ಶಿವಮೊಗ್ಗ: ಲಂಬಾಣಿ, ಭೋವಿ, ಕೊರಚ, ಕೊರಮ ಜಾತಿಗಳ ವಿರುದ್ಧ ಅಪಮಾನಕರ ಹೇಳಿಕೆ ನೀಡುತ್ತಾ ಪರಿಶಿಷ್ಟ ಜಾತಿಯ ಸಹೋದರ ಸಮುದಾಯಗಳ ಏಕತೆ ಛಿದ್ರಗೊಳಿಸಲು ಹೊರಟಿರುವವರ ವಿರುದ್ಧ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿರಾಜ್ಯ ಬಂಜಾರ ವಿದ್ಯಾರ್ಥಿ ಸಂಘದಕಾರ್ಯಕರ್ತರುಬುಧವಾರ ನಗರದ ಮುಖ್ಯ ಅಂಚೆ ಕಚೇರಿ ಮುಂದೆ ಪತ್ರ ಚಳವಳಿ ನಡೆಸಿದರು.
ಸುಪ್ರೀಂಕೋರ್ಟ್ಗೆಇಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸೂಕ್ತ ಪ್ರಾಧಿಕಾರದ ಮುಂದೆ ಹಾಜರುಪಡಿಸುವಂತೆಸೂಚನೆ ನೀಡಿ ವಿಲೇವಾರಿ ಮಾಡಲಾಗಿದೆ. ನ್ಯಾಯಾಲಯದಲ್ಲಿ ವಿಚಾರಣೆ ಅಂತ್ಯಗೊಂಡಿದ್ದರೂ, ಸುಪ್ರೀಂಕೋರ್ಟ್ ಲಂಬಾಣಿ, ಭೋವಿ, ಕೊರಚ, ಕೊರಮ ಜಾತಿಗಳನ್ನು ಪರಿಶಿಷ್ಟ ಪಟ್ಟಿಯಿಂದಲೇ ಕೈಬಿಡುವಂತೆ ಆದೇಶ ನೀಡಿದೆ ಎಂದು ತಪ್ಪು ಮಾಹಿತಿಹಬ್ಬಿಸಲಾಗಿದೆ. ಆ ಮೂಲಕಸಮಾಜದಲ್ಲಿ ಸಂಘರ್ಷ ಸೃಷ್ಟಿಸಲಾಗುತ್ತಿದೆಎಂದು ಮುಖ್ಯಮಂತ್ರಿಗೆ ಬರೆದ ಪತ್ರಗಳನ್ನು ಅಂಚೆ ಪೆಟ್ಟಿಗೆಗೆ ಹಾಕಿದರು.