<p><strong>ಸಾಗರ:</strong> 34 ವರ್ಷಗಳ ನಂತರ ಶಿವಮೊಗ್ಗದ ಅಲ್ಲಮಪ್ರಭು ಬಯಲಿನ ಮಾನವಧರ್ಮ ಮಂಟಪದಲ್ಲಿ ಮೇ 17ರಂದು ಸಂಜೆ 6ಕ್ಕೆ ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ, ಧರ್ಮ ಜಾಗೃತಿ ಸಮಾವೇಶ ನಡೆಯಲಿದೆ ಎಂದು ಮಹೋತ್ಸವ ಸಮಿತಿ ಉಪಾಧ್ಯಕ್ಷ ರುದ್ರಮುನಿ ಸಜ್ಜನ್ ತಿಳಿಸಿದರು.</p>.<p>ಸಾರ್ವಜನಿಕ ಜೀವನದಲ್ಲಿ 50 ವರ್ಷಗಳನ್ನು ಪೂರೈಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೃತಜ್ಞತೆ ಸಮರ್ಪಣೆ ಕಾರ್ಯಕ್ರಮವೂ ನಡೆಯಲಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಬಾಳೆಹೊನ್ನೂರು ಪೀಠ, ಉಜ್ಜಿನಿ ಪೀಠ, ಕೇದಾರ ಪೀಠ, ಶ್ರೀಶೈಲ ಪೀಠ, ಕಾಶಿ ಪೀಠದ ಶ್ರೀಗಳು ಸಾನ್ನಿಧ್ಯ ವಹಿಸಲಿದ್ದಾರೆ. ಅಂದಾಜು 50,000 ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು.</p>.<p>ಪ್ರಮುಖರಾದ ಮಲ್ಲಿಕಾರ್ಜುನ, ಕೆ.ವಿ.ಪ್ರವೀಣ್, ವೀರಭದ್ರ ಜಂಬಿಗೆ, ನಂದೀಶ್, ತೇಜಸ್ವಿ, ಪ್ರವೀಣ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> 34 ವರ್ಷಗಳ ನಂತರ ಶಿವಮೊಗ್ಗದ ಅಲ್ಲಮಪ್ರಭು ಬಯಲಿನ ಮಾನವಧರ್ಮ ಮಂಟಪದಲ್ಲಿ ಮೇ 17ರಂದು ಸಂಜೆ 6ಕ್ಕೆ ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ, ಧರ್ಮ ಜಾಗೃತಿ ಸಮಾವೇಶ ನಡೆಯಲಿದೆ ಎಂದು ಮಹೋತ್ಸವ ಸಮಿತಿ ಉಪಾಧ್ಯಕ್ಷ ರುದ್ರಮುನಿ ಸಜ್ಜನ್ ತಿಳಿಸಿದರು.</p>.<p>ಸಾರ್ವಜನಿಕ ಜೀವನದಲ್ಲಿ 50 ವರ್ಷಗಳನ್ನು ಪೂರೈಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೃತಜ್ಞತೆ ಸಮರ್ಪಣೆ ಕಾರ್ಯಕ್ರಮವೂ ನಡೆಯಲಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಬಾಳೆಹೊನ್ನೂರು ಪೀಠ, ಉಜ್ಜಿನಿ ಪೀಠ, ಕೇದಾರ ಪೀಠ, ಶ್ರೀಶೈಲ ಪೀಠ, ಕಾಶಿ ಪೀಠದ ಶ್ರೀಗಳು ಸಾನ್ನಿಧ್ಯ ವಹಿಸಲಿದ್ದಾರೆ. ಅಂದಾಜು 50,000 ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು.</p>.<p>ಪ್ರಮುಖರಾದ ಮಲ್ಲಿಕಾರ್ಜುನ, ಕೆ.ವಿ.ಪ್ರವೀಣ್, ವೀರಭದ್ರ ಜಂಬಿಗೆ, ನಂದೀಶ್, ತೇಜಸ್ವಿ, ಪ್ರವೀಣ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>