿ ಚಿರತೆಯನ್ನು ಆಸ್ಪತ್ರೆಗೆ ಕರೆತರಲು ಮೃಗಾಲಯ ಪ್ರಾಧಿಕಾರ ನಿರ್ಧರಿಸಿತ್ತು.</p><p>ಅದರಂತೆ ಹುಲಿ-ಸಿಂಹ ಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಕೆ.ವಿ.ಅಮರಾಕ್ಷರ ಹಾಗೂ ವನ್ಯಜೀವಿ ವೈದ್ಯ ಡಾ.ಮುರಳಿಮೋಹನ್ ನೇತೃತ್ವದ ತಂಡ ಚಿರತೆಯನ್ನು ಆಸ್ಪತ್ರೆಗೆ ಕರೆತಂದಿತ್ತು. ಒಂದೂವರೆ ಗಂಟೆ ಅವಧಿಗೆ ಚಿರತೆಗೆ ಅರೆವಳಿಕೆ ಮದ್ದು ನೀಡಿ ಪ್ರಜ್ಞೆ ತಪ್ಪಿಸಿ ನಂತರ ಎಂಆರ್ ಐ ಸ್ಕ್ಯಾನ್ ಗೆ ಒಳಪಡಿಸಲಾಯಿತು. ಆಸ್ಪತ್ರೆಯ ರೇಡಿಯಾಲಜಿ ವಿಭಾಗದ ತಜ್ಞರು, ಸಿಬ್ಬಂದಿ ಹೀಗೊಂದು ವಿಶಿಷ್ಟ ಪ್ರಯೋಗಕ್ಕೆ ಸಹಕರಿಸಿದರು.</p><p>'ಚಿರತೆಯನ್ನು ಪರೀಕ್ಷೆಗೆ ಒಳಪಡಿಸಿದ್ದರಿಂದ ಅದಕ್ಕೆ ವಯೋಸಹಜವಾಗಿಯೇ ಪಾರ್ಶ್ವವಾಯು ತಗುಲಿರುವುದು ಗೊತ್ತಾಗಿದೆ. ಯಾವುದೇ ಪೆಟ್ಟು ಬಿದ್ದಿರುವ, ಸೋಂಕಿನ ಕುರುಹು ಕಂಡುಬಂದಿಲ್ಲ. ಅದರ ಆರೋಗ್ಯ ಸ್ಥಿರವಾಗಿದ್ದು, ಹುಲಿ-ಸಿಂಹಧಾಮದ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಿದ್ದೇವೆ' ಎಂದು ವೈದ್ಯ ಡಾ.ಮುರಳಿಮೋಹನ್ 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಪಾರ್ಶ್ವವಾಯುಗೆ ತುತ್ತಾಗಿ ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದ ಇಲ್ಲಿನ ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮದ ಚಿರತೆ ಭದ್ರಾಗೆ (15) ಚಿಕಿತ್ಸೆಯ ಭಾಗವಾಗಿ ಶುಕ್ರವಾರ ತಡರಾತ್ರಿ ಇಲ್ಲಿನ ನಂಜಪ್ಪ ಆಸ್ಪತ್ರೆಯಲ್ಲಿ ಎಂಆರ್ಐ ಸ್ಕ್ಯಾನ್ ಮಾಡಲಾಯಿತು.</p><p>ಚಿರತೆ ಭದ್ರಾ ಕೆಲ ದಿನಗಳಿಂದ ಕಾಲುಗಳ ಸ್ವಾಧೀನವಿಲ್ಲದೇ ಓಡಾಡಲು ಸಾಧ್ಯವಿಲ್ಲದಂತಾಗಿತ್ತು. ಅದು ಬೆನ್ನು ಹುರಿಗೆ ಪೆಟ್ಟು ಬಿದ್ದು ಇಲ್ಲವೇ ಯಾವುದಾದರೂ ಸೋಂಕಿಗೆ ತುತ್ತಾಗಿ ಅನಾರೋಗ್ಯ ಪೀಡಿತವಾಗಿದೆಯೇ ಎಂಬುದನ್ನು ದೃಢಪಡಿಸಿಕೊಳ್ಳಲು ವೈದ್ಯರು ಎಂಆರ್ಐ ಸ್ಕ್ಯಾನ್ ಗೆ ಶಿಫಾರಸು ಮಾಡಿದ್ದರು.</p><p>ಚಿರತೆಯ ಎಂಆರ್ಐ ಸ್ಕ್ಯಾನ್ ಮಾಡಲು ನಂಜಪ್ಪ ಆಸ್ಪತ್ರೆಯ ಆಡಳಿತ ಒಪ್ಪಿಗೆ ಸೂಚಿಸಿತ್ತು. ಹಗಲು ಹೊತ್ತು ರೋಗಿಗಳು, ಆಸ್ಪತ್ರೆಯ ಸಿಬ್ಬಂದಿ ಹೆದರಿಕೊಳ್ಳಬಹುದು ಎಂಬ ಕಾರಣಕ್ಕೆ ತಡರಾತ್ರಿ ಚಿರತೆಯನ್ನು ಆಸ್ಪತ್ರೆಗೆ ಕರೆತರಲು ಮೃಗಾಲಯ ಪ್ರಾಧಿಕಾರ ನಿರ್ಧರಿಸಿತ್ತು.</p><p>ಅದರಂತೆ ಹುಲಿ-ಸಿಂಹ ಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಕೆ.ವಿ.ಅಮರಾಕ್ಷರ ಹಾಗೂ ವನ್ಯಜೀವಿ ವೈದ್ಯ ಡಾ.ಮುರಳಿಮೋಹನ್ ನೇತೃತ್ವದ ತಂಡ ಚಿರತೆಯನ್ನು ಆಸ್ಪತ್ರೆಗೆ ಕರೆತಂದಿತ್ತು. ಒಂದೂವರೆ ಗಂಟೆ ಅವಧಿಗೆ ಚಿರತೆಗೆ ಅರೆವಳಿಕೆ ಮದ್ದು ನೀಡಿ ಪ್ರಜ್ಞೆ ತಪ್ಪಿಸಿ ನಂತರ ಎಂಆರ್ ಐ ಸ್ಕ್ಯಾನ್ ಗೆ ಒಳಪಡಿಸಲಾಯಿತು. ಆಸ್ಪತ್ರೆಯ ರೇಡಿಯಾಲಜಿ ವಿಭಾಗದ ತಜ್ಞರು, ಸಿಬ್ಬಂದಿ ಹೀಗೊಂದು ವಿಶಿಷ್ಟ ಪ್ರಯೋಗಕ್ಕೆ ಸಹಕರಿಸಿದರು.</p><p>'ಚಿರತೆಯನ್ನು ಪರೀಕ್ಷೆಗೆ ಒಳಪಡಿಸಿದ್ದರಿಂದ ಅದಕ್ಕೆ ವಯೋಸಹಜವಾಗಿಯೇ ಪಾರ್ಶ್ವವಾಯು ತಗುಲಿರುವುದು ಗೊತ್ತಾಗಿದೆ. ಯಾವುದೇ ಪೆಟ್ಟು ಬಿದ್ದಿರುವ, ಸೋಂಕಿನ ಕುರುಹು ಕಂಡುಬಂದಿಲ್ಲ. ಅದರ ಆರೋಗ್ಯ ಸ್ಥಿರವಾಗಿದ್ದು, ಹುಲಿ-ಸಿಂಹಧಾಮದ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಿದ್ದೇವೆ' ಎಂದು ವೈದ್ಯ ಡಾ.ಮುರಳಿಮೋಹನ್ 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>