<p><strong>ಶಿವಮೊಗ್ಗ:</strong> ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ಯಶಸ್ವಿಯಾಗಿ ನಡೆದಿದೆ. ಇದಕ್ಕಾಗಿ ಸಹಕರಿಸಿದ ಎಲ್ಲರಿಗೂ ಅಭಿನಂದನೆಗಳು. ನಗರದಲ್ಲಿ ಸೆ.22ರಂದು ಈದ್ಮಿಲಾದ್ ಮೆರವಣಿಗೆ ಇದೆ. ಅದು ಕೂಡ ಶಾಂತಿಯುತವಾಗಿ ನಡೆಯಲಿ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಆಶಿಸಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಸಮಾಜದ ಮುಖಂಡರು, ಸಂಘ ಸಂಸ್ಥೆಗಳು ಜವಾಬ್ದಾರಿಯುತವಾಗಿ ವರ್ತಿಸಿದ್ದಾರೆ. ಒಂದು ಪರಂಪರೆಯೇ ವಿಜೃಂಭಿಸಿದೆ. ಮುಂಜಾನೆ 4.16ಕ್ಕೆ ಭೀಮನಮಡುವಿನಲ್ಲಿ ಗಣಪತಿ ವಿಸರ್ಜನೆ ನಡೆಯಿತು ಎಂದರು.<br><br>ಮುಖ್ಯವಾಗಿ ಪಕ್ಷಬೇಧ ಮರೆತು ಈ ಉತ್ಸವದಲ್ಲಿ ಎಲ್ಲರೂ ಪಾಲ್ಗೊಂಡಿದ್ದರು. ಜಿಲ್ಲಾಡಳಿತ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯಲಿಲ್ಲ ಎಂದರು.<br><br>ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಮೋಹನ್ರೆಡ್ಡಿ, ಎನ್.ಜೆ.ನಾಗರಾಜ್, ಜ್ಞಾನೇಶ್ವರ್, ದೀನದಯಾಳ್, ಮುರುಳಿ, ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ಯಶಸ್ವಿಯಾಗಿ ನಡೆದಿದೆ. ಇದಕ್ಕಾಗಿ ಸಹಕರಿಸಿದ ಎಲ್ಲರಿಗೂ ಅಭಿನಂದನೆಗಳು. ನಗರದಲ್ಲಿ ಸೆ.22ರಂದು ಈದ್ಮಿಲಾದ್ ಮೆರವಣಿಗೆ ಇದೆ. ಅದು ಕೂಡ ಶಾಂತಿಯುತವಾಗಿ ನಡೆಯಲಿ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಆಶಿಸಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಸಮಾಜದ ಮುಖಂಡರು, ಸಂಘ ಸಂಸ್ಥೆಗಳು ಜವಾಬ್ದಾರಿಯುತವಾಗಿ ವರ್ತಿಸಿದ್ದಾರೆ. ಒಂದು ಪರಂಪರೆಯೇ ವಿಜೃಂಭಿಸಿದೆ. ಮುಂಜಾನೆ 4.16ಕ್ಕೆ ಭೀಮನಮಡುವಿನಲ್ಲಿ ಗಣಪತಿ ವಿಸರ್ಜನೆ ನಡೆಯಿತು ಎಂದರು.<br><br>ಮುಖ್ಯವಾಗಿ ಪಕ್ಷಬೇಧ ಮರೆತು ಈ ಉತ್ಸವದಲ್ಲಿ ಎಲ್ಲರೂ ಪಾಲ್ಗೊಂಡಿದ್ದರು. ಜಿಲ್ಲಾಡಳಿತ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯಲಿಲ್ಲ ಎಂದರು.<br><br>ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಮೋಹನ್ರೆಡ್ಡಿ, ಎನ್.ಜೆ.ನಾಗರಾಜ್, ಜ್ಞಾನೇಶ್ವರ್, ದೀನದಯಾಳ್, ಮುರುಳಿ, ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>