<p>ತೀರ್ಥಹಳ್ಳಿ: ‘ಆರಗದ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಅಂಕಾಲಜಿ (ಎಂಐಒ) ಕ್ಯಾನ್ಸರ್ ಆಸ್ಪತ್ರೆಯಲ್ಲಿ ಮ್ಯಾಮೋಗ್ರಫಿ ಘಟಕ ಉದ್ಘಾಟನಾ ಸಮಾರಂಭ ಮೇ 16ರಂದು ಬೆಳಿಗ್ಗೆ ಹಮ್ಮಿಕೊಳ್ಳಲಾಗಿದೆ’ ಎಂದು ವೈದ್ಯ ಸುಹಾಸ್ ವಿ. ನಾವಡ ತಿಳಿಸಿದರು.</p>.<p>‘ಗ್ರಾಮೀಣ ಪ್ರದೇಶದ ಜನರಿಗಾಗಿ ವಿಶೇಷ ಕ್ಯಾನ್ಸರ್ ಚಿಕಿತ್ಸೆ ನೀಡುವುದು ನಮ್ಮ ಗುರಿ. ವಿಶ್ವದರ್ಜೆಯ ಕ್ಯಾನ್ಸರ್ ಸ್ಕ್ರೀನಿಂಗ್ ವ್ಯವಸ್ಥೆ ಪರಿಚಯಿಸುತ್ತಿದ್ದು, ಅತ್ಯಂತ ಕಡಿಮೆ ದರದಲ್ಲಿ ಮಹಿಳೆಯರು ಮತ್ತು ಪುರುಷರು ಇದರ ಲಾಭ ಪಡೆಯಬಹುದಾಗಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಮಹಿಳೆಯರು ಸ್ತನ, ಗರ್ಭಕಂಠ, ತಲೆ, ಕುತ್ತಿಗೆ ಕ್ಯಾನ್ಸರ್ ತಪಾಸಣೆ ಮಾಡಿಸಿಕೊಳ್ಳಲು ಅನುಕೂಲವಾಗುತ್ತದೆ. ಪುರುಷರಿಗೆ ತಲೆ, ಕುತ್ತಿಗೆ, ಪ್ರೊಸ್ಟೇಟ್ ಹಾಗೂ ಕೊಲೋರೆಕ್ಟರ್ ಕ್ಯಾನ್ಸರ್ ತಪಾಸಣೆ ಇದರಿಂದ ಮಾಡಿಸಿಕೊಳ್ಳಬಹುದು. ಇದರಿಂದ ಸುಲಭವಾಗಿ ಕ್ಯಾನ್ಸರ್ ಸಂಬಂಧಿತ ಹುಣ್ಣುಗಳು ಇದ್ದರೆ ಪತ್ತೆ ಹಚ್ಚಬಹುದಾಗಿದೆ’ ಎಂದರು.</p>.<p>‘ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ಮತ್ತು ಎಂಐಒ ಆಸ್ಪತ್ರೆ ಸಹಯೋಗದಲ್ಲಿ ಗ್ರಾಮೀಣ ಭಾಗದ ಜನರಿಗೆ ಕ್ಯಾನ್ಸರ್ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಸಂಸ್ಥೆಯ ಜೊತೆಗೂಡಿ ಹಲವರಿಗೆ ಉಚಿತ ಕ್ಯಾನ್ಸರ್ ಚಿಕಿತ್ಸೆ ನೀಡಿದ್ದೇವೆ’ ಎಂದು ಟ್ರಸ್ಟಿ ವಿನೂತ್ ಮುರುಳೀಧರ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-42-1090809277</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೀರ್ಥಹಳ್ಳಿ: ‘ಆರಗದ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಅಂಕಾಲಜಿ (ಎಂಐಒ) ಕ್ಯಾನ್ಸರ್ ಆಸ್ಪತ್ರೆಯಲ್ಲಿ ಮ್ಯಾಮೋಗ್ರಫಿ ಘಟಕ ಉದ್ಘಾಟನಾ ಸಮಾರಂಭ ಮೇ 16ರಂದು ಬೆಳಿಗ್ಗೆ ಹಮ್ಮಿಕೊಳ್ಳಲಾಗಿದೆ’ ಎಂದು ವೈದ್ಯ ಸುಹಾಸ್ ವಿ. ನಾವಡ ತಿಳಿಸಿದರು.</p>.<p>‘ಗ್ರಾಮೀಣ ಪ್ರದೇಶದ ಜನರಿಗಾಗಿ ವಿಶೇಷ ಕ್ಯಾನ್ಸರ್ ಚಿಕಿತ್ಸೆ ನೀಡುವುದು ನಮ್ಮ ಗುರಿ. ವಿಶ್ವದರ್ಜೆಯ ಕ್ಯಾನ್ಸರ್ ಸ್ಕ್ರೀನಿಂಗ್ ವ್ಯವಸ್ಥೆ ಪರಿಚಯಿಸುತ್ತಿದ್ದು, ಅತ್ಯಂತ ಕಡಿಮೆ ದರದಲ್ಲಿ ಮಹಿಳೆಯರು ಮತ್ತು ಪುರುಷರು ಇದರ ಲಾಭ ಪಡೆಯಬಹುದಾಗಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಮಹಿಳೆಯರು ಸ್ತನ, ಗರ್ಭಕಂಠ, ತಲೆ, ಕುತ್ತಿಗೆ ಕ್ಯಾನ್ಸರ್ ತಪಾಸಣೆ ಮಾಡಿಸಿಕೊಳ್ಳಲು ಅನುಕೂಲವಾಗುತ್ತದೆ. ಪುರುಷರಿಗೆ ತಲೆ, ಕುತ್ತಿಗೆ, ಪ್ರೊಸ್ಟೇಟ್ ಹಾಗೂ ಕೊಲೋರೆಕ್ಟರ್ ಕ್ಯಾನ್ಸರ್ ತಪಾಸಣೆ ಇದರಿಂದ ಮಾಡಿಸಿಕೊಳ್ಳಬಹುದು. ಇದರಿಂದ ಸುಲಭವಾಗಿ ಕ್ಯಾನ್ಸರ್ ಸಂಬಂಧಿತ ಹುಣ್ಣುಗಳು ಇದ್ದರೆ ಪತ್ತೆ ಹಚ್ಚಬಹುದಾಗಿದೆ’ ಎಂದರು.</p>.<p>‘ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ಮತ್ತು ಎಂಐಒ ಆಸ್ಪತ್ರೆ ಸಹಯೋಗದಲ್ಲಿ ಗ್ರಾಮೀಣ ಭಾಗದ ಜನರಿಗೆ ಕ್ಯಾನ್ಸರ್ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಸಂಸ್ಥೆಯ ಜೊತೆಗೂಡಿ ಹಲವರಿಗೆ ಉಚಿತ ಕ್ಯಾನ್ಸರ್ ಚಿಕಿತ್ಸೆ ನೀಡಿದ್ದೇವೆ’ ಎಂದು ಟ್ರಸ್ಟಿ ವಿನೂತ್ ಮುರುಳೀಧರ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-42-1090809277</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>