<p><strong>ಶಿವಮೊಗ್ಗ:</strong> ಲಂಬಾಣಿ, ಭೋವಿ, ಕೊರಚ, ಕೊರಮ ಜಾತಿಗಳ ವಿರುದ್ಧ ಅಪಮಾನಕರ ಹೇಳಿಕೆ ನೀಡುತ್ತಾ ಪರಿಶಿಷ್ಟ ಜಾತಿಯ ಸಹೋದರ ಸಮುದಾಯಗಳ ಏಕತೆ ಛಿದ್ರಗೊಳಿಸಲು ಹೊರಟಿರುವವರ ವಿರುದ್ಧ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿರಾಜ್ಯ ಬಂಜಾರ ವಿದ್ಯಾರ್ಥಿ ಸಂಘದಕಾರ್ಯಕರ್ತರುಬುಧವಾರ ನಗರದ ಮುಖ್ಯ ಅಂಚೆ ಕಚೇರಿ ಮುಂದೆ ಪತ್ರ ಚಳವಳಿ ನಡೆಸಿದರು.</p>.<p>ಸುಪ್ರೀಂಕೋರ್ಟ್ಗೆಇಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸೂಕ್ತ ಪ್ರಾಧಿಕಾರದ ಮುಂದೆ ಹಾಜರುಪಡಿಸುವಂತೆಸೂಚನೆ ನೀಡಿ ವಿಲೇವಾರಿ ಮಾಡಲಾಗಿದೆ. ನ್ಯಾಯಾಲಯದಲ್ಲಿ ವಿಚಾರಣೆ ಅಂತ್ಯಗೊಂಡಿದ್ದರೂ, ಸುಪ್ರೀಂಕೋರ್ಟ್ ಲಂಬಾಣಿ, ಭೋವಿ, ಕೊರಚ, ಕೊರಮ ಜಾತಿಗಳನ್ನು ಪರಿಶಿಷ್ಟ ಪಟ್ಟಿಯಿಂದಲೇ ಕೈಬಿಡುವಂತೆ ಆದೇಶ ನೀಡಿದೆ ಎಂದು ತಪ್ಪು ಮಾಹಿತಿಹಬ್ಬಿಸಲಾಗಿದೆ. ಆ ಮೂಲಕಸಮಾಜದಲ್ಲಿ ಸಂಘರ್ಷ ಸೃಷ್ಟಿಸಲಾಗುತ್ತಿದೆಎಂದು ಮುಖ್ಯಮಂತ್ರಿಗೆ ಬರೆದ ಪತ್ರಗಳನ್ನು ಅಂಚೆ ಪೆಟ್ಟಿಗೆಗೆ ಹಾಕಿದರು.</p>.<p>ಶಾಸಕ ಕೆ.ಬಿ.ಅಶೋಕ್ ನಾಯ್ಕ, ಸಂಘದಅಧ್ಯಕ್ಷ ಡಿ.ಆರ್. ಗಿರೀಶ್, ಪದಾಧಿಕಾರಿಗಳಾದ ಕುಮಾರ್ ನಾಯ್ಕ, ಉಮಾಮಹೇಶ್ವರ ನಾಯ್ಕ, ಜಗದೀಶ್ ನಾಯ್ಕ, ದೇವರಾಜ್ ಮಂಡೇನಕೊಪ್ಪ, ತಿಮ್ಮಾ ನಾಯ್ಕ, ಮಾಲಾ ಬಾಯಿಚಳವಳಿಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಲಂಬಾಣಿ, ಭೋವಿ, ಕೊರಚ, ಕೊರಮ ಜಾತಿಗಳ ವಿರುದ್ಧ ಅಪಮಾನಕರ ಹೇಳಿಕೆ ನೀಡುತ್ತಾ ಪರಿಶಿಷ್ಟ ಜಾತಿಯ ಸಹೋದರ ಸಮುದಾಯಗಳ ಏಕತೆ ಛಿದ್ರಗೊಳಿಸಲು ಹೊರಟಿರುವವರ ವಿರುದ್ಧ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿರಾಜ್ಯ ಬಂಜಾರ ವಿದ್ಯಾರ್ಥಿ ಸಂಘದಕಾರ್ಯಕರ್ತರುಬುಧವಾರ ನಗರದ ಮುಖ್ಯ ಅಂಚೆ ಕಚೇರಿ ಮುಂದೆ ಪತ್ರ ಚಳವಳಿ ನಡೆಸಿದರು.</p>.<p>ಸುಪ್ರೀಂಕೋರ್ಟ್ಗೆಇಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸೂಕ್ತ ಪ್ರಾಧಿಕಾರದ ಮುಂದೆ ಹಾಜರುಪಡಿಸುವಂತೆಸೂಚನೆ ನೀಡಿ ವಿಲೇವಾರಿ ಮಾಡಲಾಗಿದೆ. ನ್ಯಾಯಾಲಯದಲ್ಲಿ ವಿಚಾರಣೆ ಅಂತ್ಯಗೊಂಡಿದ್ದರೂ, ಸುಪ್ರೀಂಕೋರ್ಟ್ ಲಂಬಾಣಿ, ಭೋವಿ, ಕೊರಚ, ಕೊರಮ ಜಾತಿಗಳನ್ನು ಪರಿಶಿಷ್ಟ ಪಟ್ಟಿಯಿಂದಲೇ ಕೈಬಿಡುವಂತೆ ಆದೇಶ ನೀಡಿದೆ ಎಂದು ತಪ್ಪು ಮಾಹಿತಿಹಬ್ಬಿಸಲಾಗಿದೆ. ಆ ಮೂಲಕಸಮಾಜದಲ್ಲಿ ಸಂಘರ್ಷ ಸೃಷ್ಟಿಸಲಾಗುತ್ತಿದೆಎಂದು ಮುಖ್ಯಮಂತ್ರಿಗೆ ಬರೆದ ಪತ್ರಗಳನ್ನು ಅಂಚೆ ಪೆಟ್ಟಿಗೆಗೆ ಹಾಕಿದರು.</p>.<p>ಶಾಸಕ ಕೆ.ಬಿ.ಅಶೋಕ್ ನಾಯ್ಕ, ಸಂಘದಅಧ್ಯಕ್ಷ ಡಿ.ಆರ್. ಗಿರೀಶ್, ಪದಾಧಿಕಾರಿಗಳಾದ ಕುಮಾರ್ ನಾಯ್ಕ, ಉಮಾಮಹೇಶ್ವರ ನಾಯ್ಕ, ಜಗದೀಶ್ ನಾಯ್ಕ, ದೇವರಾಜ್ ಮಂಡೇನಕೊಪ್ಪ, ತಿಮ್ಮಾ ನಾಯ್ಕ, ಮಾಲಾ ಬಾಯಿಚಳವಳಿಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>