<p><strong>ಶಿವಮೊಗ್ಗ:</strong> ಬೆಂಗಳೂರು ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕುಂಟುತ್ತಾ ಸಾಗುತ್ತಿರುವ ನಡುವೆ, ಮಾಚೇನಹಳ್ಳಿ ಶಿಮುಲ್ ಡೈರಿ ಎದುರು ನಡೆಯುತ್ತಿರುವ ಅಂಡರ್ಪಾಸ್ ಕಾಮಗಾರಿಯಲ್ಲಿ ಮತ್ತೊಮ್ಮೆ ಭೂಕುಸಿತ ಸಂಭವಿಸಿದೆ. ಪರಿಣಾಮವಾಗಿ ವಾಹನಗಳು ಮುಂದೆ ಹೋಗಲು ಸಾಧ್ಯವಾಗದೆ, ಹಿಂದಕ್ಕೆ ತಿರುಗಲೂ ಆಗದೆ ಭಾರೀ ಸಂಚಾರ ಅಸ್ತವ್ಯಸ್ತ ಉಂಟಾಗಿದೆ.</p>.<p>ಈ ಪ್ರದೇಶದಲ್ಲಿ ಒಂದೇ ಭಾಗದಲ್ಲಿ ಸರ್ವೀಸ್ ರಸ್ತೆ ಲಭ್ಯವಿದ್ದು, ಅಲ್ಲಿ ಪದೇಪದೇ ಭೂಕುಸಿತ ಸಂಭವಿಸುತ್ತಿದೆ. ಇನ್ನೊಂದು ಭಾಗದ ಸರ್ವೀಸ್ ರಸ್ತೆ ಭೂಸ್ವಾಧೀನ ಪ್ರಕ್ರಿಯೆ ವಿಳಂಬದ ಕಾರಣದಿಂದ ಇನ್ನೂ ವಾಹನ ಸಂಚಾರಕ್ಕೆ ಮುಕ್ತವಾಗಿಲ್ಲ. ಈ ಭಾಗದಲ್ಲಿಯೂ ಭೂಕುಸಿತ ಉಂಟಾಗಿರುವುದು ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಿದೆ.</p>.<p>ಒಂದು ಭಾಗದ ರಸ್ತೆ ಕಾಮಗಾರಿ ಪೂರ್ಣಗೊಳಿಸದೇ ಮತ್ತೊಂದು ಕೆಲಸ ಕೈಗೊಳ್ಳುತ್ತಿರುವುದೇ ಈ ಅವಘಡಗಳಿಗೆ ಕಾರಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರು ಕಡೆಗೆ ಸಂಚರಿಸುವ ಬಹುಪಾಲು ವಾಹನಗಳು ಇದೇ ಮಾರ್ಗವನ್ನು ಅವಲಂಬಿಸಿರುವುದರಿಂದ ಇಲ್ಲಿ ವಾಹನಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ.</p>.<p>ಈ ಅಂಡರ್ಪಾಸ್ ಕಾಮಗಾರಿ ನಾಲ್ಕು ವರ್ಷಗಳ ಹಿಂದೆ ಆರಂಭಗೊಂಡಿದ್ದರೂ ಇದುವರೆಗೆ ಪೂರ್ಣಗೊಳ್ಳದಿರುವುದು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಮುಂದಿನ ಮಳೆಗಾಲದೊಳಗೂ ಕಾಮಗಾರಿ ಮುಗಿಯುವ ಲಕ್ಷಣಗಳು ಕಾಣಿಸುತ್ತಿಲ್ಲ ಎಂದು ವಾಹನ ಸವಾರರು ತಿಳಿಸಿದ್ದಾರೆ.</p>.<p>ಈ ಹಿಂದೆ ಶಿಮುಲ್ ಡೈರಿ ಎದುರು ಭೂಕುಸಿತ ಸಂಭವಿಸಿ ಕಲ್ಲು-ಮಣ್ಣು ತುಂಬಿ ತಾತ್ಕಾಲಿಕವಾಗಿ ಬಿಗಿ ಮಾಡಲಾಗಿತ್ತು. ಆದರೆ ಇದೀಗ ಮತ್ತೆ ಭೂಕುಸಿತ ಸಂಭವಿಸಿರುವುದರಿಂದ ದೊಡ್ಡ ವಾಹನಗಳು ಬಂದಾಗ ಎದುರಿನಿಂದ ವಾಹನಗಳು ಮುಂದೆ ಸಾಗಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ನಾಲ್ಕು ವರ್ಷಗಳಿಂದ ವಿಳಂಬವಾಗುತ್ತಿರುವ ಈ ಕಾಮಗಾರಿಯ ಬಗ್ಗೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಬೆಂಗಳೂರು ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕುಂಟುತ್ತಾ ಸಾಗುತ್ತಿರುವ ನಡುವೆ, ಮಾಚೇನಹಳ್ಳಿ ಶಿಮುಲ್ ಡೈರಿ ಎದುರು ನಡೆಯುತ್ತಿರುವ ಅಂಡರ್ಪಾಸ್ ಕಾಮಗಾರಿಯಲ್ಲಿ ಮತ್ತೊಮ್ಮೆ ಭೂಕುಸಿತ ಸಂಭವಿಸಿದೆ. ಪರಿಣಾಮವಾಗಿ ವಾಹನಗಳು ಮುಂದೆ ಹೋಗಲು ಸಾಧ್ಯವಾಗದೆ, ಹಿಂದಕ್ಕೆ ತಿರುಗಲೂ ಆಗದೆ ಭಾರೀ ಸಂಚಾರ ಅಸ್ತವ್ಯಸ್ತ ಉಂಟಾಗಿದೆ.</p>.<p>ಈ ಪ್ರದೇಶದಲ್ಲಿ ಒಂದೇ ಭಾಗದಲ್ಲಿ ಸರ್ವೀಸ್ ರಸ್ತೆ ಲಭ್ಯವಿದ್ದು, ಅಲ್ಲಿ ಪದೇಪದೇ ಭೂಕುಸಿತ ಸಂಭವಿಸುತ್ತಿದೆ. ಇನ್ನೊಂದು ಭಾಗದ ಸರ್ವೀಸ್ ರಸ್ತೆ ಭೂಸ್ವಾಧೀನ ಪ್ರಕ್ರಿಯೆ ವಿಳಂಬದ ಕಾರಣದಿಂದ ಇನ್ನೂ ವಾಹನ ಸಂಚಾರಕ್ಕೆ ಮುಕ್ತವಾಗಿಲ್ಲ. ಈ ಭಾಗದಲ್ಲಿಯೂ ಭೂಕುಸಿತ ಉಂಟಾಗಿರುವುದು ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಿದೆ.</p>.<p>ಒಂದು ಭಾಗದ ರಸ್ತೆ ಕಾಮಗಾರಿ ಪೂರ್ಣಗೊಳಿಸದೇ ಮತ್ತೊಂದು ಕೆಲಸ ಕೈಗೊಳ್ಳುತ್ತಿರುವುದೇ ಈ ಅವಘಡಗಳಿಗೆ ಕಾರಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರು ಕಡೆಗೆ ಸಂಚರಿಸುವ ಬಹುಪಾಲು ವಾಹನಗಳು ಇದೇ ಮಾರ್ಗವನ್ನು ಅವಲಂಬಿಸಿರುವುದರಿಂದ ಇಲ್ಲಿ ವಾಹನಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ.</p>.<p>ಈ ಅಂಡರ್ಪಾಸ್ ಕಾಮಗಾರಿ ನಾಲ್ಕು ವರ್ಷಗಳ ಹಿಂದೆ ಆರಂಭಗೊಂಡಿದ್ದರೂ ಇದುವರೆಗೆ ಪೂರ್ಣಗೊಳ್ಳದಿರುವುದು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಮುಂದಿನ ಮಳೆಗಾಲದೊಳಗೂ ಕಾಮಗಾರಿ ಮುಗಿಯುವ ಲಕ್ಷಣಗಳು ಕಾಣಿಸುತ್ತಿಲ್ಲ ಎಂದು ವಾಹನ ಸವಾರರು ತಿಳಿಸಿದ್ದಾರೆ.</p>.<p>ಈ ಹಿಂದೆ ಶಿಮುಲ್ ಡೈರಿ ಎದುರು ಭೂಕುಸಿತ ಸಂಭವಿಸಿ ಕಲ್ಲು-ಮಣ್ಣು ತುಂಬಿ ತಾತ್ಕಾಲಿಕವಾಗಿ ಬಿಗಿ ಮಾಡಲಾಗಿತ್ತು. ಆದರೆ ಇದೀಗ ಮತ್ತೆ ಭೂಕುಸಿತ ಸಂಭವಿಸಿರುವುದರಿಂದ ದೊಡ್ಡ ವಾಹನಗಳು ಬಂದಾಗ ಎದುರಿನಿಂದ ವಾಹನಗಳು ಮುಂದೆ ಸಾಗಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ನಾಲ್ಕು ವರ್ಷಗಳಿಂದ ವಿಳಂಬವಾಗುತ್ತಿರುವ ಈ ಕಾಮಗಾರಿಯ ಬಗ್ಗೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>