<p><strong>ಶಿವಮೊಗ್ಗ:</strong> ಇಲ್ಲಿನ ಸಾಗರ ರಸ್ತೆಯ ಸರ್ಕ್ಯೂಟ್ ಹೌಸ್ ವೃತ್ತದಲ್ಲಿ ಬುಧವಾರ ಬೆಳಗಿನ ಜಾವ ಬೈಕ್ ಹಾಗೂ ನಂದಿನಿ ಹಾಲು ಸಾಗಣೆ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. </p><p>ಬೈಕ್ ಮತ್ತು ನಂದಿನಿ ಹಾಲಿನ ವಾಹನ ಮುಖಾಮುಖಿ ಡಿಕ್ಕಿಯಾಗಿವೆ.</p><p>ಬೈಕ್ ನಲ್ಲಿದ್ದ ಇಲ್ಲಿನ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್) ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಾದ ಉಡುಪಿಯ ಆದಿತ್ಯ (22) ಮತ್ತು ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನ ಸುರಹೊನ್ನೆಯ ಸಂದೀಪ್ (22) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p><p>ರಸ್ತೆಯ ಮೇಲೆ ರಕ್ತ ಮಡುವಿನಲ್ಲಿ ಒಬ್ಬರ ಮೇಲೊಬ್ಬರು ಬಿದ್ದು ಸಾವಿಗೀಡಾಗಿರುವುದು ಹಾಗೂ ವಾಹನದಲ್ಲಿದ್ದ ಹಾಲಿನ ಕ್ರೇಟ್ಗಳೆಲ್ಲ ಕೆಳಗೆ ಬಿದ್ದು ಪ್ಯಾಕೆಟ್ಗಳು ಒಡೆದು ಹಾಲು ರಸ್ತೆಯ ಮೇಲೆ ಹರಿದಿದ್ದು ಅಪಘಾತದ ಭೀಕರತೆಯನ್ನು ಬಿಂಬಿಸುತ್ತಿತ್ತು.</p><p>ವಿದ್ಯಾರ್ಥಿಗಳಿಬ್ಬರೂ ಬೆಳಗಿನ ಜಾವ ಬೈಕ್ಗೆ ಸಮೀಪದ ಭಾರ್ಗವಿ ಬಂಕ್ನಲ್ಲಿ ಪೆಟ್ರೋಲ್ ತುಂಬಿಸಿಕೊಂಡು ವಾಪಸ್ ಕಾಲೇಜಿನ ಹಾಸ್ಟೆಲ್ಗೆ ಮರಳುವಾಗ ಎದುರಿಗೆ ಬಂದ ಹಾಲಿನ ವಾಹನ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.</p><p>ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಮೃತದೇಹಗಳನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಇಲ್ಲಿನ ಸಾಗರ ರಸ್ತೆಯ ಸರ್ಕ್ಯೂಟ್ ಹೌಸ್ ವೃತ್ತದಲ್ಲಿ ಬುಧವಾರ ಬೆಳಗಿನ ಜಾವ ಬೈಕ್ ಹಾಗೂ ನಂದಿನಿ ಹಾಲು ಸಾಗಣೆ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. </p><p>ಬೈಕ್ ಮತ್ತು ನಂದಿನಿ ಹಾಲಿನ ವಾಹನ ಮುಖಾಮುಖಿ ಡಿಕ್ಕಿಯಾಗಿವೆ.</p><p>ಬೈಕ್ ನಲ್ಲಿದ್ದ ಇಲ್ಲಿನ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್) ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಾದ ಉಡುಪಿಯ ಆದಿತ್ಯ (22) ಮತ್ತು ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನ ಸುರಹೊನ್ನೆಯ ಸಂದೀಪ್ (22) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p><p>ರಸ್ತೆಯ ಮೇಲೆ ರಕ್ತ ಮಡುವಿನಲ್ಲಿ ಒಬ್ಬರ ಮೇಲೊಬ್ಬರು ಬಿದ್ದು ಸಾವಿಗೀಡಾಗಿರುವುದು ಹಾಗೂ ವಾಹನದಲ್ಲಿದ್ದ ಹಾಲಿನ ಕ್ರೇಟ್ಗಳೆಲ್ಲ ಕೆಳಗೆ ಬಿದ್ದು ಪ್ಯಾಕೆಟ್ಗಳು ಒಡೆದು ಹಾಲು ರಸ್ತೆಯ ಮೇಲೆ ಹರಿದಿದ್ದು ಅಪಘಾತದ ಭೀಕರತೆಯನ್ನು ಬಿಂಬಿಸುತ್ತಿತ್ತು.</p><p>ವಿದ್ಯಾರ್ಥಿಗಳಿಬ್ಬರೂ ಬೆಳಗಿನ ಜಾವ ಬೈಕ್ಗೆ ಸಮೀಪದ ಭಾರ್ಗವಿ ಬಂಕ್ನಲ್ಲಿ ಪೆಟ್ರೋಲ್ ತುಂಬಿಸಿಕೊಂಡು ವಾಪಸ್ ಕಾಲೇಜಿನ ಹಾಸ್ಟೆಲ್ಗೆ ಮರಳುವಾಗ ಎದುರಿಗೆ ಬಂದ ಹಾಲಿನ ವಾಹನ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.</p><p>ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಮೃತದೇಹಗಳನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>